ಬೆಂಗಳೂರು : ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ತ್ಯಾಗ ಮಾಡಿ ಬೇರೆಯವರಿಗೆ ಅವಕಾಶ ಬಿಟ್ಟುಕೊಡಲು ಮಾನಸಿಕವಾಗಿ ನಾನು ಸಿದ್ದನಿದ್ದೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಕಾಂಗ್ರೆಸ್ ಸರ್ವಸದಸ್ಯರ ಸಭೆಯಲ್ಲಿ ನೀಡಿದ ಹೇಳಿಕೆಗೆ ತಾವು ಬದ್ದವಾಗಿರುವುದಾಗಿ ಪುನರುಚ್ಚರಿಸಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಪ್ರತಿಯೊಬ್ಬರು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. 135 ಜನ ಗೆದ್ದಿದ್ದೇವೆ. ಸಂಪುಟದಲ್ಲಿ ಅವಕಾಶ ಇರುವುದು 34 ಮಂದಿಗೆ ಮಾತ್ರ. ಹೀಗಾಗಿ ಎರಡೂವರೆ ವರ್ಷದ ಬಳಿಕ ನಾವು ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.
ಮೊದಲ ಅವಧಿಯಲ್ಲಿ ಸಚಿವರು ಹಾಗೂ ನಿಗಮಮಂಡಳಿ ಅಧ್ಯಕ್ಷರಾಗಿದ್ದವರು 2ನೇ ಅವಯಲ್ಲಿ ಬೇರೆಯವರಿಗೆ ಅವಕಾಶ ಮಾಡಿಕೊಟ್ಟರೆ ಎಲ್ಲರಿಗೂ ಸಮಾಧಾನಪಡಿಸಿದಂತಾಗುತ್ತದೆ. ನಾನು ಮಾನಸಿಕವಾಗಿ ಸಿದ್ದವಾಗಿದ್ದೆ ಎಂದು ಹೇಳಿದ್ದೇನೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಕುರಿತು ಹೈಕಮಾಂಡ್ ನಿರ್ಧರಿಸುತ್ತದೆ. ಸಚಿವರಷ್ಟೇ ಅಲ್ಲ ಪಕ್ಷದ ಜಿಲ್ಲಾಧ್ಯಕ್ಷರು, ಬಹಳಷ್ಟು ಹಿರಿಯ ನಾಯಕರು ಸ್ಪರ್ಧೆ ಮಾಡುವ ಸಾಮಥ್ರ್ಯ ಹೊಂದಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಹೈಕಮಾಂಡ್ ಲೆಕ್ಕಾಚಾರದೊಂದಿಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…