ನವದೆಹಲಿ : ಅತ್ಯಂತ ಕಡಿಮೆ ಅವಧಿಯಲ್ಲಿ ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಲಭಿಸಿರುವುದು ಪವಾಡವೇ ಸರಿ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಚುನಾವಣಾ ಆಯೋಗವು ಎಎಪಿಗೆ ಸೋಮವಾರ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ.
ದೆಹಲಿ ಮುಖ್ಯಮಂತ್ರಿಯೂ ಆಗಿರುವ ಕೇಜ್ರಿವಾಲ್, ಇದರ ಶ್ರೇಯ ಜನರಿಗೇ ಸಲ್ಲಬೇಕು. ಅವರ ನಿರೀಕ್ಷೆಗಳನ್ನು ಈಡೇರಿಸುವ ಶಕ್ತಿಯನ್ನು ತಮ್ಮ ಪಕ್ಷಕ್ಕೆ ನೀಡುವಂತೆ ದೇವರಲ್ಲಿ ಮನವಿ ಮಾಡಿದ್ದಾರೆ.
ಚುನಾವಣಾ ಆಯೋಗದ ಘೋಷಣೆ ಹೊರ ಬೀಳುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಕೇಜ್ರಿವಾಲ್, ‘ಇಷ್ಟು ಕಡಿಮೆ ಅವಧಿಯಲ್ಲಿ ರಾಷ್ಟ್ರೀಯ ಪಕ್ಷ? ಇದು ಪವಾಡಕ್ಕಿಂತ ಕಡಿಮೆಯೇನಲ್ಲ. ಎಲ್ಲರಿಗೂ ಅಭಿನಂದನೆಗಳು. ಕೋಟ್ಯಂತರ ಜನರು ನಮ್ಮನ್ನು ಈ ಹಂತಕ್ಕೆ ತಂದು ನಿಲ್ಲಿಸಿದ್ದಾರೆ. ಜನರು ನಮ್ಮಿಂದ ಸಾಕಷ್ಟು ನಿರೀಕ್ಷಿಸುತ್ತಾರೆ. ಇಂದು ನಮಗೆ ತುಂಬಾ ದೊಡ್ಡ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ದೇವರೇ, ಈ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿಯನ್ನು ನೀಡು’ ಎಂದು ಬರೆದುಕೊಂಡಿದ್ದಾರೆ.2012ರಲ್ಲಿ ಸ್ಥಾಪನೆಯಾದ ಎಎಪಿಯು, 10 ವರ್ಷಗಳ್ಲಲೇ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಗಿಟ್ಟಿಸಿದೆ.ಸದ್ಯ ದೆಹಲಿ ಮತ್ತು ಪಂಜಾಬ್ನಲ್ಲಿ ಈ ಪಕ್ಷದ ಸರ್ಕಾರಗಳು ಅಸ್ತಿತ್ವದಲ್ಲಿದ್ದು, ಗುಜರಾತ್ನಲ್ಲಿ ಐವರು ಮತ್ತು ಗೋವಾದಲ್ಲಿ ಇಬ್ಬರು ಶಾಸಕರಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…