ಬೆಂಗಳೂರು : ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ನಲ್ಲೂರು ಹಳ್ಳಿ ಮೆಟ್ರೋ ಸ್ಟೇಷನ್ ಮಂಗಳವಾರ ಸುರಿದ ಮಳೆಗೆ ಜಲಾವೃತಗೊಂಡಿದ್ದು, ಟ್ವೀಟ್ಟರ್ನಲ್ಲಿ ಮೆಟ್ರೋ ಸ್ಟೇಷನ್ ಒಳಗಡೆ ನೀರು ನಿಂತ ಪೋಟೋ ಹಂಚಿಕೊಂಡ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಯಾಣ ಸಮಯವನ್ನು ಕಡಿತಗೊಳಿಸುವ ಉದ್ದೇಶದಿಂದ ವೈಟ್ಫೀಲ್ಡ್ನಿಂದ ಕೆ.ಆರ್.ಪುರಂವರೆಗೆ 13.71 ಕಿಮೀ ಉದ್ದದ ಮೆಟ್ರೋ ಸೇವೆಯನ್ನು ಬಿಎಂಆರ್ಸಿಎಲ್ ಪ್ರಾರಂಭಿಸಿದ್ದು, ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದರು. ಈ ಮಾರ್ಗದ ಕಾಮಗಾರಿಗೆ ಸುಮಾರು 4,249 ಕೋಟಿ ವೆಚ್ಚ ಮಾಡಲಾಗಿತ್ತು.
ನಲ್ಲೂರು ಮೆಟ್ರೋ ಸ್ಟೇಷನ್ನ ಟಿಕೆಟ್ ಕೌಂಟರ್ ಹಾಗೂ ಪ್ಲಾಟ್ ಫಾರ್ಮ್ನ ಮೇಲೆ ನೀರು ನಿಂತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಉದ್ಘಾಟನೆಗೊಂಡ ಕೇವಲ ಹತ್ತು ದಿನಕ್ಕೆ ಹೀಗಾಗಿರುವುದನ್ನು ಕಂಡು ಜನರು ಅಸಮಾಧಾನ ಹೊರಹಾಕಿದ್ದಾರೆ.
ಟ್ವೀಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಟ್ವೀಟಿಗರೊಬ್ಬರು, ‘ಒಂದು ಸಣ್ಣ ಮಳೆಗೆ ನೀರು ಸ್ಟೇಷನ್ನ ಒಳಗೆ ನುಗ್ಗಿದೆ ಎಂದರೆ ಮಳೆಗಾಲದಲ್ಲಿ ಗತಿಯೇನು?. ಎರಡು ನಿಮಿಷದ ಹೆಡ್ಲೈನ್ಗೋಸ್ಕರ ಅಪೂರ್ಣವಾಗಿರುವ ಮೆಟ್ರೋ ಸ್ಟೇಷನ್ನನ್ನು ಪ್ರಧಾನಿಯಿಂದ ಉದ್ಘಾಟನೆ ಮಾಡಲಾಯಿತೇ? ‘ಎಂದು ಪ್ರಶ್ನಿಸಿದ್ದಾರೆ.
‘ಕಾಮಗಾರಿಗಳನ್ನು ಸರಿಯಾಗಿ ಪೂರ್ಣಗೊಳಿಸದೆ ತರಾತುರಿಯಲ್ಲಿ ಉದ್ಘಾಟನೆ ಮಾಡಿದಾಗ ಇಂತಹ ಅನಾಹುತಗಳು ಸಂಭವಿಸುತ್ತವೆ‘ ಎಂದು ಇನ್ನೊಬ್ಬ ಟ್ವೀಟಿಗರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಮಂಗಳವಾರದ ಮಳೆಗೆ ವಿಮಾನ ಸೇವೆಗಳನ್ನು ರದ್ದುಪಡಿಸಲಾಗಿತ್ತು
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…