ನವದೆಹಲಿ : ಅತ್ಯಂತ ಕಡಿಮೆ ಅವಧಿಯಲ್ಲಿ ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಲಭಿಸಿರುವುದು ಪವಾಡವೇ ಸರಿ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಚುನಾವಣಾ ಆಯೋಗವು ಎಎಪಿಗೆ ಸೋಮವಾರ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ.
ದೆಹಲಿ ಮುಖ್ಯಮಂತ್ರಿಯೂ ಆಗಿರುವ ಕೇಜ್ರಿವಾಲ್, ಇದರ ಶ್ರೇಯ ಜನರಿಗೇ ಸಲ್ಲಬೇಕು. ಅವರ ನಿರೀಕ್ಷೆಗಳನ್ನು ಈಡೇರಿಸುವ ಶಕ್ತಿಯನ್ನು ತಮ್ಮ ಪಕ್ಷಕ್ಕೆ ನೀಡುವಂತೆ ದೇವರಲ್ಲಿ ಮನವಿ ಮಾಡಿದ್ದಾರೆ.
ಚುನಾವಣಾ ಆಯೋಗದ ಘೋಷಣೆ ಹೊರ ಬೀಳುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಕೇಜ್ರಿವಾಲ್, ‘ಇಷ್ಟು ಕಡಿಮೆ ಅವಧಿಯಲ್ಲಿ ರಾಷ್ಟ್ರೀಯ ಪಕ್ಷ? ಇದು ಪವಾಡಕ್ಕಿಂತ ಕಡಿಮೆಯೇನಲ್ಲ. ಎಲ್ಲರಿಗೂ ಅಭಿನಂದನೆಗಳು. ಕೋಟ್ಯಂತರ ಜನರು ನಮ್ಮನ್ನು ಈ ಹಂತಕ್ಕೆ ತಂದು ನಿಲ್ಲಿಸಿದ್ದಾರೆ. ಜನರು ನಮ್ಮಿಂದ ಸಾಕಷ್ಟು ನಿರೀಕ್ಷಿಸುತ್ತಾರೆ. ಇಂದು ನಮಗೆ ತುಂಬಾ ದೊಡ್ಡ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ದೇವರೇ, ಈ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿಯನ್ನು ನೀಡು’ ಎಂದು ಬರೆದುಕೊಂಡಿದ್ದಾರೆ.2012ರಲ್ಲಿ ಸ್ಥಾಪನೆಯಾದ ಎಎಪಿಯು, 10 ವರ್ಷಗಳ್ಲಲೇ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಗಿಟ್ಟಿಸಿದೆ.ಸದ್ಯ ದೆಹಲಿ ಮತ್ತು ಪಂಜಾಬ್ನಲ್ಲಿ ಈ ಪಕ್ಷದ ಸರ್ಕಾರಗಳು ಅಸ್ತಿತ್ವದಲ್ಲಿದ್ದು, ಗುಜರಾತ್ನಲ್ಲಿ ಐವರು ಮತ್ತು ಗೋವಾದಲ್ಲಿ ಇಬ್ಬರು ಶಾಸಕರಿದ್ದಾರೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…