BREAKING NEWS

ಆಂಧ್ರದಲ್ಲೂ ಮಿಚಾಂಗ್‌ ಚಂಡಮಾರುತದ ಅಬ್ಬರ; ತಿರುಪತಿ ವಿಮಾನಗಳು ರದ್ದು, ಮಳೆಗೆ ತತ್ತರಿಸಿದ ಜನತೆ

ಕಳೆದ ಐದಾರು ದಿನಗಳಿಂದ ಮಿಚಾಂಗ್‌ ಚಂಡಮಾರುತ ತಮಿಳುನಾಡಿನಲ್ಲಿ ಜನಜೀವನವನ್ನು ಅಸ್ತವ್ಯಸ್ತಗವಾಗುವಂತೆ ಮಾಡಿದೆ. ಅದರಲ್ಲಿಯೂ ಸಮುದ್ರ ತೀರದಲ್ಲಿರುವ ಚೆನ್ನೈ ನಗರದ ಮೇಲೆ ಮಿಚಾಂಗ್‌ ಪರಿಣಾಮ ದೊಡ್ಡ ಮಟ್ಟದಲ್ಲಿದ್ದು, ನಗರದ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಚೆನ್ನೈ ನಗರದ ಹಲವು ಪ್ರದೇಶಗಳಲ್ಲಿ ನೀರು ನದಿಯ ಹಾಗೆ ಹರಿಯುತ್ತಿರುವ ಹಾಗೂ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಹೀಗೆ ಚೆನ್ನ ನಗರವನ್ನು ನರಳುವ ಹಾಗೆ ಮಾಡಿರುವ ಮಿಚಾಂಗ್‌ ಚಂಡಮಾರುತ ಇದೀಗ ಆಂಧ್ರ ಪ್ರದೇಶದ ಕಡೆ ಮುಖ ಮಾಡಿದ್ದು ಕರಾವಳಿ ಭಾಗ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಅವಾಂತರ ಉಂಟುಮಾಡಿದೆ. ತಿರುಪತಿ ನಗರದಲ್ಲಿ ಮಿಚಾಂಗ್‌ ಚಂಡಮಾರುತದಿಂದಾಗಿ ದೊಡ್ಡ ಪ್ರಮಾಣದಲ್ಲಿ ಮಳೆ ಉಂಟಾಗಿದ್ದು ಪರಿಣಾಮ ನಿನ್ನೆ ( ಡಿಸೆಂಬರ್‌ 4 ) ಒಟ್ಟು 16 ವಿಮಾನಗಳು ರದ್ದಾಗಿವೆ.

ಹೌದು, ಆಂಧ್ರ ಪ್ರದೇಶದ ರೇಣಿಗುಂಟ ವಿಮಾನ ನಿಲ್ದಾಣದಿಂದ ನಿನ್ನೆ ಹಾರಬೇಕಿದ್ದ 16 ವಿಮಾನಗಳು ತೀವ್ರ ಮಳೆ ಹಾಗೂ ಮಾರುತದ ಕಾರಣದಿಂದಾಗಿ ರದ್ದಾಗಿವೆ. ಈ ಬಗ್ಗೆ ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ವಿಮಾನ ನಿಲ್ದಾಣಕ್ಕೂ ಬರುವ ಮುನ್ನ ತಾವು ಪ್ರಯಾಣಿಸಲಿರುವ ವಿಮಾನದ ಸ್ಟೇಟಸ್‌ ಅನ್ನು ಚೆಕ್‌ ಮಾಡಿಕೊಂಡು ಬರತಕ್ಕದ್ದು ಎಂದು ಸೂಚನೆಯನ್ನೂ ಸಹ ನೀಡಿದೆ.

ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿರುವ ಮಿಚಾಂಗ್‌ ಚಂಡಮಾರುತದ ವೇಗ ಗಂಟೆಗೆ 90 – 100 ಕಿಲೋಮೀಟರ್‌ ಇದ್ದು, ಇದರ ವೇಗ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಸೋಮವಾರ ನಿರಂತರವಾಗಿ ತಿರುಪತಿ ನಗರದಲ್ಲಿ ಮಳೆ ಸುರಿದಿದ್ದು, ತಿರುಪತಿ ಜಿಲ್ಲೆಯಲ್ಲಿನ ಎಲ್ಲಾ 5 ನದಿಗಳು ತುಂಬಿಹರಿಯುತ್ತಿವೆ.

ತಿರುಪತಿ ಮಾತ್ರವಲ್ಲದೇ ಮಚಲಿಪಟ್ಟಣಂ, ಪಶ್ಚಿಮ ಗೋದಾವರಿ, ಕಾಕಿನಾಡ ಹಾಗೂ ನೆಲ್ಲೂರು ಜಿಲ್ಲೆಗಳಲ್ಲಿಯೂ ಮಿಚಾಂಗ್‌ ಪರಿಣಾಮ ತೀವ್ರವಾಗಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಕೆಲವೆಡೆ ಭೂಕುಸಿತವೂ ಸಹ ಉಂಟಾಗಿದೆ.

andolana

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

2 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

3 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

3 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

3 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

3 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

4 hours ago