BREAKING NEWS

ಆಂಧ್ರದಲ್ಲೂ ಮಿಚಾಂಗ್‌ ಚಂಡಮಾರುತದ ಅಬ್ಬರ; ತಿರುಪತಿ ವಿಮಾನಗಳು ರದ್ದು, ಮಳೆಗೆ ತತ್ತರಿಸಿದ ಜನತೆ

ಕಳೆದ ಐದಾರು ದಿನಗಳಿಂದ ಮಿಚಾಂಗ್‌ ಚಂಡಮಾರುತ ತಮಿಳುನಾಡಿನಲ್ಲಿ ಜನಜೀವನವನ್ನು ಅಸ್ತವ್ಯಸ್ತಗವಾಗುವಂತೆ ಮಾಡಿದೆ. ಅದರಲ್ಲಿಯೂ ಸಮುದ್ರ ತೀರದಲ್ಲಿರುವ ಚೆನ್ನೈ ನಗರದ ಮೇಲೆ ಮಿಚಾಂಗ್‌ ಪರಿಣಾಮ ದೊಡ್ಡ ಮಟ್ಟದಲ್ಲಿದ್ದು, ನಗರದ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಚೆನ್ನೈ ನಗರದ ಹಲವು ಪ್ರದೇಶಗಳಲ್ಲಿ ನೀರು ನದಿಯ ಹಾಗೆ ಹರಿಯುತ್ತಿರುವ ಹಾಗೂ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಹೀಗೆ ಚೆನ್ನ ನಗರವನ್ನು ನರಳುವ ಹಾಗೆ ಮಾಡಿರುವ ಮಿಚಾಂಗ್‌ ಚಂಡಮಾರುತ ಇದೀಗ ಆಂಧ್ರ ಪ್ರದೇಶದ ಕಡೆ ಮುಖ ಮಾಡಿದ್ದು ಕರಾವಳಿ ಭಾಗ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಅವಾಂತರ ಉಂಟುಮಾಡಿದೆ. ತಿರುಪತಿ ನಗರದಲ್ಲಿ ಮಿಚಾಂಗ್‌ ಚಂಡಮಾರುತದಿಂದಾಗಿ ದೊಡ್ಡ ಪ್ರಮಾಣದಲ್ಲಿ ಮಳೆ ಉಂಟಾಗಿದ್ದು ಪರಿಣಾಮ ನಿನ್ನೆ ( ಡಿಸೆಂಬರ್‌ 4 ) ಒಟ್ಟು 16 ವಿಮಾನಗಳು ರದ್ದಾಗಿವೆ.

ಹೌದು, ಆಂಧ್ರ ಪ್ರದೇಶದ ರೇಣಿಗುಂಟ ವಿಮಾನ ನಿಲ್ದಾಣದಿಂದ ನಿನ್ನೆ ಹಾರಬೇಕಿದ್ದ 16 ವಿಮಾನಗಳು ತೀವ್ರ ಮಳೆ ಹಾಗೂ ಮಾರುತದ ಕಾರಣದಿಂದಾಗಿ ರದ್ದಾಗಿವೆ. ಈ ಬಗ್ಗೆ ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ವಿಮಾನ ನಿಲ್ದಾಣಕ್ಕೂ ಬರುವ ಮುನ್ನ ತಾವು ಪ್ರಯಾಣಿಸಲಿರುವ ವಿಮಾನದ ಸ್ಟೇಟಸ್‌ ಅನ್ನು ಚೆಕ್‌ ಮಾಡಿಕೊಂಡು ಬರತಕ್ಕದ್ದು ಎಂದು ಸೂಚನೆಯನ್ನೂ ಸಹ ನೀಡಿದೆ.

ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿರುವ ಮಿಚಾಂಗ್‌ ಚಂಡಮಾರುತದ ವೇಗ ಗಂಟೆಗೆ 90 – 100 ಕಿಲೋಮೀಟರ್‌ ಇದ್ದು, ಇದರ ವೇಗ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಸೋಮವಾರ ನಿರಂತರವಾಗಿ ತಿರುಪತಿ ನಗರದಲ್ಲಿ ಮಳೆ ಸುರಿದಿದ್ದು, ತಿರುಪತಿ ಜಿಲ್ಲೆಯಲ್ಲಿನ ಎಲ್ಲಾ 5 ನದಿಗಳು ತುಂಬಿಹರಿಯುತ್ತಿವೆ.

ತಿರುಪತಿ ಮಾತ್ರವಲ್ಲದೇ ಮಚಲಿಪಟ್ಟಣಂ, ಪಶ್ಚಿಮ ಗೋದಾವರಿ, ಕಾಕಿನಾಡ ಹಾಗೂ ನೆಲ್ಲೂರು ಜಿಲ್ಲೆಗಳಲ್ಲಿಯೂ ಮಿಚಾಂಗ್‌ ಪರಿಣಾಮ ತೀವ್ರವಾಗಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಕೆಲವೆಡೆ ಭೂಕುಸಿತವೂ ಸಹ ಉಂಟಾಗಿದೆ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago