ಕಠ್ಮಂಡು : ಮೌಂಟ್ ಎವರೆಸ್ಟ್ ಬಳಿ ಇಂದು ಬೆಳಗ್ಗೆ ನಾಪತ್ತೆಯಾಗಿದ್ದ ಆರು ಜನರಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿದ್ದು ಹೆಲಿಕಾಪ್ಟರ್ ನ ಅವಶೇಷಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ತಂಡವು ಅಪಘಾತದ ಸ್ಥಳದಿಂದ ಐದು ಮೃತದೇಹಗಳನ್ನು ಹೊರತೆಗೆದಿದೆ. ಖಾಸಗಿ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಪರ್ವತ ಪ್ರದೇಶವಾದ ಸೊಲುಖುಂಬು ಜಿಲ್ಲೆಯ ಲಂಜುರಾದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಲಿಕಾಪ್ಟರ್ ಬೆಟ್ಟದ ಮೇಲಿರುವ ಮರಕ್ಕೆ ಡಿಕ್ಕಿ ಹೊಡೆದಿದ್ದು, ಇದು ಪತನಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.ಲಾಮ್ಜುರಾ ಪ್ರದೇಶದ ಚಿಹಂದಂಡದಲ್ಲಿ ಹೆಲಿಕಾಪ್ಟರ್ ಪತನಗೊಳ್ಳುವ ಕೆಲವೇ ಸೆಕೆಂಡುಗಳ ಮೊದಲು ದೊಡ್ಡ ಸ್ಫೋಟದ ಶಬ್ದ ಕೇಳಿದೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.
ಮನಂಗ್ ಏರ್ ಫ್ಲೀಟ್ ನ ಒಂದು ಭಾಗವಾದ ಹೆಲಿಕಾಪ್ಟರ್ ಸೊಲುಖುಂಬು ಜಿಲ್ಲೆಯ ಸುರ್ಕಿಯಿಂದ ಬೆಳಿಗ್ಗೆ 9.45 ಕ್ಕೆ ರಾಜಧಾನಿ ಕಠ್ಮಂಡುವಿಗೆ ಹೊರಟಿತು ಹಾಗೂ 15 ನಿಮಿಷಗಳಲ್ಲಿ ತನ್ನ ಸಂಪರ್ಕವನ್ನು ಕಳೆದುಕೊಂಡಿತು ಎಂದು ದಿ ಕಠ್ಮಂಡು ಪೋಸ್ಟ್ ನಲ್ಲಿ ವರದಿ ಮಾಡಿದೆ.
ಸೊಲುಖುಂಬು ಜಿಲ್ಲೆಯ ಲಿಖುಪಿಕೆ ಗ್ರಾಮೀಣ ಪುರಸಭೆಯ ಲಾಮ್ಜುರಾದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ವರದಿ ತಿಳಿಸಿದೆ.
ಹೆಲಿಕಾಪ್ಟರ್ ನಲ್ಲಿ ಐವರು ವಿದೇಶಿ ಪ್ರಜೆಗಳಿದ್ದರು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಹೆಲಿಕಾಪ್ಟರ್ ನಲ್ಲಿ ಒಟ್ಟು ಆರು ಮಂದಿ ಇದ್ದರು. ಹಿರಿಯ ಕ್ಯಾಪ್ಟನ್ ಚೆಟ್ ಗುರುಂಗ್ ಅವರು ಪೈಲಟ್ ಆಗಿದ್ದಾರೆ ಎಂದು Himalayan Times ಪತ್ರಿಕೆಯು ಮೂಲವನ್ನು ಉಲ್ಲೇಖಿಸಿ ವರದಿ ಮಾಡಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…
ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…