BREAKING NEWS

ಕಾಂಗ್ರೆಸ್‍ನವರ ಪಾಲಿಗೆ ದುಷ್ಕೃತ್ಯಗಳು ಕೇವಲ ಮಕ್ಕಳಾಟ : ಬಿಜೆಪಿ ಕಿಡಿ

ಬೆಂಗಳೂರು : ಕಲ್ಲು ತೂರುವವರು, ಬೆಂಕಿ ಹಚ್ಚುವವರು, ಬಾಂಬ್ ಸ್ಪೋಟಿಸುವವರು, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸುವವರು, ದೇಶದ್ರೋಹದ ಕೃತ್ಯ ಎಸಗುವವರು, ಪಾಕಿಸ್ಥಾನ್ ಜಿಂದಾಬಾದ್ ಎಂದು ಕೂಗುವವರು ಸಿದ್ದರಾಮಯ್ಯ ಅವರ ಸರ್ಕಾರದ ಕಣ್ಣಿಗೆ ಅಮಾಯಕರಂತೆ ಕಾಣುತ್ತಾರೆ. ಅವರೆಲ್ಲರೂ ಎಸಗುವ ದುಷ್ಕೃತ್ಯ ಕಾಂಗ್ರೆಸ್‍ನವರ ಪಾಲಿಗೆ ಕೇವಲ ಮಕ್ಕಳಾಟ ಎಂದು ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ದೇಶದ ಬಗ್ಗೆ ಕಿಂಚಿತ್ತೂ ಅಭಿಮಾನವಿಲ್ಲದ, ದೇಶಭಕ್ತರ ದೇಶಪ್ರೇಮವನ್ನು ಹಂಗಿಸುತ್ತಿದ್ದ, ದೇಶದ ವ್ಯವಸ್ಥೆಯನ್ನು ವಿದೇಶಗಳಲ್ಲಿ ವ್ಯಂಗ್ಯಕ್ಕೆ ಬಳಸಿಕೊಂಡ ಆಷಾಢಭೂತಿಗಳೆಲ್ಲರೂ ಸೇರಿ ತಮ್ಮ ಸ್ವಾರ್ಥ ಸಾಧನೆಯ ಗುಂಪಿಗೆ ಐ.ಎನ್.ಡಿ.ಐ.ಎ ಎಂದು ಹೆಸರಿಟ್ಟಿರುವುದು ಎಲ್ಲರಿಗೂ ತಿಳಿದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪರ ಆಡಳಿತದಿಂದ ಹತಾಶೆಗೊಳಗಾಗಿರುವ ವಿಪಕ್ಷಗಳು ತಮ್ಮ ಗುಂಪಿಗೆ ಐ.ಎನ್.ಡಿ.ಐ.ಎ ಎಂಬ ಹೆಸರಿಟ್ಟ ಮಾತ್ರಕ್ಕೆ ಅದು ದೇಶದ ಮೇಲೆ ಅವರಿಗಿರುವ ಅಭಿಮಾನವಲ್ಲ ಎಂದಿದೆ.

ಬದಲಿಗೆ ಸ್ವಾರ್ಥ ರಾಜಕೀಯ ಉದ್ದೇಶಗಳನ್ನು ಸಾಸಲು ಇಷ್ಟು ವರ್ಷಗಳ ಕಾಲ ಜಾತಿ, ಧರ್ಮಗಳನ್ನು ಬಳಸಿಕೊಂಡಿದ್ದವು, ಈ ಬಾರಿ ಸ್ವಲ್ಪ ಮುಂದುವರೆದು ಐ.ಎನ್.ಡಿ.ಐ.ಎಎಂದು ದೇಶದ ಹೆಸರು ಬಳಸಿಕೊಂಡಿವೆ ಎಂದು ದೂರಿದೆ.

ದೇಶದ್ರೋಹಿ ಸಂಘಟನೆಗಳಾದ ಇಂಡಿಯನ್ ಮುಜಾಹಿದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಹೆಸರಿನಲ್ಲಿಯೂ ಐ.ಎನ್.ಡಿ.ಐ.ಎ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಈಗ ವಿಪಕ್ಷಗಳು ಸೇರಿ ಮಾಡಿಕೊಂಡಿರುವ ಅವಕಾಶವಾದಿ ಗುಂಪು ಸಹ ಬಹುತೇಕ ಆ ಸಂಘಟನೆಗಳಂತೆ, ದೇಶದ ಹಿತದೃಷ್ಟಿಗಿಂತ, ತಮ್ಮ ವೈಯಕ್ತಿಕ ಹಿತ ಸಾಧನೆ ಹಾಗೂ ಕುಟುಂಬ ರಾಜಕಾರಣ ಮತ್ತು ಸ್ವಜನ ಪಕ್ಷಪಾತವನ್ನು ಪ್ರೇರೇಪಿಸುತ್ತದೆ ಎಂದು ಆರೋಪಿಸಿದೆ.

ಇಂತಹ ದಿಕ್ಕಿಲ್ಲದ, ಶೂನ್ಯ ನಾಯಕತ್ವದ, ವೈಯುಕ್ತಿಕ ಹಿತಾಸಕ್ತಿಗಳ ಸ್ಥಾಪನೆಗಾಗಿ ರೂಪುಗೊಂಡಿರುವ ಐ.ಎನ್.ಡಿ.ಐ.ಎ ನೈಜ ಕಾಂಗ್ರೆಸ್ ನವರು ಯಾವ ಹೆದರಿಕೆಯಿಂದ ಯುಪಿಎ ಹೆಸರನ್ನು ಬದಲಿಸಿದರು.
ಅವರ ಹಳೆಯ ಲೂಟಿಗಳನ್ನು ಮುಚ್ಚಿಡಲು ಇರಬೇಕು. ಜನರಿಗೆ ಐ.ಎನ್.ಡಿ.ಐ.ಎ ಹಾಗು ಯುಪಿಎ ನಡುವೆ ಯಾವುದೇ ವ್ಯತ್ಯಾಸವಿಲ್ಲ, ಅದು ಕೇವಲ ಹಳೇ ನೀರು ಹೊಸ ಬಾಟ್ಲಿಯಲ್ಲಿ ಹಾಕಿದ್ದು ಎಂಬುದು ಗೊತ್ತಾಗಬೇಕು ಎಂದಿದೆ.

lokesh

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

2 hours ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

2 hours ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

2 hours ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

3 hours ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

13 hours ago