BREAKING NEWS

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ, ಮಾತುಕತೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳಲು ಕೇವಲ ಒಂದೇ ದಿನ ಬಾಕಿ ಇದೆ. ಈ ನಡುವಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಈ ಬಾರಿ ಬಹುಮತದ ಮೂಲಕ ಸರ್ಕಾರ ರಚನೆ ಮಾಡುವುದು ಖಚಿತ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದು, ನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಸಭೆ ಹಿನ್ನೆಲೆಯಲ್ಲಿ ಖರ್ಗೆಯವರ ನಿವಾಸಕ್ಕೆ ಡಿಕೆ.ಶಿವಕುಮಾರ್ ಅವರು ಭೇಟಿ ನೀಡಿದ್ದಾರೆ. ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ಅಧ್ಯಕ್ಷನಾಗಿ ನಿದ್ದೆ ಮಾಡಿಲ್ಲ, ನಿದ್ದೆ ಮಾಡಲು ಬಿಟ್ಟಿಲ್ಲ ಎಂದು ಹೇಳಿದರು.

ನನಗೆ ಎಕ್ಸಿಟ್ ಪೋಲ್ ಮೇಲೆ ನಂಬಿಕೆ ಇಲ್ಲ. ನನ್ನ ಸಂಖ್ಯೆ 141. ಎಕ್ಸಿಟ್ ಪೋಲ್​ನ ಸಂಖ್ಯೆ ಬಹಳ ಕಡಿಮೆ ಇದೆ. ನಮ್ಮ ಎಕ್ಸಿಟ್ ಪೋಲ್ ಸ್ಯಾಂಪಲ್ಸ್ ಹೆಚ್ಚಿದೆ. ಕಾಂಗ್ರೆಸ್ ಪರವಾಗಿ ದೊಡ್ಡ ಅಲೆ ಇದೆ. ಮೊದಲು ಹೆಚ್ಚು ತೋರಿಸಿದವರು 20 ಸೀಟ್ ಆಮೇಲೆ ಕಡಿಮೆ ತೋರಿಸಿದರು ಎಂದು ತಿಳಿಸಿದರು.

ಯಾವ ಕಾರಣಕ್ಕೂ ಸಂಖ್ಯೆ ಕಡಿಮೆಯಾಗುವುದಿಲ್ಲ. ನಿಚ್ಚಳವಾದ ಬಹುಮತ ಕಾಂಗ್ರೆಸ್ ಪಕ್ಷಕ್ಕೆ ಬರುತ್ತದೆ. ಬ್ಯಾಲೆಟ್ ಇಸ್ ಸ್ಟ್ರಾಂಗರ್ ದೆನ್ ದಿ ಬುಲೆಟ್. ಈ ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವಾಗ ಜನ ಹೇಗೆ ಬುಲೆಟ್​ಗೆ ಹೆದರಲಿಲ್ಲವೋ, ಹಾಗೆ ಜನ ಈ ಬಾರಿ ಆಸೆ ಆಮಿಷಗಳಿಗೆ ಮನ್ನಣೆ ನೀಡಿಲ್ಲ. ನಾಳೆ ಒಂದು ಗಂಟೆ ಅಷ್ಟೊತ್ತಿಗೆ ಎಲ್ಲ ತೀರ್ಪು ಹೊರಬರಲಿದೆ ಎಂದರು.

ನು ಜೆಡಿಎಸ್​ ಪಕ್ಷದ ಜೊತೆಗಿನ ಮೈತ್ರಿಯ ಬಗ್ಗೆ ಮಾತನಾಡಿ, ಎಚ್ಡಿಕೆ ಏನು ಹೇಳುತ್ತಾರೆ, ಮಾಡುತ್ತಾರೆಂಬುದು ಗೊತ್ತಿಲ್ಲ. ಮೈತ್ರಿ ಬಗ್ಗೆ ಎಚ್​ಡಿಕೆ ಮಾತು ಗೊತ್ತಿಲ್ಲ. ಕುಮಾರಣ್ಣನ ಕಾರ್ಯಕರ್ತರಿಗೆ ಧೈರ್ಯ ತುಂಬಬೇಕು, ಹಾಗಾಗಿ ಮಾತನಾಡುತ್ತಾರೆ. ನಾನಂತೂ ಹೋರಾಟ ಮಾಡುವವನು, ಈಗಲೇ ರಿಟೈರ್ ಆಗುವವನಲ್ಲ. ಕೊನೆ ಉಸಿರು ಇರುವವರೆಗೂ ಹೋರಾಟ ಮಾಡುವವನು. ಬಂದು ನನ್ನ ಸೇರಿಕೊಳ್ಳಿ ಎಂದು ಜೆಡಿಎಸ್ ನಾಯಕರು ಕಾರ್ಯಕರ್ತರಿಗೆ ಹೇಳುತ್ತೇನೆಂದು ಹೇಳಿದರು.

ರೆಸಾರ್ಟ್​ ರಾಜಕಾರಣ ಕುರಿತು ಪ್ರತಿಕ್ರಿಯಿಸಿ, ಎಷ್ಟೇ ನಂಬರ್ ಬಂದರೂ ಸರ್ಕಾರ ಮಾಡುತ್ತೇವೆಂದು ಹೇಳುತ್ತಾರಲ್ಲ, ಎಲ್ಲಾ ಪಕ್ಷದವರು ಅವರವರ ಶಾಸಕರನ್ನು ಹಿಡಿದಿಟ್ಟುಕೊಳುತ್ತಾರೆ. ಯಾವ ಅಧಿಕಾರ ಹಂಚಿಕೆಯ ಮಾತೂ ಇಲ್ಲ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಏನು ಹೇಳುತ್ತಾರೋ ಹಾಗೆ ಕೇಳುತ್ತೇವೆ ಎಂದು ತಿಳಿಸಿದರು.

ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ ಕರ್ನಾಟಕದ 6.5 ಕೋಟಿ ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಫಲಿತಾಂಶ ಹೊರಬೀಳುವವರೆಗೆ ನಾಳೆಯವರೆಗೆ ಕಾಯೋಣ. ಈಗಾಗಲೇ ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ. ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸುತ್ತದೆ. ನಾವು ಕರ್ನಾಟಕದ ಜನರ ಸೇವೆ ಮಾಡುತ್ತೇವೆಂದು ಹೇಳಿದರು.

andolanait

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

8 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

12 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

12 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

13 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

13 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

14 hours ago