BREAKING NEWS

ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ: ಕಾರು ಚಾಲಕ ವಶಕ್ಕೆ

ಬೆಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅವರ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರು ಚಾಲಕನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಐದು ವರ್ಷಗಳಿಂದ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್‍ನನ್ನು ಚಾಮರಾಜನಗರ ಜಿಲ್ಲೆಯಲ್ಲಿ ವಶಕ್ಕೆ ಪಡೆದು ನಗರಕ್ಕೆ ಕರೆ ತಂದಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕಳೆದ ಐದು ವರ್ಷಗಳಿಂದ ಕಿರಣ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಇವರ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಕಾರು ಚಾಲಕರಾಗಿದ್ದಾರೆ.

ಕೆಲ ವಿಚಾರದಲ್ಲಿ ಪ್ರತಿಮಾ ಹಾಗೂ ಕಿರಣ್ ನಡುವೆ ಭಿನ್ನಾಭಿಪ್ರಾಯ ಇದ್ದುದರಿಂದ ಹತ್ತು ದಿನಗಳ ಹಿಂದೆಯಷ್ಟೇ ಕಿರಣ್‍ನನ್ನು ಕೆಲಸದಿಂದ ತೆಗೆದು ಹಾಕಿ ಬೇರೆ ಚಾಲಕ ಚೇತನ್‍ನನ್ನು ನಿಯೋಜಿಸಿಕೊಂಡಿದ್ದರು. ಇದೇ ಕಾರಣಕ್ಕೆ ಕಿರಣ್ ಮಹಿಳಾ ಅಧಿಕಾರಿ ಪ್ರತಿಮಾ ಅವರ ಮೇಲೆ ದ್ವೇಷ ಸಾಧಿಸಿ ಈತನೇ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿ ಆತನ ಹುಡುಕಾಟ ನಡೆಸುತ್ತಿದ್ದಾಗ ಕಿರಣ್ ಮೊಬೈಲ್ ಸ್ವಿಚ್‍ಆಫ್ ಮಾಡಿಕೊಂಡು ಚಾಮರಾಜನಗರ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದರು.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಚಾಮರಾಜನಗರ ಜಿಲ್ಲೆಗೆ ತೆರಳಿ ಕಿರಣ್‍ನನ್ನು ವಶಕ್ಕೆ ಪಡೆದು ನಗರಕ್ಕೆ ಕರೆ ತಂದು ತೀವ್ರ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಹಿನ್ನೆಲೆ: ಮೊನ್ನೆ ಸಂಜೆ ಪ್ರತಿಮಾ ಅವರು ಕೆಲಸ ಮುಗಿಸಿಕೊಂಡು ಇಲಾಖೆ ಕಾರಿನಲ್ಲಿ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್‍ಮೆಂಟ್ ಪಕ್ಕದ ತಮ್ಮ ಮನೆಗೆ ಡ್ರಾಪ್ ಪಡೆದ ಕೆಲವೇ ನಿಮಿಷದಲ್ಲಿ ಅವರ ಕೊಲೆ ನಡೆದು ಹೋಗಿತ್ತು.

ಪ್ರತಿಮಾ ಅವರ ಕುತ್ತಿಗೆಗೆ ಹಗ್ಗದಿಂದ ಬಿಗಿದು ಬಳಿಕ ಚಾಕುವಿನಿಂದ ಕತ್ತು ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಪ್ರತಿಮಾ ಅವರ ಅಣ್ಣ, ಬಿಬಿಎಂಪಿ ಗುತ್ತಿಗೆದಾರರಾಗಿರುವ ಪ್ರತೀಶ್ ಅವರು ಸಹೋದರಿಯ ಮೊಬೈಲ್‍ಗೆ ಮೊನ್ನೆ ರಾತ್ರಿ ಕರೆ ಮಾಡಿದಾಗ ಸ್ವೀಕರಿಸಿಲ್ಲ. ಎರಡು-ಮೂರು ಬಾರಿ ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಬೆಳಗ್ಗೆ ಹೋಗಿ ವಿಚಾರಿಸೋಣ ಎಂದು ಸುಮ್ಮನಾಗಿದ್ದಾರೆ.

ನಿನ್ನೆ ಬೆಳಗ್ಗೆ ಸಹೋದರಿ ಪ್ರತಿಮಾ ಅವರ ಮನೆಗೆ ಅಣ್ಣ ಪ್ರತೀಶ್ ಬಂದು ನೋಡಿದಾಗಲೇ ಸಹೋದರಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ತನಿಖೆಗಾಗಿ ರಚಿಸಲಾಗಿದ್ದ ಮೂರು ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ವೈಯಕ್ತಿಕ ಜೀವನ, ವೃತ್ತಿ ಜೀವನ, ಹಣಕಾಸು ಈ ಮೂರು ಆಯಾಮಗಳಲ್ಲಿ ತನಿಖೆ ಕೈಗೊಂಡಿರುವ ಪೆÇಲೀಸರು ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.

andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

1 hour ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

1 hour ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

2 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago