BREAKING NEWS

ಪಟ್ಟಭದ್ರ ಹಿತಾಸಕ್ತಿಗಳಿಂದ ಹಿಂಡನ್‌ಬರ್ಗ್‌ ವರದಿಯ ದುರ್ಬಳಕೆ: ಅದಾನಿ ಕಿಡಿ

ಅಮೆರಿಕ ಮೂಲದ ಶಾರ್ಟ್‌ ಸೆಲ್ಲಿಂಗ್‌ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ವರದಿಯ ಪರಿಣಾಮಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ದುರ್ಬಳಕೆ ಮಾಡಿಕೊಂಡವು ಎಂದು ಅದಾನಿ ಸಮೂಹದ ಮಾಲೀಕ ಗೌತಮ್ ಅದಾನಿ ಕಿಡಿಕಾರಿದ್ದಾರೆ.

ಅದಾನಿ ಗ್ರೂಪ್‌ ವಿರುದ್ಧ ಹಿಂಡನ್‌ಬರ್ಗ್‌ ವರದಿ ಪ್ರಕಟಿಸಿದ ಬಳಿಕ ಅದಾನಿ ಸಮೂಹದ ಕಂಪನಿಗಳ ಷೇರುಗಳು ದಿಢೀರ್‌ ಕುಸಿತ ಕಂಡಿದ್ದವು. ಒಂದು ಹಂತದಲ್ಲಿ ಅದಾನಿ ಗ್ರೂಪ್‌ ಮುಳಗಡೆಯಾಗುವ ಆತಂಕ ಎದುರಾಗಿತ್ತು. ಇದು ಷೇರು ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಭಾರತದ ರಾಜಕಾರಣದಲ್ಲೂ ಕೋಲಾಹಲ ಎಬ್ಬಿಸಿತ್ತು.

ಇದೀಗ ವರದಿ ಬಿಡುಗಡೆಯಾಗಿ ಹಲವು ತಿಂಗಳುಗಳ ಬಳಿಕ ಷೇರುದಾರರಿಗೆ ಪತ್ರ ಬರೆದಿರುವ ಗೌತಮ್‌ ಅದಾನಿ ಈ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. “ಹಿಂಡನ್‌ಬರ್ಗ್‌ ವರದಿಯಿಂದ ಹಲವಾರು ಪ್ರತಿಕೂಲ ಪರಿಣಾಮಗಳನ್ನು ಎದುರಿಸಬೇಕಾಯಿತು. ನಾವು ತಕ್ಷಣವೇ ವರದಿಯನ್ನು ಸಮಗ್ರವಾಗಿ ಖಂಡಿಸಿದ್ದರೂ ವಿವಿಧ ಪಟ್ಟಭದ್ರ ಹಿತಾಸಕ್ತಿಗಳು, ಶಾರ್ಟ್‌ ಸೆಲ್ಲಿಂಗ್‌ ಸಂಸ್ಥೆಯ ವರದಿಯನ್ನು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸಿದವು. ಇವು ವಿವಿಧ ಸುದ್ಧಿ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಮಾಹಿತಿ ಹರಡಿದವು,” ಎಂಬುದಾಗಿ ಅದಾನಿ ಅವರು ಷೇರುದಾರರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.
2023ರ ಜನವರಿ 24ರಂದು ಹಿಂಡನ್‌ಬರ್ಗ್ ವರದಿ ಬಿಡುಗಡೆಯಾಗುವ ಮೊದಲು ಅದಾನಿ ಸಮೂಹದ ಕಂಪನಿಗಳ ಒಟ್ಟು ಮಾರುಕಟ್ಟೆ ಬಂಡವಾಳ 19.2 ಲಕ್ಷ ಕೋಟಿ ರೂ. ಇತ್ತು. ವರದಿ ಬಿಡುಗಡೆಯಾಗಿ ಇಂದಿಗೆ ಐದು ತಿಂಗಳೇ ಕಳೆದಿದ್ದರೂ ಕಂಪನಿಗಳ ಮಾರುಕಟ್ಟೆ ಬಂಡವಾಳವು ಸುಮಾರು 10 ಲಕ್ಷ ಕೋಟಿ ರೂ. ಆಸುಪಾಸಿನಲ್ಲೇ ಇದೆ. ಇದರಿಂದ ಅದಾನಿ ಷೇರುಗಳು ತಮ್ಮ ಹಿಂದಿನ ಗತವೈಭವದ ದಿನಗಳಿಗೆ ಮರಳಲು ಸಾಧ್ಯವಾಗಿಲ್ಲ.

ಇನ್ನೂ ಪೂರ್ಣಗೊಳ್ಳದ ಸೆಬಿ ತನಿಖೆ

ಹಿಂಡನ್‌ಬರ್ಗ್‌ನ ಆರೋಪಗಳ ಕುರಿತು ಮಾರುಕಟ್ಟೆ ನಿಯಂತ್ರಕ ಸೆಬಿ ತನಿಖೆ ನಡೆಸುತ್ತಿದ್ದು, ಇದು ಇನ್ನೂ ಪೂರ್ಣಗೊಂಡಿಲ್ಲ. ಇವೆಲ್ಲದರ ನಡುವೆ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು, ಅದಾನಿ ಕಂಪನಿಗಳ ಷೇರುಗಳ ಬೆಲೆಯಲ್ಲಿ ದಿಢೀರ್‌ ಏರಿಕೆಗೆ ಕಾರಣವಾಗಿರಬಹುದಾದ ಷೇರು ತಿರುಚುವಿಕೆಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಪುರಾವೆ ಸಿಕ್ಕಿಲ್ಲ ಎಂದು ಹೇಳಿದೆ. ತಜ್ಞ ಸಮಿತಿಯ ತನಿಖೆಯಲ್ಲಿ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯ ವೈಫಲ್ಯವೂ ಕಂಡುಬಂದಿಲ್ಲ ಎಂಬುದಾಗಿ ಗೌತಮ್‌ ಅದಾನಿ ತಿಳಿಸಿದ್ದಾರೆ.

ಮುಂದಿನ ತಿಂಗಳು ಸೆಬಿ ತನ್ನ ತನಿಖಾ ವರದಿಯನ್ನು ಸಲ್ಲಿಸಲಿದೆ. ತಮ್ಮ ಸಂಘಟಿತ ಸಂಸ್ಥೆಯು ಆಡಳಿತ ಮತ್ತು ಬಹಿರಂಗಪಡಿಸುವಿಕೆಯ ಮಾನದಂಡಗಳ ಬಗ್ಗೆ ವಿಶ್ವಾಸವನ್ನು ಹೊಂದಿದೆ ಎಂದು ಒಂದು ಕಾಲದ ಏಷ್ಯಾದ ನಂ.1 ಹಾಗೂ ವಿಶ್ವದ ಮೂರನೇ ಅತಿ ದೊಡ್ಡ ಶ್ರೀಮಂತರಾಗಿದ್ದ ಗೌತಮ್‌ ಅದಾನಿ ಹೇಳಿದ್ದಾರೆ.

ಹಿಂಡನ್‌ಬರ್ಗ್‌ ತನ್ನ ವರದಿಯಲ್ಲಿ ಅದಾನಿ ಸಮೂಹವು ದಶಕಗಳಿಂದ ಷೇರು ತಿರುಚುವಿಕೆ ಹಾಗೂ ಲೆಕ್ಕಪತ್ರ ವಂಚನೆಯಲ್ಲಿ ತೊಡಗಿದೆ ಎಂದು ಆರೋಪಿಸಿತ್ತು. ಇದು ಉದ್ದೇಶಿತ ತಪ್ಪು ಮಾಹಿತಿಯಾಗಿದ್ದು, ಅದಾನಿ ಗ್ರೂಪ್‌ನ ಖ್ಯಾತಿಯನ್ನು ಹಾಳುಗೆಡವುವ ಮತ್ತು ಷೇರುಗಳ ಬೆಲೆಗಳನ್ನು ಉದ್ದೇಶಪೂರ್ವಕವಾಗಿ ಕಡಿಮೆ ಮಾಡುವ ಮೂಲಕ ಲಾಭ ಗಳಿಸುವ ಗುರಿ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ.

andolanait

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

8 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

9 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

10 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

10 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

10 hours ago