BREAKING NEWS

ಪಟ್ಟಭದ್ರ ಹಿತಾಸಕ್ತಿಗಳಿಂದ ಹಿಂಡನ್‌ಬರ್ಗ್‌ ವರದಿಯ ದುರ್ಬಳಕೆ: ಅದಾನಿ ಕಿಡಿ

ಅಮೆರಿಕ ಮೂಲದ ಶಾರ್ಟ್‌ ಸೆಲ್ಲಿಂಗ್‌ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ವರದಿಯ ಪರಿಣಾಮಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ದುರ್ಬಳಕೆ ಮಾಡಿಕೊಂಡವು ಎಂದು ಅದಾನಿ ಸಮೂಹದ ಮಾಲೀಕ ಗೌತಮ್ ಅದಾನಿ ಕಿಡಿಕಾರಿದ್ದಾರೆ.

ಅದಾನಿ ಗ್ರೂಪ್‌ ವಿರುದ್ಧ ಹಿಂಡನ್‌ಬರ್ಗ್‌ ವರದಿ ಪ್ರಕಟಿಸಿದ ಬಳಿಕ ಅದಾನಿ ಸಮೂಹದ ಕಂಪನಿಗಳ ಷೇರುಗಳು ದಿಢೀರ್‌ ಕುಸಿತ ಕಂಡಿದ್ದವು. ಒಂದು ಹಂತದಲ್ಲಿ ಅದಾನಿ ಗ್ರೂಪ್‌ ಮುಳಗಡೆಯಾಗುವ ಆತಂಕ ಎದುರಾಗಿತ್ತು. ಇದು ಷೇರು ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಭಾರತದ ರಾಜಕಾರಣದಲ್ಲೂ ಕೋಲಾಹಲ ಎಬ್ಬಿಸಿತ್ತು.

ಇದೀಗ ವರದಿ ಬಿಡುಗಡೆಯಾಗಿ ಹಲವು ತಿಂಗಳುಗಳ ಬಳಿಕ ಷೇರುದಾರರಿಗೆ ಪತ್ರ ಬರೆದಿರುವ ಗೌತಮ್‌ ಅದಾನಿ ಈ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. “ಹಿಂಡನ್‌ಬರ್ಗ್‌ ವರದಿಯಿಂದ ಹಲವಾರು ಪ್ರತಿಕೂಲ ಪರಿಣಾಮಗಳನ್ನು ಎದುರಿಸಬೇಕಾಯಿತು. ನಾವು ತಕ್ಷಣವೇ ವರದಿಯನ್ನು ಸಮಗ್ರವಾಗಿ ಖಂಡಿಸಿದ್ದರೂ ವಿವಿಧ ಪಟ್ಟಭದ್ರ ಹಿತಾಸಕ್ತಿಗಳು, ಶಾರ್ಟ್‌ ಸೆಲ್ಲಿಂಗ್‌ ಸಂಸ್ಥೆಯ ವರದಿಯನ್ನು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸಿದವು. ಇವು ವಿವಿಧ ಸುದ್ಧಿ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಮಾಹಿತಿ ಹರಡಿದವು,” ಎಂಬುದಾಗಿ ಅದಾನಿ ಅವರು ಷೇರುದಾರರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.
2023ರ ಜನವರಿ 24ರಂದು ಹಿಂಡನ್‌ಬರ್ಗ್ ವರದಿ ಬಿಡುಗಡೆಯಾಗುವ ಮೊದಲು ಅದಾನಿ ಸಮೂಹದ ಕಂಪನಿಗಳ ಒಟ್ಟು ಮಾರುಕಟ್ಟೆ ಬಂಡವಾಳ 19.2 ಲಕ್ಷ ಕೋಟಿ ರೂ. ಇತ್ತು. ವರದಿ ಬಿಡುಗಡೆಯಾಗಿ ಇಂದಿಗೆ ಐದು ತಿಂಗಳೇ ಕಳೆದಿದ್ದರೂ ಕಂಪನಿಗಳ ಮಾರುಕಟ್ಟೆ ಬಂಡವಾಳವು ಸುಮಾರು 10 ಲಕ್ಷ ಕೋಟಿ ರೂ. ಆಸುಪಾಸಿನಲ್ಲೇ ಇದೆ. ಇದರಿಂದ ಅದಾನಿ ಷೇರುಗಳು ತಮ್ಮ ಹಿಂದಿನ ಗತವೈಭವದ ದಿನಗಳಿಗೆ ಮರಳಲು ಸಾಧ್ಯವಾಗಿಲ್ಲ.

ಇನ್ನೂ ಪೂರ್ಣಗೊಳ್ಳದ ಸೆಬಿ ತನಿಖೆ

ಹಿಂಡನ್‌ಬರ್ಗ್‌ನ ಆರೋಪಗಳ ಕುರಿತು ಮಾರುಕಟ್ಟೆ ನಿಯಂತ್ರಕ ಸೆಬಿ ತನಿಖೆ ನಡೆಸುತ್ತಿದ್ದು, ಇದು ಇನ್ನೂ ಪೂರ್ಣಗೊಂಡಿಲ್ಲ. ಇವೆಲ್ಲದರ ನಡುವೆ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು, ಅದಾನಿ ಕಂಪನಿಗಳ ಷೇರುಗಳ ಬೆಲೆಯಲ್ಲಿ ದಿಢೀರ್‌ ಏರಿಕೆಗೆ ಕಾರಣವಾಗಿರಬಹುದಾದ ಷೇರು ತಿರುಚುವಿಕೆಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಪುರಾವೆ ಸಿಕ್ಕಿಲ್ಲ ಎಂದು ಹೇಳಿದೆ. ತಜ್ಞ ಸಮಿತಿಯ ತನಿಖೆಯಲ್ಲಿ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯ ವೈಫಲ್ಯವೂ ಕಂಡುಬಂದಿಲ್ಲ ಎಂಬುದಾಗಿ ಗೌತಮ್‌ ಅದಾನಿ ತಿಳಿಸಿದ್ದಾರೆ.

ಮುಂದಿನ ತಿಂಗಳು ಸೆಬಿ ತನ್ನ ತನಿಖಾ ವರದಿಯನ್ನು ಸಲ್ಲಿಸಲಿದೆ. ತಮ್ಮ ಸಂಘಟಿತ ಸಂಸ್ಥೆಯು ಆಡಳಿತ ಮತ್ತು ಬಹಿರಂಗಪಡಿಸುವಿಕೆಯ ಮಾನದಂಡಗಳ ಬಗ್ಗೆ ವಿಶ್ವಾಸವನ್ನು ಹೊಂದಿದೆ ಎಂದು ಒಂದು ಕಾಲದ ಏಷ್ಯಾದ ನಂ.1 ಹಾಗೂ ವಿಶ್ವದ ಮೂರನೇ ಅತಿ ದೊಡ್ಡ ಶ್ರೀಮಂತರಾಗಿದ್ದ ಗೌತಮ್‌ ಅದಾನಿ ಹೇಳಿದ್ದಾರೆ.

ಹಿಂಡನ್‌ಬರ್ಗ್‌ ತನ್ನ ವರದಿಯಲ್ಲಿ ಅದಾನಿ ಸಮೂಹವು ದಶಕಗಳಿಂದ ಷೇರು ತಿರುಚುವಿಕೆ ಹಾಗೂ ಲೆಕ್ಕಪತ್ರ ವಂಚನೆಯಲ್ಲಿ ತೊಡಗಿದೆ ಎಂದು ಆರೋಪಿಸಿತ್ತು. ಇದು ಉದ್ದೇಶಿತ ತಪ್ಪು ಮಾಹಿತಿಯಾಗಿದ್ದು, ಅದಾನಿ ಗ್ರೂಪ್‌ನ ಖ್ಯಾತಿಯನ್ನು ಹಾಳುಗೆಡವುವ ಮತ್ತು ಷೇರುಗಳ ಬೆಲೆಗಳನ್ನು ಉದ್ದೇಶಪೂರ್ವಕವಾಗಿ ಕಡಿಮೆ ಮಾಡುವ ಮೂಲಕ ಲಾಭ ಗಳಿಸುವ ಗುರಿ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ.

andolanait

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago