BREAKING NEWS

ಪಟ್ಟಭದ್ರ ಹಿತಾಸಕ್ತಿಗಳಿಂದ ಹಿಂಡನ್‌ಬರ್ಗ್‌ ವರದಿಯ ದುರ್ಬಳಕೆ: ಅದಾನಿ ಕಿಡಿ

ಅಮೆರಿಕ ಮೂಲದ ಶಾರ್ಟ್‌ ಸೆಲ್ಲಿಂಗ್‌ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ವರದಿಯ ಪರಿಣಾಮಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ದುರ್ಬಳಕೆ ಮಾಡಿಕೊಂಡವು ಎಂದು ಅದಾನಿ ಸಮೂಹದ ಮಾಲೀಕ ಗೌತಮ್ ಅದಾನಿ ಕಿಡಿಕಾರಿದ್ದಾರೆ.

ಅದಾನಿ ಗ್ರೂಪ್‌ ವಿರುದ್ಧ ಹಿಂಡನ್‌ಬರ್ಗ್‌ ವರದಿ ಪ್ರಕಟಿಸಿದ ಬಳಿಕ ಅದಾನಿ ಸಮೂಹದ ಕಂಪನಿಗಳ ಷೇರುಗಳು ದಿಢೀರ್‌ ಕುಸಿತ ಕಂಡಿದ್ದವು. ಒಂದು ಹಂತದಲ್ಲಿ ಅದಾನಿ ಗ್ರೂಪ್‌ ಮುಳಗಡೆಯಾಗುವ ಆತಂಕ ಎದುರಾಗಿತ್ತು. ಇದು ಷೇರು ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಭಾರತದ ರಾಜಕಾರಣದಲ್ಲೂ ಕೋಲಾಹಲ ಎಬ್ಬಿಸಿತ್ತು.

ಇದೀಗ ವರದಿ ಬಿಡುಗಡೆಯಾಗಿ ಹಲವು ತಿಂಗಳುಗಳ ಬಳಿಕ ಷೇರುದಾರರಿಗೆ ಪತ್ರ ಬರೆದಿರುವ ಗೌತಮ್‌ ಅದಾನಿ ಈ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. “ಹಿಂಡನ್‌ಬರ್ಗ್‌ ವರದಿಯಿಂದ ಹಲವಾರು ಪ್ರತಿಕೂಲ ಪರಿಣಾಮಗಳನ್ನು ಎದುರಿಸಬೇಕಾಯಿತು. ನಾವು ತಕ್ಷಣವೇ ವರದಿಯನ್ನು ಸಮಗ್ರವಾಗಿ ಖಂಡಿಸಿದ್ದರೂ ವಿವಿಧ ಪಟ್ಟಭದ್ರ ಹಿತಾಸಕ್ತಿಗಳು, ಶಾರ್ಟ್‌ ಸೆಲ್ಲಿಂಗ್‌ ಸಂಸ್ಥೆಯ ವರದಿಯನ್ನು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸಿದವು. ಇವು ವಿವಿಧ ಸುದ್ಧಿ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಮಾಹಿತಿ ಹರಡಿದವು,” ಎಂಬುದಾಗಿ ಅದಾನಿ ಅವರು ಷೇರುದಾರರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.
2023ರ ಜನವರಿ 24ರಂದು ಹಿಂಡನ್‌ಬರ್ಗ್ ವರದಿ ಬಿಡುಗಡೆಯಾಗುವ ಮೊದಲು ಅದಾನಿ ಸಮೂಹದ ಕಂಪನಿಗಳ ಒಟ್ಟು ಮಾರುಕಟ್ಟೆ ಬಂಡವಾಳ 19.2 ಲಕ್ಷ ಕೋಟಿ ರೂ. ಇತ್ತು. ವರದಿ ಬಿಡುಗಡೆಯಾಗಿ ಇಂದಿಗೆ ಐದು ತಿಂಗಳೇ ಕಳೆದಿದ್ದರೂ ಕಂಪನಿಗಳ ಮಾರುಕಟ್ಟೆ ಬಂಡವಾಳವು ಸುಮಾರು 10 ಲಕ್ಷ ಕೋಟಿ ರೂ. ಆಸುಪಾಸಿನಲ್ಲೇ ಇದೆ. ಇದರಿಂದ ಅದಾನಿ ಷೇರುಗಳು ತಮ್ಮ ಹಿಂದಿನ ಗತವೈಭವದ ದಿನಗಳಿಗೆ ಮರಳಲು ಸಾಧ್ಯವಾಗಿಲ್ಲ.

ಇನ್ನೂ ಪೂರ್ಣಗೊಳ್ಳದ ಸೆಬಿ ತನಿಖೆ

ಹಿಂಡನ್‌ಬರ್ಗ್‌ನ ಆರೋಪಗಳ ಕುರಿತು ಮಾರುಕಟ್ಟೆ ನಿಯಂತ್ರಕ ಸೆಬಿ ತನಿಖೆ ನಡೆಸುತ್ತಿದ್ದು, ಇದು ಇನ್ನೂ ಪೂರ್ಣಗೊಂಡಿಲ್ಲ. ಇವೆಲ್ಲದರ ನಡುವೆ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು, ಅದಾನಿ ಕಂಪನಿಗಳ ಷೇರುಗಳ ಬೆಲೆಯಲ್ಲಿ ದಿಢೀರ್‌ ಏರಿಕೆಗೆ ಕಾರಣವಾಗಿರಬಹುದಾದ ಷೇರು ತಿರುಚುವಿಕೆಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಪುರಾವೆ ಸಿಕ್ಕಿಲ್ಲ ಎಂದು ಹೇಳಿದೆ. ತಜ್ಞ ಸಮಿತಿಯ ತನಿಖೆಯಲ್ಲಿ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯ ವೈಫಲ್ಯವೂ ಕಂಡುಬಂದಿಲ್ಲ ಎಂಬುದಾಗಿ ಗೌತಮ್‌ ಅದಾನಿ ತಿಳಿಸಿದ್ದಾರೆ.

ಮುಂದಿನ ತಿಂಗಳು ಸೆಬಿ ತನ್ನ ತನಿಖಾ ವರದಿಯನ್ನು ಸಲ್ಲಿಸಲಿದೆ. ತಮ್ಮ ಸಂಘಟಿತ ಸಂಸ್ಥೆಯು ಆಡಳಿತ ಮತ್ತು ಬಹಿರಂಗಪಡಿಸುವಿಕೆಯ ಮಾನದಂಡಗಳ ಬಗ್ಗೆ ವಿಶ್ವಾಸವನ್ನು ಹೊಂದಿದೆ ಎಂದು ಒಂದು ಕಾಲದ ಏಷ್ಯಾದ ನಂ.1 ಹಾಗೂ ವಿಶ್ವದ ಮೂರನೇ ಅತಿ ದೊಡ್ಡ ಶ್ರೀಮಂತರಾಗಿದ್ದ ಗೌತಮ್‌ ಅದಾನಿ ಹೇಳಿದ್ದಾರೆ.

ಹಿಂಡನ್‌ಬರ್ಗ್‌ ತನ್ನ ವರದಿಯಲ್ಲಿ ಅದಾನಿ ಸಮೂಹವು ದಶಕಗಳಿಂದ ಷೇರು ತಿರುಚುವಿಕೆ ಹಾಗೂ ಲೆಕ್ಕಪತ್ರ ವಂಚನೆಯಲ್ಲಿ ತೊಡಗಿದೆ ಎಂದು ಆರೋಪಿಸಿತ್ತು. ಇದು ಉದ್ದೇಶಿತ ತಪ್ಪು ಮಾಹಿತಿಯಾಗಿದ್ದು, ಅದಾನಿ ಗ್ರೂಪ್‌ನ ಖ್ಯಾತಿಯನ್ನು ಹಾಳುಗೆಡವುವ ಮತ್ತು ಷೇರುಗಳ ಬೆಲೆಗಳನ್ನು ಉದ್ದೇಶಪೂರ್ವಕವಾಗಿ ಕಡಿಮೆ ಮಾಡುವ ಮೂಲಕ ಲಾಭ ಗಳಿಸುವ ಗುರಿ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ.

andolanait

Recent Posts

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

1 hour ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

1 hour ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

1 hour ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

4 hours ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

4 hours ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

4 hours ago