ಅಮೆರಿಕ ಮೂಲದ ಶಾರ್ಟ್ ಸೆಲ್ಲಿಂಗ್ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ವರದಿಯ ಪರಿಣಾಮಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ದುರ್ಬಳಕೆ ಮಾಡಿಕೊಂಡವು ಎಂದು ಅದಾನಿ ಸಮೂಹದ ಮಾಲೀಕ ಗೌತಮ್ ಅದಾನಿ ಕಿಡಿಕಾರಿದ್ದಾರೆ.
ಅದಾನಿ ಗ್ರೂಪ್ ವಿರುದ್ಧ ಹಿಂಡನ್ಬರ್ಗ್ ವರದಿ ಪ್ರಕಟಿಸಿದ ಬಳಿಕ ಅದಾನಿ ಸಮೂಹದ ಕಂಪನಿಗಳ ಷೇರುಗಳು ದಿಢೀರ್ ಕುಸಿತ ಕಂಡಿದ್ದವು. ಒಂದು ಹಂತದಲ್ಲಿ ಅದಾನಿ ಗ್ರೂಪ್ ಮುಳಗಡೆಯಾಗುವ ಆತಂಕ ಎದುರಾಗಿತ್ತು. ಇದು ಷೇರು ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಭಾರತದ ರಾಜಕಾರಣದಲ್ಲೂ ಕೋಲಾಹಲ ಎಬ್ಬಿಸಿತ್ತು.
ಹಿಂಡನ್ಬರ್ಗ್ನ ಆರೋಪಗಳ ಕುರಿತು ಮಾರುಕಟ್ಟೆ ನಿಯಂತ್ರಕ ಸೆಬಿ ತನಿಖೆ ನಡೆಸುತ್ತಿದ್ದು, ಇದು ಇನ್ನೂ ಪೂರ್ಣಗೊಂಡಿಲ್ಲ. ಇವೆಲ್ಲದರ ನಡುವೆ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು, ಅದಾನಿ ಕಂಪನಿಗಳ ಷೇರುಗಳ ಬೆಲೆಯಲ್ಲಿ ದಿಢೀರ್ ಏರಿಕೆಗೆ ಕಾರಣವಾಗಿರಬಹುದಾದ ಷೇರು ತಿರುಚುವಿಕೆಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಪುರಾವೆ ಸಿಕ್ಕಿಲ್ಲ ಎಂದು ಹೇಳಿದೆ. ತಜ್ಞ ಸಮಿತಿಯ ತನಿಖೆಯಲ್ಲಿ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯ ವೈಫಲ್ಯವೂ ಕಂಡುಬಂದಿಲ್ಲ ಎಂಬುದಾಗಿ ಗೌತಮ್ ಅದಾನಿ ತಿಳಿಸಿದ್ದಾರೆ.
ಹಿಂಡನ್ಬರ್ಗ್ ತನ್ನ ವರದಿಯಲ್ಲಿ ಅದಾನಿ ಸಮೂಹವು ದಶಕಗಳಿಂದ ಷೇರು ತಿರುಚುವಿಕೆ ಹಾಗೂ ಲೆಕ್ಕಪತ್ರ ವಂಚನೆಯಲ್ಲಿ ತೊಡಗಿದೆ ಎಂದು ಆರೋಪಿಸಿತ್ತು. ಇದು ಉದ್ದೇಶಿತ ತಪ್ಪು ಮಾಹಿತಿಯಾಗಿದ್ದು, ಅದಾನಿ ಗ್ರೂಪ್ನ ಖ್ಯಾತಿಯನ್ನು ಹಾಳುಗೆಡವುವ ಮತ್ತು ಷೇರುಗಳ ಬೆಲೆಗಳನ್ನು ಉದ್ದೇಶಪೂರ್ವಕವಾಗಿ ಕಡಿಮೆ ಮಾಡುವ ಮೂಲಕ ಲಾಭ ಗಳಿಸುವ ಗುರಿ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…