BREAKING NEWS

ಎಎಪಿಯು ಕಡಿಮೆ ಸಮಯದಲ್ಲೇ ರಾಷ್ಟ್ರೀಯ ಪಕ್ಷ ಎನಿಸಿರುವುದು ‘ಪವಾಡ’: ಕೇಜ್ರಿವಾಲ್

ನವದೆಹಲಿ : ಅತ್ಯಂತ ಕಡಿಮೆ ಅವಧಿಯಲ್ಲಿ ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಲಭಿಸಿರುವುದು ಪವಾಡವೇ ಸರಿ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.
ಚುನಾವಣಾ ಆಯೋಗವು ಎಎಪಿಗೆ ಸೋಮವಾರ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ.

ದೆಹಲಿ ಮುಖ್ಯಮಂತ್ರಿಯೂ ಆಗಿರುವ ಕೇಜ್ರಿವಾಲ್‌, ಇದರ ಶ್ರೇಯ ಜನರಿಗೇ ಸಲ್ಲಬೇಕು. ಅವರ ನಿರೀಕ್ಷೆಗಳನ್ನು ಈಡೇರಿಸುವ ಶಕ್ತಿಯನ್ನು ತಮ್ಮ ಪಕ್ಷಕ್ಕೆ ನೀಡುವಂತೆ ದೇವರಲ್ಲಿ ಮನವಿ ಮಾಡಿದ್ದಾರೆ.

ಚುನಾವಣಾ ಆಯೋಗದ ಘೋಷಣೆ ಹೊರ ಬೀಳುತ್ತಿದ್ದಂತೆಯೇ ಟ್ವೀಟ್‌ ಮಾಡಿರುವ ಕೇಜ್ರಿವಾಲ್, ‘ಇಷ್ಟು ಕಡಿಮೆ ಅವಧಿಯಲ್ಲಿ ರಾಷ್ಟ್ರೀಯ ಪಕ್ಷ? ಇದು ಪವಾಡಕ್ಕಿಂತ ಕಡಿಮೆಯೇನಲ್ಲ. ಎಲ್ಲರಿಗೂ ಅಭಿನಂದನೆಗಳು. ಕೋಟ್ಯಂತರ ಜನರು ನಮ್ಮನ್ನು ಈ ಹಂತಕ್ಕೆ ತಂದು ನಿಲ್ಲಿಸಿದ್ದಾರೆ. ಜನರು ನಮ್ಮಿಂದ ಸಾಕಷ್ಟು ನಿರೀಕ್ಷಿಸುತ್ತಾರೆ. ಇಂದು ನಮಗೆ ತುಂಬಾ ದೊಡ್ಡ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ದೇವರೇ, ಈ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿಯನ್ನು ನೀಡು’ ಎಂದು ಬರೆದುಕೊಂಡಿದ್ದಾರೆ.2012ರಲ್ಲಿ ಸ್ಥಾಪನೆಯಾದ ಎಎಪಿಯು, 10 ವರ್ಷಗಳ್ಲಲೇ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಗಿಟ್ಟಿಸಿದೆ.ಸದ್ಯ ದೆಹಲಿ ಮತ್ತು ಪಂಜಾಬ್‌ನಲ್ಲಿ ಈ ಪಕ್ಷದ ಸರ್ಕಾರಗಳು ಅಸ್ತಿತ್ವದಲ್ಲಿದ್ದು, ಗುಜರಾತ್‌ನಲ್ಲಿ ಐವರು ಮತ್ತು ಗೋವಾದಲ್ಲಿ ಇಬ್ಬರು ಶಾಸಕರಿದ್ದಾರೆ.

lokesh

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

7 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

8 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

8 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

8 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

8 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

9 hours ago