BREAKING NEWS

ಬಜೆಟ್‌ನಲ್ಲಿ ಮೇಕೆದಾಟು ಯೋಜನೆ ಪ್ರಸ್ತಾಪ ಕೆಟ್ಟ ಯೋಜನೆಯಾಗಿದೆ: ನಟ ಚೇತನ್‌

ಬೆಂಗಳೂರು: ಕಾವೇರಿ ನೀರಿನ ವಿಚಾರಕ್ಕೆ ತಮಿಳುನಾಡಿನೊಂದಿಗೆ ನಡೆಯುವ ಮುಸುಕಿನ ಗುದ್ದಾಟ ಇಂದು ನಿನ್ನೆಯದಲ್ಲ. ಕಳೆದ ಹಲವು ದಶಕಗಳಿಂದಲೇ ನಡೆಯುತ್ತಲೇ ಬಂದಿದೆ. ಆದರೆ, ಈವರೆಗೂ ತಾರ್ತಿಕ ಅಂತ್ಯ ಮಾತ್ರ ಕಂಡಿಲ್ಲ. ಈ ನಡುವೆ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರ ಮೇಕೆದಾಟು ಯೋಜನೆಯನ್ನು ಜಾರಿಗೆ ತಂದೇ ತರ್ತೀವಿ ಅನ್ನೋ ನಿರ್ಧಾರಕ್ಕೆ ಬಂದಿದೆ. ಅದಕ್ಕಾಗಿ ಇಂದು (ಜುಲೈ 7) ಮಂಡಣೆಯಾದ ಬಜೆಟ್‌ನಲ್ಲಿ ಮೇಕೆದಾಟು ಯೋಜನೆ ಸಲುವಾಗಿಯೇ ಸಾಕಷ್ಟು ಅನುದಾನವನ್ನೂ ನಿಗದಿಪಡಿಸಿದೆ.

ಈ ಯೋಜನೆ ಒಂದು ವೇಳೆ ಸಾಕಾರಗೊಂಡರೆ, ಮೇಕೆದಾಟುವಿನಿಂದ 90 ಕಿ. ಮೀ ದೂರವಿರುವ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ದಾಹ ನೀಗಲಿದೆ. ಇದೀಗ ಈ ಯೋಜನೆಯ ಅನುಷ್ಠಾನಕ್ಕೆ ಹೊಸ ಸರ್ಕಾರದ ಈ ಅವಧಿಯಲ್ಲಿ ಬಜೆಟ್‌ ಮೂಲಕ ಸಿಎಂ ಸಿದ್ದರಾಮಯ್ಯ ಅಡಿಗಲ್ಲು ಹಾಕಿದ್ದಾರೆ . ಈ ಬಗ್ಗೆ ಪರ ವಿರೋಧ ಚರ್ಚೆಗಳೂ ಮುನ್ನೆಲೆಗೆ ಬರುತ್ತಿವೆ. ಇದೀಗ ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ ಅಹಿಂಸಾ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಇದೊಂದು ಕೆಟ್ಟ ಯೋಜನೆ:  ರಾಜಕೀಯ ಸೇರಿ ಹಲವು ವಿಚಾರಗಳ ಬಗ್ಗೆ ಸದಾ ತಮ್ಮ ಹೇಳಿಕೆಯನ್ನು ದಾಖಲಿಸುವ ನಟ ಚೇತನ್‌ ಅಹಿಂಸಾ, ಮೇಕೆದಾಟು ಯೋಜನೆಗೆ ಈ ಸಲದ ಬಜೆಟ್‌ನಲ್ಲಿ 1000 ಕೋಟಿ ಅನುದಾನವನ್ನು ಕಾಂಗ್ರೆಸ್‌ ಸರ್ಕಾರ ಮೀಸಲಿಟ್ಟಿದೆ. ಹೀಗೆ ಮೀಸಿಲಿಟ್ಟಿದ್ದೇ ತಡ, “ಈ ಮೇಕೆದಾಟು ಯೋಜನೆಯೇ ಒಂದು ಕೆಟ್ಟ ಯೋಜನೆ, ಇದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಅಧಿಕ ಎಂದು ಚೇತನ್‌, ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

ಚೇತನ್‌ ಪೋಸ್ಟ್‌: “ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದೊಂದು ಕೆಟ್ಟ ಯೋಜನೆ. ವಿಪರ್ಯಾಸವೆಂದರೆ, ‘ಪರಿಸರ’ ಮತ್ತು ‘ಪ್ರವಾಹ ನಿರ್ವಹಣೆ’ಯೇ ನಮ್ಮ ಸರ್ಕಾರವು ಜಯಿಸಲು ಪ್ರಯತ್ನಿಸುತ್ತಿರುವ ಮುಖ್ಯ ಸವಾಲುಗಳು. ಮೇಕೆದಾಟು ಅಣೆಕಟ್ಟು ಪರಿಸರವನ್ನು ನಾಶಪಡಿಸುತ್ತದೆ. ಬೆಂಗಳೂರಿನ ಬಳಿಯ ಹಳ್ಳಿಗಳಲ್ಲಿ ಇದರಿಂದ ಪ್ರವಾಹ ಸಂಭವಿಸುತ್ತದೆ” ಎಂದು ಹೇಳಿಕೊಂಡಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago