ಬೆಂಗಳೂರು : ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ನಲ್ಲೂರು ಹಳ್ಳಿ ಮೆಟ್ರೋ ಸ್ಟೇಷನ್ ಮಂಗಳವಾರ ಸುರಿದ ಮಳೆಗೆ ಜಲಾವೃತಗೊಂಡಿದ್ದು, ಟ್ವೀಟ್ಟರ್ನಲ್ಲಿ ಮೆಟ್ರೋ ಸ್ಟೇಷನ್ ಒಳಗಡೆ ನೀರು ನಿಂತ ಪೋಟೋ ಹಂಚಿಕೊಂಡ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಯಾಣ ಸಮಯವನ್ನು ಕಡಿತಗೊಳಿಸುವ ಉದ್ದೇಶದಿಂದ ವೈಟ್ಫೀಲ್ಡ್ನಿಂದ ಕೆ.ಆರ್.ಪುರಂವರೆಗೆ 13.71 ಕಿಮೀ ಉದ್ದದ ಮೆಟ್ರೋ ಸೇವೆಯನ್ನು ಬಿಎಂಆರ್ಸಿಎಲ್ ಪ್ರಾರಂಭಿಸಿದ್ದು, ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದರು. ಈ ಮಾರ್ಗದ ಕಾಮಗಾರಿಗೆ ಸುಮಾರು 4,249 ಕೋಟಿ ವೆಚ್ಚ ಮಾಡಲಾಗಿತ್ತು.
ನಲ್ಲೂರು ಮೆಟ್ರೋ ಸ್ಟೇಷನ್ನ ಟಿಕೆಟ್ ಕೌಂಟರ್ ಹಾಗೂ ಪ್ಲಾಟ್ ಫಾರ್ಮ್ನ ಮೇಲೆ ನೀರು ನಿಂತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಉದ್ಘಾಟನೆಗೊಂಡ ಕೇವಲ ಹತ್ತು ದಿನಕ್ಕೆ ಹೀಗಾಗಿರುವುದನ್ನು ಕಂಡು ಜನರು ಅಸಮಾಧಾನ ಹೊರಹಾಕಿದ್ದಾರೆ.
ಟ್ವೀಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಟ್ವೀಟಿಗರೊಬ್ಬರು, ‘ಒಂದು ಸಣ್ಣ ಮಳೆಗೆ ನೀರು ಸ್ಟೇಷನ್ನ ಒಳಗೆ ನುಗ್ಗಿದೆ ಎಂದರೆ ಮಳೆಗಾಲದಲ್ಲಿ ಗತಿಯೇನು?. ಎರಡು ನಿಮಿಷದ ಹೆಡ್ಲೈನ್ಗೋಸ್ಕರ ಅಪೂರ್ಣವಾಗಿರುವ ಮೆಟ್ರೋ ಸ್ಟೇಷನ್ನನ್ನು ಪ್ರಧಾನಿಯಿಂದ ಉದ್ಘಾಟನೆ ಮಾಡಲಾಯಿತೇ? ‘ಎಂದು ಪ್ರಶ್ನಿಸಿದ್ದಾರೆ.
‘ಕಾಮಗಾರಿಗಳನ್ನು ಸರಿಯಾಗಿ ಪೂರ್ಣಗೊಳಿಸದೆ ತರಾತುರಿಯಲ್ಲಿ ಉದ್ಘಾಟನೆ ಮಾಡಿದಾಗ ಇಂತಹ ಅನಾಹುತಗಳು ಸಂಭವಿಸುತ್ತವೆ‘ ಎಂದು ಇನ್ನೊಬ್ಬ ಟ್ವೀಟಿಗರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಮಂಗಳವಾರದ ಮಳೆಗೆ ವಿಮಾನ ಸೇವೆಗಳನ್ನು ರದ್ದುಪಡಿಸಲಾಗಿತ್ತು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…