ಮಂಡ್ಯ : ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಮಂಡ್ಯ, ಮಳ್ಳವಳ್ಳಿ, ಕೆ.ಆರ್. ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವರ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಆತ್ಮ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದೂರಿನ ಜೊತೆಗಿನ ಪತ್ರದಲ್ಲಿ ಹೇಳಿದ್ದಾರೆ.
ಸಚಿವರ ವಿರುದ್ಧದ ದೂರಿನ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಅವರಿಗೆ ಪತ್ರ ಬರೆದಿರುವ ರಾಜ್ಯಪಾಲರು, ಪರಿಶೀಲಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಮಧ್ಯೆ ದೂರಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಚಲುವರಾಯಸ್ವಾಮಿ, ಇಲಾಖೆ ಕಾರ್ಯದರ್ಶಿಯಿಂದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…