Mysore
28
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಮಂಡ್ಯ : ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಮಂಡ್ಯ, ಮಳ್ಳವಳ್ಳಿ, ಕೆ.ಆರ್. ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವರ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಆತ್ಮ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದೂರಿನ ಜೊತೆಗಿನ ಪತ್ರದಲ್ಲಿ ಹೇಳಿದ್ದಾರೆ.

ಸಚಿವರ ವಿರುದ್ಧದ ದೂರಿನ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಅವರಿಗೆ ಪತ್ರ ಬರೆದಿರುವ ರಾಜ್ಯಪಾಲರು, ಪರಿಶೀಲಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಮಧ್ಯೆ ದೂರಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಚಲುವರಾಯಸ್ವಾಮಿ, ಇಲಾಖೆ ಕಾರ್ಯದರ್ಶಿಯಿಂದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!