ಅಮೆರಿಕ ಮೂಲದ ಶಾರ್ಟ್ ಸೆಲ್ಲಿಂಗ್ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ವರದಿಯ ಪರಿಣಾಮಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ದುರ್ಬಳಕೆ ಮಾಡಿಕೊಂಡವು ಎಂದು ಅದಾನಿ ಸಮೂಹದ ಮಾಲೀಕ ಗೌತಮ್ ಅದಾನಿ ಕಿಡಿಕಾರಿದ್ದಾರೆ.
ಅದಾನಿ ಗ್ರೂಪ್ ವಿರುದ್ಧ ಹಿಂಡನ್ಬರ್ಗ್ ವರದಿ ಪ್ರಕಟಿಸಿದ ಬಳಿಕ ಅದಾನಿ ಸಮೂಹದ ಕಂಪನಿಗಳ ಷೇರುಗಳು ದಿಢೀರ್ ಕುಸಿತ ಕಂಡಿದ್ದವು. ಒಂದು ಹಂತದಲ್ಲಿ ಅದಾನಿ ಗ್ರೂಪ್ ಮುಳಗಡೆಯಾಗುವ ಆತಂಕ ಎದುರಾಗಿತ್ತು. ಇದು ಷೇರು ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಭಾರತದ ರಾಜಕಾರಣದಲ್ಲೂ ಕೋಲಾಹಲ ಎಬ್ಬಿಸಿತ್ತು.
ಹಿಂಡನ್ಬರ್ಗ್ನ ಆರೋಪಗಳ ಕುರಿತು ಮಾರುಕಟ್ಟೆ ನಿಯಂತ್ರಕ ಸೆಬಿ ತನಿಖೆ ನಡೆಸುತ್ತಿದ್ದು, ಇದು ಇನ್ನೂ ಪೂರ್ಣಗೊಂಡಿಲ್ಲ. ಇವೆಲ್ಲದರ ನಡುವೆ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು, ಅದಾನಿ ಕಂಪನಿಗಳ ಷೇರುಗಳ ಬೆಲೆಯಲ್ಲಿ ದಿಢೀರ್ ಏರಿಕೆಗೆ ಕಾರಣವಾಗಿರಬಹುದಾದ ಷೇರು ತಿರುಚುವಿಕೆಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಪುರಾವೆ ಸಿಕ್ಕಿಲ್ಲ ಎಂದು ಹೇಳಿದೆ. ತಜ್ಞ ಸಮಿತಿಯ ತನಿಖೆಯಲ್ಲಿ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯ ವೈಫಲ್ಯವೂ ಕಂಡುಬಂದಿಲ್ಲ ಎಂಬುದಾಗಿ ಗೌತಮ್ ಅದಾನಿ ತಿಳಿಸಿದ್ದಾರೆ.
ಹಿಂಡನ್ಬರ್ಗ್ ತನ್ನ ವರದಿಯಲ್ಲಿ ಅದಾನಿ ಸಮೂಹವು ದಶಕಗಳಿಂದ ಷೇರು ತಿರುಚುವಿಕೆ ಹಾಗೂ ಲೆಕ್ಕಪತ್ರ ವಂಚನೆಯಲ್ಲಿ ತೊಡಗಿದೆ ಎಂದು ಆರೋಪಿಸಿತ್ತು. ಇದು ಉದ್ದೇಶಿತ ತಪ್ಪು ಮಾಹಿತಿಯಾಗಿದ್ದು, ಅದಾನಿ ಗ್ರೂಪ್ನ ಖ್ಯಾತಿಯನ್ನು ಹಾಳುಗೆಡವುವ ಮತ್ತು ಷೇರುಗಳ ಬೆಲೆಗಳನ್ನು ಉದ್ದೇಶಪೂರ್ವಕವಾಗಿ ಕಡಿಮೆ ಮಾಡುವ ಮೂಲಕ ಲಾಭ ಗಳಿಸುವ ಗುರಿ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…