BREAKING NEWS

ಹಾಸನದಲ್ಲಿ ಮಿಕ್ಸಿ ಸ್ಫೋಟ: ಇಬ್ಬರು ಪೊಲೀಸರ ವಶಕ್ಕೆ

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟವಾಗಿರುವ ಘಟನೆ ಸಂಬಂಧ ಹಾಸನ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯಲ್ಲಿ ಅಂಗಡಿ ಮಾಲೀಕ ಶಶಿ ಗಂಭೀರ ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್ ಕಚೇರಿಗೆ ಮಿಕ್ಸಿ ಬಾಕ್ಸ್ ಪಾರ್ಸೆಲ್ ಗೆ ಬಂದಿತ್ತು. ಅಂಗಡಿ ಮಾಲೀಕ ಶಶಿ ಬಾಕ್ಸ್ನಲ್ಲಿ ನಮೂದಿಸಲಾದ ಹೆಸರಿಗೆ ನೀಡಿದ್ದರು. ಆದರೆ ಆ ವ್ಯಕ್ತಿ ಎರಡು ದಿನಗಳ ಬಳಿಕ ಮಿಕ್ಸಿ ಸೂಕ್ತ ವಿಳಾಸದಿಂದ ಬಂದಿಲ್ಲ ಎಂದು ಡಿಟಿಡಿಸಿ ಅಂಗಡಿಗೆ ವಾಪಾಸ್ ನೀಡಿದ್ದಾನೆ. ವಾಪಸ್ ಪಡೆಯುವ ವೇಳೆ ಶಶಿ ಮಿಕ್ಸಿ ಆನ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಿಕ್ಸಿ ಏಕಾಏಕಿ ಸ್ಫೋಟಗೊಂಡಿದೆ.

ಸ್ಫೋಟಗೊಂಡ ತೀವ್ರತೆಗೆ ಕೊರಿಯರ್ ಕಚೇರಿಯ ಗ್ಲಾಸ್ ಪುಡಿಪುಡಿಯಾಗಿದ್ದು, ಗೋಡೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ಮಾಲೀಕ ಶಶಿ ಅವರ ಕೈ, ತಲೆ ಹಾಗೂ ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಸ್ಪಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಎಸ್ಪಿ ಹರಿರಾಮ್ ಶಂಕರ್, “ಕೊರಿಯರ್ ಆಫೀಸ್ನಲ್ಲಿ ಕೆಲಸ ಮಾಡುವ ವ್ಯಕ್ತಿಗೆ ದೇಹದ ನಾಲ್ಕು ಭಾಗದಲ್ಲಿ ಪೆಟ್ಟಾಗಿದೆ. ಯಾವುದೇ ಪ್ರಾಣಾಪಾಯ ಇಲ್ಲ. ಮಿಕ್ಸಿಯ ಬ್ಲೇಡ್ನಿಂದ ಅವರಿಗೆ ಪೆಟ್ಟಾಗಿದೆ ʼʼ ಎಂದು ತಿಳಿಸಿದ್ದಾರೆ.

“ಮೈಸೂರಿನಿಂದ ಎಫ್ಎಸ್ಎಲ್ ಅಧಿಕಾರಿಗಳು ಹಾಸನಕ್ಕೆ ಆಗಮಿಸಿದ್ದು ಮಿಕ್ಸಿ ಯಾಕೆ ಮತ್ತು ಹೇಗೆ ಬ್ಲಾಸ್ಟ್ ಆಗಿದೆ ಎಂದು ಪರಿಶೀಲನೆ ನಡೆಯುತ್ತದೆ. ಕೊರಿಯರ್ ಎಲ್ಲಿಂದ ಬಂತು ಎನ್ನುವ ಮಾಹಿತಿ ಇದೆ. ಎಲ್ಲವನ್ನು ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಯಾರೂ ಊಹಾಪೋಹಗಳಿಗೆ ಒಳಗಾಗಿ ಗೊಂದಲ ಆಗುವುದು ಬೇಡ. ಮಿಕ್ಸಿ ಶಾರ್ಟ್ ಸರ್ಕ್ಯೂಟ್ನಿಂದ ಸ್ಫೋಟಗೊಂಡಿದೆಯೋ ಅಥವಾ ಬೇರೆ ಕಾರಣ ಎನ್ನುವುದು ತನಿಖೆ ಬಳಿಕ ಗೊತ್ತಾಗಲಿದೆ. ಸದ್ಯಕ್ಕೆ ಯಾವುದೇ ಆತಂಕ ಇಲ್ಲ,” ಎಂದು ಎಸ್‌ ಪಿ ತಿಳಿಸಿದ್ದಾರೆ.

andolana

Recent Posts

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

3 mins ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

6 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

6 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

6 hours ago