BREAKING NEWS

ಕಾಂಗ್ರೆಸ್‍ನವರ ಪಾಲಿಗೆ ದುಷ್ಕೃತ್ಯಗಳು ಕೇವಲ ಮಕ್ಕಳಾಟ : ಬಿಜೆಪಿ ಕಿಡಿ

ಬೆಂಗಳೂರು : ಕಲ್ಲು ತೂರುವವರು, ಬೆಂಕಿ ಹಚ್ಚುವವರು, ಬಾಂಬ್ ಸ್ಪೋಟಿಸುವವರು, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸುವವರು, ದೇಶದ್ರೋಹದ ಕೃತ್ಯ ಎಸಗುವವರು, ಪಾಕಿಸ್ಥಾನ್ ಜಿಂದಾಬಾದ್ ಎಂದು ಕೂಗುವವರು ಸಿದ್ದರಾಮಯ್ಯ ಅವರ ಸರ್ಕಾರದ ಕಣ್ಣಿಗೆ ಅಮಾಯಕರಂತೆ ಕಾಣುತ್ತಾರೆ. ಅವರೆಲ್ಲರೂ ಎಸಗುವ ದುಷ್ಕೃತ್ಯ ಕಾಂಗ್ರೆಸ್‍ನವರ ಪಾಲಿಗೆ ಕೇವಲ ಮಕ್ಕಳಾಟ ಎಂದು ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ದೇಶದ ಬಗ್ಗೆ ಕಿಂಚಿತ್ತೂ ಅಭಿಮಾನವಿಲ್ಲದ, ದೇಶಭಕ್ತರ ದೇಶಪ್ರೇಮವನ್ನು ಹಂಗಿಸುತ್ತಿದ್ದ, ದೇಶದ ವ್ಯವಸ್ಥೆಯನ್ನು ವಿದೇಶಗಳಲ್ಲಿ ವ್ಯಂಗ್ಯಕ್ಕೆ ಬಳಸಿಕೊಂಡ ಆಷಾಢಭೂತಿಗಳೆಲ್ಲರೂ ಸೇರಿ ತಮ್ಮ ಸ್ವಾರ್ಥ ಸಾಧನೆಯ ಗುಂಪಿಗೆ ಐ.ಎನ್.ಡಿ.ಐ.ಎ ಎಂದು ಹೆಸರಿಟ್ಟಿರುವುದು ಎಲ್ಲರಿಗೂ ತಿಳಿದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪರ ಆಡಳಿತದಿಂದ ಹತಾಶೆಗೊಳಗಾಗಿರುವ ವಿಪಕ್ಷಗಳು ತಮ್ಮ ಗುಂಪಿಗೆ ಐ.ಎನ್.ಡಿ.ಐ.ಎ ಎಂಬ ಹೆಸರಿಟ್ಟ ಮಾತ್ರಕ್ಕೆ ಅದು ದೇಶದ ಮೇಲೆ ಅವರಿಗಿರುವ ಅಭಿಮಾನವಲ್ಲ ಎಂದಿದೆ.

ಬದಲಿಗೆ ಸ್ವಾರ್ಥ ರಾಜಕೀಯ ಉದ್ದೇಶಗಳನ್ನು ಸಾಸಲು ಇಷ್ಟು ವರ್ಷಗಳ ಕಾಲ ಜಾತಿ, ಧರ್ಮಗಳನ್ನು ಬಳಸಿಕೊಂಡಿದ್ದವು, ಈ ಬಾರಿ ಸ್ವಲ್ಪ ಮುಂದುವರೆದು ಐ.ಎನ್.ಡಿ.ಐ.ಎಎಂದು ದೇಶದ ಹೆಸರು ಬಳಸಿಕೊಂಡಿವೆ ಎಂದು ದೂರಿದೆ.

ದೇಶದ್ರೋಹಿ ಸಂಘಟನೆಗಳಾದ ಇಂಡಿಯನ್ ಮುಜಾಹಿದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಹೆಸರಿನಲ್ಲಿಯೂ ಐ.ಎನ್.ಡಿ.ಐ.ಎ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಈಗ ವಿಪಕ್ಷಗಳು ಸೇರಿ ಮಾಡಿಕೊಂಡಿರುವ ಅವಕಾಶವಾದಿ ಗುಂಪು ಸಹ ಬಹುತೇಕ ಆ ಸಂಘಟನೆಗಳಂತೆ, ದೇಶದ ಹಿತದೃಷ್ಟಿಗಿಂತ, ತಮ್ಮ ವೈಯಕ್ತಿಕ ಹಿತ ಸಾಧನೆ ಹಾಗೂ ಕುಟುಂಬ ರಾಜಕಾರಣ ಮತ್ತು ಸ್ವಜನ ಪಕ್ಷಪಾತವನ್ನು ಪ್ರೇರೇಪಿಸುತ್ತದೆ ಎಂದು ಆರೋಪಿಸಿದೆ.

ಇಂತಹ ದಿಕ್ಕಿಲ್ಲದ, ಶೂನ್ಯ ನಾಯಕತ್ವದ, ವೈಯುಕ್ತಿಕ ಹಿತಾಸಕ್ತಿಗಳ ಸ್ಥಾಪನೆಗಾಗಿ ರೂಪುಗೊಂಡಿರುವ ಐ.ಎನ್.ಡಿ.ಐ.ಎ ನೈಜ ಕಾಂಗ್ರೆಸ್ ನವರು ಯಾವ ಹೆದರಿಕೆಯಿಂದ ಯುಪಿಎ ಹೆಸರನ್ನು ಬದಲಿಸಿದರು.
ಅವರ ಹಳೆಯ ಲೂಟಿಗಳನ್ನು ಮುಚ್ಚಿಡಲು ಇರಬೇಕು. ಜನರಿಗೆ ಐ.ಎನ್.ಡಿ.ಐ.ಎ ಹಾಗು ಯುಪಿಎ ನಡುವೆ ಯಾವುದೇ ವ್ಯತ್ಯಾಸವಿಲ್ಲ, ಅದು ಕೇವಲ ಹಳೇ ನೀರು ಹೊಸ ಬಾಟ್ಲಿಯಲ್ಲಿ ಹಾಕಿದ್ದು ಎಂಬುದು ಗೊತ್ತಾಗಬೇಕು ಎಂದಿದೆ.

lokesh

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago