BREAKING NEWS

ಆಂಧ್ರದಲ್ಲೂ ಮಿಚಾಂಗ್‌ ಚಂಡಮಾರುತದ ಅಬ್ಬರ; ತಿರುಪತಿ ವಿಮಾನಗಳು ರದ್ದು, ಮಳೆಗೆ ತತ್ತರಿಸಿದ ಜನತೆ

ಕಳೆದ ಐದಾರು ದಿನಗಳಿಂದ ಮಿಚಾಂಗ್‌ ಚಂಡಮಾರುತ ತಮಿಳುನಾಡಿನಲ್ಲಿ ಜನಜೀವನವನ್ನು ಅಸ್ತವ್ಯಸ್ತಗವಾಗುವಂತೆ ಮಾಡಿದೆ. ಅದರಲ್ಲಿಯೂ ಸಮುದ್ರ ತೀರದಲ್ಲಿರುವ ಚೆನ್ನೈ ನಗರದ ಮೇಲೆ ಮಿಚಾಂಗ್‌ ಪರಿಣಾಮ ದೊಡ್ಡ ಮಟ್ಟದಲ್ಲಿದ್ದು, ನಗರದ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಚೆನ್ನೈ ನಗರದ ಹಲವು ಪ್ರದೇಶಗಳಲ್ಲಿ ನೀರು ನದಿಯ ಹಾಗೆ ಹರಿಯುತ್ತಿರುವ ಹಾಗೂ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಹೀಗೆ ಚೆನ್ನ ನಗರವನ್ನು ನರಳುವ ಹಾಗೆ ಮಾಡಿರುವ ಮಿಚಾಂಗ್‌ ಚಂಡಮಾರುತ ಇದೀಗ ಆಂಧ್ರ ಪ್ರದೇಶದ ಕಡೆ ಮುಖ ಮಾಡಿದ್ದು ಕರಾವಳಿ ಭಾಗ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಅವಾಂತರ ಉಂಟುಮಾಡಿದೆ. ತಿರುಪತಿ ನಗರದಲ್ಲಿ ಮಿಚಾಂಗ್‌ ಚಂಡಮಾರುತದಿಂದಾಗಿ ದೊಡ್ಡ ಪ್ರಮಾಣದಲ್ಲಿ ಮಳೆ ಉಂಟಾಗಿದ್ದು ಪರಿಣಾಮ ನಿನ್ನೆ ( ಡಿಸೆಂಬರ್‌ 4 ) ಒಟ್ಟು 16 ವಿಮಾನಗಳು ರದ್ದಾಗಿವೆ.

ಹೌದು, ಆಂಧ್ರ ಪ್ರದೇಶದ ರೇಣಿಗುಂಟ ವಿಮಾನ ನಿಲ್ದಾಣದಿಂದ ನಿನ್ನೆ ಹಾರಬೇಕಿದ್ದ 16 ವಿಮಾನಗಳು ತೀವ್ರ ಮಳೆ ಹಾಗೂ ಮಾರುತದ ಕಾರಣದಿಂದಾಗಿ ರದ್ದಾಗಿವೆ. ಈ ಬಗ್ಗೆ ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ವಿಮಾನ ನಿಲ್ದಾಣಕ್ಕೂ ಬರುವ ಮುನ್ನ ತಾವು ಪ್ರಯಾಣಿಸಲಿರುವ ವಿಮಾನದ ಸ್ಟೇಟಸ್‌ ಅನ್ನು ಚೆಕ್‌ ಮಾಡಿಕೊಂಡು ಬರತಕ್ಕದ್ದು ಎಂದು ಸೂಚನೆಯನ್ನೂ ಸಹ ನೀಡಿದೆ.

ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿರುವ ಮಿಚಾಂಗ್‌ ಚಂಡಮಾರುತದ ವೇಗ ಗಂಟೆಗೆ 90 – 100 ಕಿಲೋಮೀಟರ್‌ ಇದ್ದು, ಇದರ ವೇಗ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಸೋಮವಾರ ನಿರಂತರವಾಗಿ ತಿರುಪತಿ ನಗರದಲ್ಲಿ ಮಳೆ ಸುರಿದಿದ್ದು, ತಿರುಪತಿ ಜಿಲ್ಲೆಯಲ್ಲಿನ ಎಲ್ಲಾ 5 ನದಿಗಳು ತುಂಬಿಹರಿಯುತ್ತಿವೆ.

ತಿರುಪತಿ ಮಾತ್ರವಲ್ಲದೇ ಮಚಲಿಪಟ್ಟಣಂ, ಪಶ್ಚಿಮ ಗೋದಾವರಿ, ಕಾಕಿನಾಡ ಹಾಗೂ ನೆಲ್ಲೂರು ಜಿಲ್ಲೆಗಳಲ್ಲಿಯೂ ಮಿಚಾಂಗ್‌ ಪರಿಣಾಮ ತೀವ್ರವಾಗಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಕೆಲವೆಡೆ ಭೂಕುಸಿತವೂ ಸಹ ಉಂಟಾಗಿದೆ.

andolana

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

3 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

5 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

5 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

5 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

6 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

7 hours ago