BREAKING NEWS

ರಾಜ್ಯಾದ್ಯಂತ ‘ಪೆಹಲಾ ಓಟ್’ ಅಭಿಯಾನಕ್ಕೆ ಸಚಿವ ಕೃಷ್ಣ ಭೈರೇಗೌಡ ಚಾಲನೆ

ಬೆಂಗಳೂರು : ‘2024ನೆ ಸಾಲಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಜ್ಯಾದ್ಯಂತ ‘ಪೆಹಲಾ ಓಟ್’(ಮೊದಲ ಮತ) ಅಭಿಯಾನಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಚಾಲನೆ ನೀಡಿದರು.

ಶುಕ್ರವಾರ ಸಹಕಾರ ನಗರದಲ್ಲಿರುವ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಮೊದಲ ಮತದಾನ ಅಭಿಯಾನದ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಸಮ್ಮುಖದಲ್ಲಿ ಅವರು ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿದರು. 18 ರಿಂದ 23 ವಯಸ್ಸಿನ ಮೊದಲ ಬಾರಿಗೆ ಲೋಕಸಭೆಯಲ್ಲಿ ಮತದಾನ ಮಾಡುತ್ತಿರುವವರನ್ನು ಸೆಳೆಯಲು ಈ ಅಭಿಯಾನ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಸ್.ರಕ್ಷಾ ರಾಮಯ್ಯ, ಯುವ ಸಮೂಹ ದೇಶದ ಯುವ ಶಕ್ತಿಯಾಗಿದ್ದು, ಮೊದಲ ಮತ ಅಭಿಯಾನ ಯುವ ಜನಾಂಗದ ಆಂದೋಲನವಾಗಲಿದೆ. ಅಭಿಯಾನದಲ್ಲಿ ಸಂವಾದ, ತಂತ್ರಜ್ಞಾನ ಆಧಾರಿತ ಪ್ರಚಾರ, ಕ್ಯೂ.ಆರ್.ಕೋಡ್ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದರು.

ಸರಕು ಸಾಗಾಣೆ ವಾಹನಗಳಲ್ಲಿ ಎಲ್.ಇ.ಡಿ ವ್ಯವಸ್ಥೆ, ಶಾಲಾ ಕಾಲೇಜುಗಳು, ಟ್ಯೂಷನ್ ತಾಣಗಳು, ಬಸ್ ನಿಲ್ದಾಣಗಳು, ಮಾಲ್ ಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯೋಜಿಸಿದ್ದ ಯುವ ಮತ ಅಭಿಯಾನಕ್ಕೆ ಅಭೂಪೂರ್ವ ಸ್ಪಂದನೆ ದೊರೆತಿದ್ದು, ಕಾಂಗ್ರೆಸ್ ಪಕ್ಷ ಶೇ.42ರಷ್ಟು ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು ಎಂದು ಅವರು ತಿಳಿಸಿದರು.

ಬಿಜೆಪಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಈ ಸಫಲತೆಯ ನಂತರ ಇದೀಗ ಪೆಹಲಾ ಓಟ್ ಅಭಿಯಾನ ಆರಂಭಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಸೆಳೆಯುವ ಸವಾಲು ನಮ್ಮ ಮುಂದಿದ್ದು, ನಮಗೆ ಉತ್ತಮ ಬೆಂಬಲ ದೊರೆಯುವ ನಿರೀಕ್ಷೆಯಿದೆ. ಪ್ರಚಾರ ವಾಹನಗಳು ರಾಜ್ಯಾದ್ಯಂತ ಸಂಚರಿಸಲಿವೆ. ಮತದಾನದ ಮಹತ್ವದ ಬಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಅರಿವು ಮೂಡಿಸಲಿದ್ದಾರೆ ಎಂದು ಅವರು ಹೇಳಿದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

1 hour ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

2 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

2 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

4 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

4 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

5 hours ago