BREAKING NEWS

ಚಿಕ್ಕಬಳ್ಳಾಪುರದಲ್ಲಿ ಮಾ.27ಕ್ಕೆ ವೈದ್ಯಕೀಯ ಕಾಲೇಜು ಉದ್ಘಾಟನೆ : ಸಚಿವ ಕೆ.ಸುಧಾಕರ್

ಚಿಕ್ಕಬಳ್ಳಾಪುರ‌ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 27ರಂದು ಸರಕಾರಿ ವೈದ್ಯಕೀಯ ಕಾಲೇಜು ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಜೊತೆಗೆ ಕೇಂದ್ರ ಆರೋಗ್ಯ ಸಚಿವರು, ಕಂದಾಯ ಸಚಿವರು ಮತ್ತು ವಸತಿ ಸಚಿವರು ಭಾಗಿಯಾಗಲಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.ತಾಲೂಕಿನ ಗುಂತಪ್ಪನಹಳ್ಳಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮುಖಂಡ ವೆಂಕಟೇಶ್ ಮತ್ತು ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸುಧಾಕರ್, ಕೋಲಾರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ‌ ಈ ವರೆಗೂ ಸರಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲ. ಆದರೆ 16 ವರ್ಷಗಳ ಹಿಂದೆ ರಚನೆಯಾದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಿಗೆ ಬಿಜೆಪಿ ಸರಕಾರ ವೈದ್ಯಕೀಯ ಕಾಲೇಜು ಮಂಜೂರು ಮಾಡಿದೆ ಎಂದು ಹೇಳಿದರು.

ಮೀಸಲಾತಿ ಹೆಚ್ಚಳ : ಬಿಜೆಪಿ ಸರಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳ ಮಾಡಿದೆ. ಊರಿನ ಕ್ಷೇಮ ಮತ್ತು ಅಭಿವೃದ್ಧಿಗಾಗಿ ಎಲ್ಲರೂ ಒಂದಾಗಬೇಕು. ಹಳೇ ಬೇರು, ಹೊಸ ಚಿಗುರು ಎಂಬಂತೆ ಹಳಬರು, ಹೊಸಬರು ಎಂಬ ಯಾವುದೇ ಬೇಧ ಭಾರತೀಯ ಜನತಾ ಪಕ್ಷದಲ್ಲಿಲ್ಲ. ಇದಕ್ಕೆ ಸಂಬಂಧಿಸಿದ ಒಂದು ಸಭೆಯನ್ನು ಕರೆದು ಎಲ್ಲರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಲಾಗುವುದು. ಇದರಿಂದ ಈ ಬಾರಿಯ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಹೆಚ್ಚು ಮತ ಪಡೆಯಲು ಸಹಕಾರಿಯಾಗಲಿದೆ ಎಂದು ಡಾ.ಕೆ.ಸುಧಾಕರ್‌ ಮಾಹಿತಿ ಹಂಚಿಕೊಂಡಿದ್ದಾರೆ.

ಉಚಿತ ನಿವೇಶನ ಹಕ್ಕುಪತ್ರ : ಬಡವರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಆದರೆ ಕೆಲವರು ಜಮೀನು ಎಲ್ಲಿ ಗುರುತಿಸಲಾಗಿದೆ ಎಂದು ಕೇಳುತ್ತಿದ್ದಾರೆ. ಮಾರ್ಚ್ 27ರಂದು ಹನ್ನೆರಡೂವರೆ ಸಾವಿರ ಮಂದಿಗೆ ಉಚಿತ ನಿವೇಶನ ಹಕ್ಕುಪತ್ರ ವಿತರಿಸಲಾಗುತ್ತಿದೆ. ಚಕ್ಕುಬಂದಿ ಸಮೇತ ಹಕ್ಕುಪತ್ರಗಳನ್ನು ವಿತರಿಸಲಾಗುತ್ತದೆ ಪರಿಶೀಲಿಸಿಕೊಳ್ಳಲಿ ಎಂದು ವಿರೋಧಿಸಿದವರಿಗೆ ಟಾಂಗ್ ಕೊಟ್ಟಿದ್ದಾರೆ.

lokesh

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

49 mins ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

1 hour ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

2 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

2 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

18 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

21 hours ago