Mysore
30
scattered clouds

Social Media

ಶನಿವಾರ, 30 ಮೇ 2026
Light
Dark

ಹಾಲಿನ ಉತ್ಪಾದನಾ ದರ ಹೆಚ್ಚಿಸಲಾಗಿದೆ ಹಾಲಿನ ದರ ಹೆಚ್ಚಳವಾಗಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ ಭಾಗ್ಯ ಎಂದು ಹಾಲಿನ ದರ ಏರಿಕೆ ಬಗ್ಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾಸ್ವಾಮಿ ಅವರು ಮಾಡಿರುವ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿ ನಾಳೆ ಈ ಬಗ್ಗೆ ಜಾಹೀರಾತು ನೀಡಲಾಗುತ್ತಿದೆ ಎಂದರು.

ಬೆಲೆ ಏರಿಕೆ ಮಾಡಿಲ್ಲ. ಹಾಲಿನ ಪ್ರಮಾಣ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚದ ಮೊತ್ತವನ್ನು ಹೆಚ್ಚಿಸಲಾಗಿದೆ. ಹಾಲಿನ ಉತ್ಪಾದನೆ ಜಾಸ್ತಿಯಾಗಿದ್ದು ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಹೆಚ್ಚು ಹಾಲು ನೀಡಿ ದರ ಹೆಚ್ಚಿಸಲಾಗಿದೆ ಎಂದರು.

Tags:
error: Content is protected !!