ಅಮೆರಿಕ ಮೂಲದ ಶಾರ್ಟ್ ಸೆಲ್ಲಿಂಗ್ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ವರದಿಯ ಪರಿಣಾಮಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ದುರ್ಬಳಕೆ ಮಾಡಿಕೊಂಡವು ಎಂದು ಅದಾನಿ ಸಮೂಹದ ಮಾಲೀಕ ಗೌತಮ್ ಅದಾನಿ ಕಿಡಿಕಾರಿದ್ದಾರೆ.
ಅದಾನಿ ಗ್ರೂಪ್ ವಿರುದ್ಧ ಹಿಂಡನ್ಬರ್ಗ್ ವರದಿ ಪ್ರಕಟಿಸಿದ ಬಳಿಕ ಅದಾನಿ ಸಮೂಹದ ಕಂಪನಿಗಳ ಷೇರುಗಳು ದಿಢೀರ್ ಕುಸಿತ ಕಂಡಿದ್ದವು. ಒಂದು ಹಂತದಲ್ಲಿ ಅದಾನಿ ಗ್ರೂಪ್ ಮುಳಗಡೆಯಾಗುವ ಆತಂಕ ಎದುರಾಗಿತ್ತು. ಇದು ಷೇರು ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಭಾರತದ ರಾಜಕಾರಣದಲ್ಲೂ ಕೋಲಾಹಲ ಎಬ್ಬಿಸಿತ್ತು.
ಹಿಂಡನ್ಬರ್ಗ್ನ ಆರೋಪಗಳ ಕುರಿತು ಮಾರುಕಟ್ಟೆ ನಿಯಂತ್ರಕ ಸೆಬಿ ತನಿಖೆ ನಡೆಸುತ್ತಿದ್ದು, ಇದು ಇನ್ನೂ ಪೂರ್ಣಗೊಂಡಿಲ್ಲ. ಇವೆಲ್ಲದರ ನಡುವೆ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು, ಅದಾನಿ ಕಂಪನಿಗಳ ಷೇರುಗಳ ಬೆಲೆಯಲ್ಲಿ ದಿಢೀರ್ ಏರಿಕೆಗೆ ಕಾರಣವಾಗಿರಬಹುದಾದ ಷೇರು ತಿರುಚುವಿಕೆಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಪುರಾವೆ ಸಿಕ್ಕಿಲ್ಲ ಎಂದು ಹೇಳಿದೆ. ತಜ್ಞ ಸಮಿತಿಯ ತನಿಖೆಯಲ್ಲಿ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯ ವೈಫಲ್ಯವೂ ಕಂಡುಬಂದಿಲ್ಲ ಎಂಬುದಾಗಿ ಗೌತಮ್ ಅದಾನಿ ತಿಳಿಸಿದ್ದಾರೆ.
ಹಿಂಡನ್ಬರ್ಗ್ ತನ್ನ ವರದಿಯಲ್ಲಿ ಅದಾನಿ ಸಮೂಹವು ದಶಕಗಳಿಂದ ಷೇರು ತಿರುಚುವಿಕೆ ಹಾಗೂ ಲೆಕ್ಕಪತ್ರ ವಂಚನೆಯಲ್ಲಿ ತೊಡಗಿದೆ ಎಂದು ಆರೋಪಿಸಿತ್ತು. ಇದು ಉದ್ದೇಶಿತ ತಪ್ಪು ಮಾಹಿತಿಯಾಗಿದ್ದು, ಅದಾನಿ ಗ್ರೂಪ್ನ ಖ್ಯಾತಿಯನ್ನು ಹಾಳುಗೆಡವುವ ಮತ್ತು ಷೇರುಗಳ ಬೆಲೆಗಳನ್ನು ಉದ್ದೇಶಪೂರ್ವಕವಾಗಿ ಕಡಿಮೆ ಮಾಡುವ ಮೂಲಕ ಲಾಭ ಗಳಿಸುವ ಗುರಿ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ.
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…