BREAKING NEWS

ಬೇರೆಯವರಿಗೆ ಸಚಿವ ಸ್ಥಾನ ಬಿಟ್ಟುಕೊಡಲು ಮಾನಸಿಕವಾಗಿ ಸಿದ್ಧನಿದ್ದೇನೆ: ಮುನಿಯಪ್ಪ

ಬೆಂಗಳೂರು : ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ತ್ಯಾಗ ಮಾಡಿ ಬೇರೆಯವರಿಗೆ ಅವಕಾಶ ಬಿಟ್ಟುಕೊಡಲು ಮಾನಸಿಕವಾಗಿ ನಾನು ಸಿದ್ದನಿದ್ದೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಕಾಂಗ್ರೆಸ್ ಸರ್ವಸದಸ್ಯರ ಸಭೆಯಲ್ಲಿ ನೀಡಿದ ಹೇಳಿಕೆಗೆ ತಾವು ಬದ್ದವಾಗಿರುವುದಾಗಿ ಪುನರುಚ್ಚರಿಸಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಪ್ರತಿಯೊಬ್ಬರು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. 135 ಜನ ಗೆದ್ದಿದ್ದೇವೆ. ಸಂಪುಟದಲ್ಲಿ ಅವಕಾಶ ಇರುವುದು 34 ಮಂದಿಗೆ ಮಾತ್ರ. ಹೀಗಾಗಿ ಎರಡೂವರೆ ವರ್ಷದ ಬಳಿಕ ನಾವು ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಮೊದಲ ಅವಧಿಯಲ್ಲಿ ಸಚಿವರು ಹಾಗೂ ನಿಗಮಮಂಡಳಿ ಅಧ್ಯಕ್ಷರಾಗಿದ್ದವರು 2ನೇ ಅವಯಲ್ಲಿ ಬೇರೆಯವರಿಗೆ ಅವಕಾಶ ಮಾಡಿಕೊಟ್ಟರೆ ಎಲ್ಲರಿಗೂ ಸಮಾಧಾನಪಡಿಸಿದಂತಾಗುತ್ತದೆ. ನಾನು ಮಾನಸಿಕವಾಗಿ ಸಿದ್ದವಾಗಿದ್ದೆ ಎಂದು ಹೇಳಿದ್ದೇನೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಕುರಿತು ಹೈಕಮಾಂಡ್ ನಿರ್ಧರಿಸುತ್ತದೆ. ಸಚಿವರಷ್ಟೇ ಅಲ್ಲ ಪಕ್ಷದ ಜಿಲ್ಲಾಧ್ಯಕ್ಷರು, ಬಹಳಷ್ಟು ಹಿರಿಯ ನಾಯಕರು ಸ್ಪರ್ಧೆ ಮಾಡುವ ಸಾಮಥ್ರ್ಯ ಹೊಂದಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಹೈಕಮಾಂಡ್ ಲೆಕ್ಕಾಚಾರದೊಂದಿಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

andolanait

Recent Posts

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

2 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

2 hours ago

ಓದುಗರ ಪತ್ರ: 39 ಅಗತ್ಯ ಔಷಧಗಳ ಬೆಲೆ ಇಳಿಕೆ ಸ್ವಾಗತಾರ್ಹ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ರಮಣ್ ಕಿಶೋರ್ ಎಂಬ ‘ಗಾಂವ್ ಕಾ ಡಾಕ್ಟರ್’

ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…

2 hours ago

ದೇವಸ್ಥಾನಗಳ ಅಭಿವೃದ್ಧಿಗೆ ಧಾರ್ಮಿಕ ಪ್ರವಾಸೋದ್ಯಮ ವರದಾನ

ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…

2 hours ago

ಮಂಡ್ಯ ಜಿಲ್ಲೆಯ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…

2 hours ago