BREAKING NEWS

ಹಾಸ್ಟೆಲ್ ಎದುರು ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಕಿರುಕುಳ ನೀಡಿದ ಕಿಡಿಗೇಡಿಗಳು

ಲಖನೌ : ಐಐಟಿ-ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ಮೇಲೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ, ಕೆಲ ಯುವಕರು ಕಿರುಕುಳ ನೀಡಿರುವ ಘಟನೆ ನಡೆದಿದೆ.

ಆಕೆ ಹಾಸ್ಟೆಲ್​ನ ಹೊರಗಡೆ ತನ್ನ ಸ್ನೇಹಿತನೊಂದಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಕ್ಷಣವೇ ಆಕೆ ಓಡಿ ಹೋಗಿ 20 ನಿಮಿಷಗಳ ಕಾಲ ಪ್ರಾಧ್ಯಾಪಕರ ಮನೆಯಲ್ಲಿ ಅಡಗಿ ಕುಳಿತಿದ್ದಳು.

ವಿದ್ಯಾರ್ಥಿನಿಯು ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್‌ನಿಂದ ಹೊರಬಂದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಅವರನ್ನು ಅಡ್ಡಗಟ್ಟಿದ್ದಾರೆ.

ಆಕೆಯನ್ನು ಬಲವಂತವಾಗಿ ಒಂದು ಮೂಲೆಗೆ ಕರೆದೊಯ್ದಿದ್ದಾರೆ ಆಕೆಯ ಸ್ನೇಹಿತನಿಂದ ದೂರ ಕರೆದೊಯ್ದು, ಬಾಯಿಯನ್ನು ಮುಚ್ಚಿ, ವಿವಸ್ತ್ರಗೊಳಿಸಿದ್ದಾರೆ.
ಅಷ್ಟೇ ಅಲ್ಲದೆ ಆಕೆಯ ಫೋಟೊವನ್ನು ಕ್ಲಿಕ್ಕಿಸಿದ್ದಾರೆ, 15 ನಿಮಿಷಗಳ ನಂತರ ಆಕೆಯನ್ನು ಹೋಗಲು ಬಿಟ್ಟು ಆಕೆಯ ಫೋನ್ ಸಂಖ್ಯೆಯನ್ನು ತೆಗೆದುಕೊಂಡಿದ್ದಾರೆ.
ಆಕೆ ತಕ್ಷಣವೇ ಓಡಿ ಹೋಗಿ ಪ್ರಾಧ್ಯಾಪಕರ ಮನೆಯನ್ನು ತಲುಪಿದ್ದಾಳೆ, ತಕ್ಷಣವೇ ಆಕೆಯನ್ನು ಮನೆಯೊಳಗೆ ಕರೆದೊಯ್ದು, ಸಮಾಧಾನಪಡಿಸಿದ್ದಾರೆ.

ವಿದ್ಯಾರ್ಥಿಯನ್ನು ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿ ತನ್ನ ಹಾಸ್ಟೆಲ್‌ಗೆ ಕರೆದೊಯ್ದರು. ಘಟನೆಯ ನಂತರ ವಿದ್ಯಾರ್ಥಿನಿ ತೀವ್ರ ಆಘಾತಕ್ಕೊಳಗಾಗಿದ್ದು, ತನ್ನ ಹಾಸ್ಟೆಲ್‌ನಿಂದ ಹೊರಬರುತ್ತಿಲ್ಲ ಎಂದು ಹೇಳಲಾಗಿದೆ. ಗಲಾಟೆಯಲ್ಲಿ ಆಕೆಯ ಸ್ನೇಹಿತೆ ಗಾಯಗೊಂಡಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

lokesh

Recent Posts

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

13 seconds ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

55 seconds ago

ಮಹಿಳಾ ಕಾಯ್ದೆ ಜಾರಿಗೆ ಬೆಂಬಲ ಕೋರಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಅನುಷ್ಠಾನ ಸಂಬಂಧ ಸರ್ವಪಕ್ಷಗಳ ಸಭೆ…

3 mins ago

ಪೊನ್ನಂಪೇಟೆ: ಕಾಡಾನೆ ಕಂಡು ದ್ವಿಚಕ್ರ ವಾಹನದಿಂದ ಬಿದ್ದ ಸವಾರ

ಪೊನ್ನಂಪೇಟೆ: ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ದ್ವಿಚಕ್ರ ವಾಹನ ಸವಾರರೊಬ್ಬರು ಕೆಳಗೆ ಬಿದ್ದು ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ…

17 mins ago

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ. ಕೃಷ್ಣ(11), ಹಾಗೂ ಗೌತಮ್‌(21)…

33 mins ago

ಉಪವಾಸ ಸತ್ಯಾಗ್ರಹ ಧರಣಿ ವೇಳೆ ವೃದ್ಧ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ…

51 mins ago