BREAKING NEWS

ಬೇರೆಯವರಿಗೆ ಸಚಿವ ಸ್ಥಾನ ಬಿಟ್ಟುಕೊಡಲು ಮಾನಸಿಕವಾಗಿ ಸಿದ್ಧನಿದ್ದೇನೆ: ಮುನಿಯಪ್ಪ

ಬೆಂಗಳೂರು : ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ತ್ಯಾಗ ಮಾಡಿ ಬೇರೆಯವರಿಗೆ ಅವಕಾಶ ಬಿಟ್ಟುಕೊಡಲು ಮಾನಸಿಕವಾಗಿ ನಾನು ಸಿದ್ದನಿದ್ದೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಕಾಂಗ್ರೆಸ್ ಸರ್ವಸದಸ್ಯರ ಸಭೆಯಲ್ಲಿ ನೀಡಿದ ಹೇಳಿಕೆಗೆ ತಾವು ಬದ್ದವಾಗಿರುವುದಾಗಿ ಪುನರುಚ್ಚರಿಸಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಪ್ರತಿಯೊಬ್ಬರು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. 135 ಜನ ಗೆದ್ದಿದ್ದೇವೆ. ಸಂಪುಟದಲ್ಲಿ ಅವಕಾಶ ಇರುವುದು 34 ಮಂದಿಗೆ ಮಾತ್ರ. ಹೀಗಾಗಿ ಎರಡೂವರೆ ವರ್ಷದ ಬಳಿಕ ನಾವು ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಮೊದಲ ಅವಧಿಯಲ್ಲಿ ಸಚಿವರು ಹಾಗೂ ನಿಗಮಮಂಡಳಿ ಅಧ್ಯಕ್ಷರಾಗಿದ್ದವರು 2ನೇ ಅವಯಲ್ಲಿ ಬೇರೆಯವರಿಗೆ ಅವಕಾಶ ಮಾಡಿಕೊಟ್ಟರೆ ಎಲ್ಲರಿಗೂ ಸಮಾಧಾನಪಡಿಸಿದಂತಾಗುತ್ತದೆ. ನಾನು ಮಾನಸಿಕವಾಗಿ ಸಿದ್ದವಾಗಿದ್ದೆ ಎಂದು ಹೇಳಿದ್ದೇನೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಕುರಿತು ಹೈಕಮಾಂಡ್ ನಿರ್ಧರಿಸುತ್ತದೆ. ಸಚಿವರಷ್ಟೇ ಅಲ್ಲ ಪಕ್ಷದ ಜಿಲ್ಲಾಧ್ಯಕ್ಷರು, ಬಹಳಷ್ಟು ಹಿರಿಯ ನಾಯಕರು ಸ್ಪರ್ಧೆ ಮಾಡುವ ಸಾಮಥ್ರ್ಯ ಹೊಂದಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಹೈಕಮಾಂಡ್ ಲೆಕ್ಕಾಚಾರದೊಂದಿಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

andolanait

Recent Posts

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

49 mins ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

1 hour ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

1 hour ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

2 hours ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

2 hours ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

2 hours ago