BREAKING NEWS

ಆಂಧ್ರದಲ್ಲೂ ಮಿಚಾಂಗ್‌ ಚಂಡಮಾರುತದ ಅಬ್ಬರ; ತಿರುಪತಿ ವಿಮಾನಗಳು ರದ್ದು, ಮಳೆಗೆ ತತ್ತರಿಸಿದ ಜನತೆ

ಕಳೆದ ಐದಾರು ದಿನಗಳಿಂದ ಮಿಚಾಂಗ್‌ ಚಂಡಮಾರುತ ತಮಿಳುನಾಡಿನಲ್ಲಿ ಜನಜೀವನವನ್ನು ಅಸ್ತವ್ಯಸ್ತಗವಾಗುವಂತೆ ಮಾಡಿದೆ. ಅದರಲ್ಲಿಯೂ ಸಮುದ್ರ ತೀರದಲ್ಲಿರುವ ಚೆನ್ನೈ ನಗರದ ಮೇಲೆ ಮಿಚಾಂಗ್‌ ಪರಿಣಾಮ ದೊಡ್ಡ ಮಟ್ಟದಲ್ಲಿದ್ದು, ನಗರದ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಚೆನ್ನೈ ನಗರದ ಹಲವು ಪ್ರದೇಶಗಳಲ್ಲಿ ನೀರು ನದಿಯ ಹಾಗೆ ಹರಿಯುತ್ತಿರುವ ಹಾಗೂ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಹೀಗೆ ಚೆನ್ನ ನಗರವನ್ನು ನರಳುವ ಹಾಗೆ ಮಾಡಿರುವ ಮಿಚಾಂಗ್‌ ಚಂಡಮಾರುತ ಇದೀಗ ಆಂಧ್ರ ಪ್ರದೇಶದ ಕಡೆ ಮುಖ ಮಾಡಿದ್ದು ಕರಾವಳಿ ಭಾಗ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಅವಾಂತರ ಉಂಟುಮಾಡಿದೆ. ತಿರುಪತಿ ನಗರದಲ್ಲಿ ಮಿಚಾಂಗ್‌ ಚಂಡಮಾರುತದಿಂದಾಗಿ ದೊಡ್ಡ ಪ್ರಮಾಣದಲ್ಲಿ ಮಳೆ ಉಂಟಾಗಿದ್ದು ಪರಿಣಾಮ ನಿನ್ನೆ ( ಡಿಸೆಂಬರ್‌ 4 ) ಒಟ್ಟು 16 ವಿಮಾನಗಳು ರದ್ದಾಗಿವೆ.

ಹೌದು, ಆಂಧ್ರ ಪ್ರದೇಶದ ರೇಣಿಗುಂಟ ವಿಮಾನ ನಿಲ್ದಾಣದಿಂದ ನಿನ್ನೆ ಹಾರಬೇಕಿದ್ದ 16 ವಿಮಾನಗಳು ತೀವ್ರ ಮಳೆ ಹಾಗೂ ಮಾರುತದ ಕಾರಣದಿಂದಾಗಿ ರದ್ದಾಗಿವೆ. ಈ ಬಗ್ಗೆ ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ವಿಮಾನ ನಿಲ್ದಾಣಕ್ಕೂ ಬರುವ ಮುನ್ನ ತಾವು ಪ್ರಯಾಣಿಸಲಿರುವ ವಿಮಾನದ ಸ್ಟೇಟಸ್‌ ಅನ್ನು ಚೆಕ್‌ ಮಾಡಿಕೊಂಡು ಬರತಕ್ಕದ್ದು ಎಂದು ಸೂಚನೆಯನ್ನೂ ಸಹ ನೀಡಿದೆ.

ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿರುವ ಮಿಚಾಂಗ್‌ ಚಂಡಮಾರುತದ ವೇಗ ಗಂಟೆಗೆ 90 – 100 ಕಿಲೋಮೀಟರ್‌ ಇದ್ದು, ಇದರ ವೇಗ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಸೋಮವಾರ ನಿರಂತರವಾಗಿ ತಿರುಪತಿ ನಗರದಲ್ಲಿ ಮಳೆ ಸುರಿದಿದ್ದು, ತಿರುಪತಿ ಜಿಲ್ಲೆಯಲ್ಲಿನ ಎಲ್ಲಾ 5 ನದಿಗಳು ತುಂಬಿಹರಿಯುತ್ತಿವೆ.

ತಿರುಪತಿ ಮಾತ್ರವಲ್ಲದೇ ಮಚಲಿಪಟ್ಟಣಂ, ಪಶ್ಚಿಮ ಗೋದಾವರಿ, ಕಾಕಿನಾಡ ಹಾಗೂ ನೆಲ್ಲೂರು ಜಿಲ್ಲೆಗಳಲ್ಲಿಯೂ ಮಿಚಾಂಗ್‌ ಪರಿಣಾಮ ತೀವ್ರವಾಗಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಕೆಲವೆಡೆ ಭೂಕುಸಿತವೂ ಸಹ ಉಂಟಾಗಿದೆ.

andolana

Recent Posts

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

1 hour ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

3 hours ago

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

5 hours ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

5 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

5 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

5 hours ago