BREAKING NEWS

ಕಾಂಗ್ರೆಸ್‍ನವರ ಪಾಲಿಗೆ ದುಷ್ಕೃತ್ಯಗಳು ಕೇವಲ ಮಕ್ಕಳಾಟ : ಬಿಜೆಪಿ ಕಿಡಿ

ಬೆಂಗಳೂರು : ಕಲ್ಲು ತೂರುವವರು, ಬೆಂಕಿ ಹಚ್ಚುವವರು, ಬಾಂಬ್ ಸ್ಪೋಟಿಸುವವರು, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸುವವರು, ದೇಶದ್ರೋಹದ ಕೃತ್ಯ ಎಸಗುವವರು, ಪಾಕಿಸ್ಥಾನ್ ಜಿಂದಾಬಾದ್ ಎಂದು ಕೂಗುವವರು ಸಿದ್ದರಾಮಯ್ಯ ಅವರ ಸರ್ಕಾರದ ಕಣ್ಣಿಗೆ ಅಮಾಯಕರಂತೆ ಕಾಣುತ್ತಾರೆ. ಅವರೆಲ್ಲರೂ ಎಸಗುವ ದುಷ್ಕೃತ್ಯ ಕಾಂಗ್ರೆಸ್‍ನವರ ಪಾಲಿಗೆ ಕೇವಲ ಮಕ್ಕಳಾಟ ಎಂದು ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ದೇಶದ ಬಗ್ಗೆ ಕಿಂಚಿತ್ತೂ ಅಭಿಮಾನವಿಲ್ಲದ, ದೇಶಭಕ್ತರ ದೇಶಪ್ರೇಮವನ್ನು ಹಂಗಿಸುತ್ತಿದ್ದ, ದೇಶದ ವ್ಯವಸ್ಥೆಯನ್ನು ವಿದೇಶಗಳಲ್ಲಿ ವ್ಯಂಗ್ಯಕ್ಕೆ ಬಳಸಿಕೊಂಡ ಆಷಾಢಭೂತಿಗಳೆಲ್ಲರೂ ಸೇರಿ ತಮ್ಮ ಸ್ವಾರ್ಥ ಸಾಧನೆಯ ಗುಂಪಿಗೆ ಐ.ಎನ್.ಡಿ.ಐ.ಎ ಎಂದು ಹೆಸರಿಟ್ಟಿರುವುದು ಎಲ್ಲರಿಗೂ ತಿಳಿದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪರ ಆಡಳಿತದಿಂದ ಹತಾಶೆಗೊಳಗಾಗಿರುವ ವಿಪಕ್ಷಗಳು ತಮ್ಮ ಗುಂಪಿಗೆ ಐ.ಎನ್.ಡಿ.ಐ.ಎ ಎಂಬ ಹೆಸರಿಟ್ಟ ಮಾತ್ರಕ್ಕೆ ಅದು ದೇಶದ ಮೇಲೆ ಅವರಿಗಿರುವ ಅಭಿಮಾನವಲ್ಲ ಎಂದಿದೆ.

ಬದಲಿಗೆ ಸ್ವಾರ್ಥ ರಾಜಕೀಯ ಉದ್ದೇಶಗಳನ್ನು ಸಾಸಲು ಇಷ್ಟು ವರ್ಷಗಳ ಕಾಲ ಜಾತಿ, ಧರ್ಮಗಳನ್ನು ಬಳಸಿಕೊಂಡಿದ್ದವು, ಈ ಬಾರಿ ಸ್ವಲ್ಪ ಮುಂದುವರೆದು ಐ.ಎನ್.ಡಿ.ಐ.ಎಎಂದು ದೇಶದ ಹೆಸರು ಬಳಸಿಕೊಂಡಿವೆ ಎಂದು ದೂರಿದೆ.

ದೇಶದ್ರೋಹಿ ಸಂಘಟನೆಗಳಾದ ಇಂಡಿಯನ್ ಮುಜಾಹಿದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಹೆಸರಿನಲ್ಲಿಯೂ ಐ.ಎನ್.ಡಿ.ಐ.ಎ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಈಗ ವಿಪಕ್ಷಗಳು ಸೇರಿ ಮಾಡಿಕೊಂಡಿರುವ ಅವಕಾಶವಾದಿ ಗುಂಪು ಸಹ ಬಹುತೇಕ ಆ ಸಂಘಟನೆಗಳಂತೆ, ದೇಶದ ಹಿತದೃಷ್ಟಿಗಿಂತ, ತಮ್ಮ ವೈಯಕ್ತಿಕ ಹಿತ ಸಾಧನೆ ಹಾಗೂ ಕುಟುಂಬ ರಾಜಕಾರಣ ಮತ್ತು ಸ್ವಜನ ಪಕ್ಷಪಾತವನ್ನು ಪ್ರೇರೇಪಿಸುತ್ತದೆ ಎಂದು ಆರೋಪಿಸಿದೆ.

ಇಂತಹ ದಿಕ್ಕಿಲ್ಲದ, ಶೂನ್ಯ ನಾಯಕತ್ವದ, ವೈಯುಕ್ತಿಕ ಹಿತಾಸಕ್ತಿಗಳ ಸ್ಥಾಪನೆಗಾಗಿ ರೂಪುಗೊಂಡಿರುವ ಐ.ಎನ್.ಡಿ.ಐ.ಎ ನೈಜ ಕಾಂಗ್ರೆಸ್ ನವರು ಯಾವ ಹೆದರಿಕೆಯಿಂದ ಯುಪಿಎ ಹೆಸರನ್ನು ಬದಲಿಸಿದರು.
ಅವರ ಹಳೆಯ ಲೂಟಿಗಳನ್ನು ಮುಚ್ಚಿಡಲು ಇರಬೇಕು. ಜನರಿಗೆ ಐ.ಎನ್.ಡಿ.ಐ.ಎ ಹಾಗು ಯುಪಿಎ ನಡುವೆ ಯಾವುದೇ ವ್ಯತ್ಯಾಸವಿಲ್ಲ, ಅದು ಕೇವಲ ಹಳೇ ನೀರು ಹೊಸ ಬಾಟ್ಲಿಯಲ್ಲಿ ಹಾಕಿದ್ದು ಎಂಬುದು ಗೊತ್ತಾಗಬೇಕು ಎಂದಿದೆ.

lokesh

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

7 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

7 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

7 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

7 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

7 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

10 hours ago