BREAKING NEWS

ಸಚಿವರಾದ ಸತೀಶ್ ಜಾರಕಿಹೊಳಿ – ಲಕ್ಷ್ಮೀ ಹೆಬ್ಬಾಳ್ಕರ್ : ಅದ್ಧೂರಿ ಸ್ವಾಗತಕ್ಕೆ ಬೆಳಗಾವಿ ಸಜ್ಜು

ಬೆಳಗಾವಿ : ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ.

5ನೇ ಬಾರಿ ಕರ್ನಾಟಕದ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಸದ್ಯ ರಾಜ್ಯ ಸರ್ಕಾರದ ಪವರ್ ಫುಲ್ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಲ್ಲದೆ, ಅತ್ತ ಬೆಂಗಳೂರಿನಲ್ಲಿ ಸತೀಶ್ ಅವರು ಮಂತ್ರಿ ಸ್ಥಾನ ಸ್ವೀಕರಿಸುತ್ತಿದ್ದಂತೆ ಇತ್ತ ಬೆಳಗಾವಿಯಲ್ಲಿ ಅವರ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಮೇ.20 ರಂದು ಸತೀಶ್ ಅವರು ಹಾಗೂ ಮೇ.27 ರಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇಬ್ಬರೂ ನೂತನ ಸಚಿವರಾದ ನಂತರ ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಸಂಜೆ 4 ಗಂಟೆಗೆ ಇಬ್ಬರೂ ನಾಯಕರು ಬೆಳಗಾವಿ ವಿಮಾನ ನಿಲ್ದಾಣ ತಲುಪಲಿದ್ದಾರೆ. ಒಟ್ಟಾಗಿ ಆಗಮಿಸುತ್ತಿರುವ ಸಚಿವರನ್ನು ಸ್ವಾಗತಿಸಲು ಇಡೀ ಬೆಳಗಾವಿ ಮಹಾನಗರ ಸಜ್ಜಾಗಿದ್ದು, ವಿಮಾನ ನಿಲ್ದಾಣದಿಂದಲೇ ಬೃಹತ್ ರ್ಯಾಲಿ ಮೂಲಕ ನಗರಕ್ಕೆ ಕರೆತರಲು ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರ್ಧರಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಅವರು, ಮೇ 28ರಂದು ಸಂಜೆ 4 ಗಂಟೆಗೆ ಸಚಿವರು, ಶಾಸಕರು ಒಳಗೊಂಡಿರುವ ತೆರೆದ ವಾಹನದ ಬೃಹತ್ ವಿಜಯೋತ್ಸವ ಮೆರವಣಿಗೆ ಕಾಂಗ್ರೆಸ್ ಭವನದಿಂದ ಆರಂಭಗೊಂಡು ಕೊಲ್ಲಾಪುರ ವೃತ್ತ, ಅಂಬೇಡ್ಕರ್ ಉದ್ಯಾನವನದಲ್ಲಿ ಅಂಬೇಡ್ಕರ್ ಪ್ರತಿಮೆಗೆ, ಚನ್ನಮ್ಮ ವೃತ್ತದಲ್ಲಿ ಚನ್ನಮ್ಮ ಪ್ರತಿಮೆಗೆ, ಬೋಗಾರವೇಸ್‌ನಲ್ಲಿ ಸಂಭಾಜಿ ಪ್ರತಿಮೆಗೆ ಮಾರ್ಲಾಪಣೆ ಮಾಡಲಿದ್ದಾರೆ. ಬಳಿಕ ವೀರಸೌಧದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೈಲ್ವೆ ಮೂರನೇ ಗೇಟ್ ಮೂಲಕ ಗೋವಾವಸೇಸ್‌ನಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ತದನಂತರ ಶಿವಾಜಿ ಉದ್ಯಾನವನದ ಮಾರ್ಗವಾಗಿ ಪ್ರವಾಸಿ ಮಂದಿರದಲ್ಲಿದಲ್ಲಿ ಮುಗಿಯಲಿದೆ ಎಂದು ಮಾಹಿತಿ ನೀಡಿದರು.

ಬೆಳಗಾವಿ ಉತ್ತರ, ಗ್ರಾಮೀಣ, ಯಮಕನಮರಡಿ, ಖಾನಾಪುರ ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಬರಲಿದ್ದಾರೆ. ಸುಮಾರು 5 ಸಾವಿರ ಬೈಕ್ ರ್ಯಾಲಿ ನಡೆಯಲಿದೆ. ಬಳಿಕ ನೂತನ ಸಚಿವರು, ಶಾಸಕರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ವಿಜಯೋತ್ಸವ ಮೆರವಣಿಗೆಯಲ್ಲಿ ಬರೋಬ್ಬರಿ 10 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

7 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago