ಬೆಂಗಳೂರು : ‘2024ನೆ ಸಾಲಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಜ್ಯಾದ್ಯಂತ ‘ಪೆಹಲಾ ಓಟ್’(ಮೊದಲ ಮತ) ಅಭಿಯಾನಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಚಾಲನೆ ನೀಡಿದರು.
ಶುಕ್ರವಾರ ಸಹಕಾರ ನಗರದಲ್ಲಿರುವ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಮೊದಲ ಮತದಾನ ಅಭಿಯಾನದ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಸಮ್ಮುಖದಲ್ಲಿ ಅವರು ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿದರು. 18 ರಿಂದ 23 ವಯಸ್ಸಿನ ಮೊದಲ ಬಾರಿಗೆ ಲೋಕಸಭೆಯಲ್ಲಿ ಮತದಾನ ಮಾಡುತ್ತಿರುವವರನ್ನು ಸೆಳೆಯಲು ಈ ಅಭಿಯಾನ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಸ್.ರಕ್ಷಾ ರಾಮಯ್ಯ, ಯುವ ಸಮೂಹ ದೇಶದ ಯುವ ಶಕ್ತಿಯಾಗಿದ್ದು, ಮೊದಲ ಮತ ಅಭಿಯಾನ ಯುವ ಜನಾಂಗದ ಆಂದೋಲನವಾಗಲಿದೆ. ಅಭಿಯಾನದಲ್ಲಿ ಸಂವಾದ, ತಂತ್ರಜ್ಞಾನ ಆಧಾರಿತ ಪ್ರಚಾರ, ಕ್ಯೂ.ಆರ್.ಕೋಡ್ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದರು.
ಸರಕು ಸಾಗಾಣೆ ವಾಹನಗಳಲ್ಲಿ ಎಲ್.ಇ.ಡಿ ವ್ಯವಸ್ಥೆ, ಶಾಲಾ ಕಾಲೇಜುಗಳು, ಟ್ಯೂಷನ್ ತಾಣಗಳು, ಬಸ್ ನಿಲ್ದಾಣಗಳು, ಮಾಲ್ ಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯೋಜಿಸಿದ್ದ ಯುವ ಮತ ಅಭಿಯಾನಕ್ಕೆ ಅಭೂಪೂರ್ವ ಸ್ಪಂದನೆ ದೊರೆತಿದ್ದು, ಕಾಂಗ್ರೆಸ್ ಪಕ್ಷ ಶೇ.42ರಷ್ಟು ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು ಎಂದು ಅವರು ತಿಳಿಸಿದರು.
ಬಿಜೆಪಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಈ ಸಫಲತೆಯ ನಂತರ ಇದೀಗ ಪೆಹಲಾ ಓಟ್ ಅಭಿಯಾನ ಆರಂಭಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಸೆಳೆಯುವ ಸವಾಲು ನಮ್ಮ ಮುಂದಿದ್ದು, ನಮಗೆ ಉತ್ತಮ ಬೆಂಬಲ ದೊರೆಯುವ ನಿರೀಕ್ಷೆಯಿದೆ. ಪ್ರಚಾರ ವಾಹನಗಳು ರಾಜ್ಯಾದ್ಯಂತ ಸಂಚರಿಸಲಿವೆ. ಮತದಾನದ ಮಹತ್ವದ ಬಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಅರಿವು ಮೂಡಿಸಲಿದ್ದಾರೆ ಎಂದು ಅವರು ಹೇಳಿದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…