ಐಜ್ವಾಲ್: ಸೋಮವಾರ ಐಜ್ವಾಲ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಕೈಗೊಂಡಿದ್ದು, ಅಪಾರ ಸಂಖ್ಯೆಯ ಜನಸ್ತೋಮ ಅವರಿಗೆ ಸ್ವಾಗತ ಕೋರಿತು.
ವಿಧಾನಸಭೆ ಚುನಾವಣೆ ನಡೆಯಲಿರುವ ಮಿಜೋರಾಂನ ರಾಜಧಾನಿಯನ್ನು ತಲುಪಿದ ನಂತರ, ಅವರು ಚನ್ಮಾರಿ ಜಂಕ್ಷನ್ನಿಂದ ಪಾದಯಾತ್ರೆಯನ್ನು ಪ್ರಾರಂಭಿಸಿದರು ಮತ್ತು ನಗರದ ಅಂಕುಡೊಂಕಾದ ರಸ್ತೆಗಳ ಮೂಲಕ ಸಾಗಿದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಧ್ವಜಗಳನ್ನು ಹಿಡಿದಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಕಾಯುತ್ತಾ ನಿಂತಿದ್ದ ಜನರತ್ತ ಕೈಬೀಸಿ, ಪಾದಯಾತ್ರೆಯ ವೇಳೆ ತಮ್ಮನ್ನು ಭೇಟಿಯಾಗಲು ಬಂದವರ ಜತೆ ಕೈಕುಲುಕಿ ಸಂವಾದ ನಡೆಸಿದರು.
ಕೆಲವರು ಕಾಂಗ್ರೆಸ್ ಮುಖಂಡರೊಂದಿಗೆ ಸೆಲ್ಫಿ ತೆಗೆದುಕೊಂಡರು. ಪಾದಯಾತ್ರೆಯಲ್ಲಿ ಸಾಂಪ್ರದಾಯಿಕ ನೃತ್ಯಗಳನ್ನು ಸಹ ಪ್ರದರ್ಶಿಸಲಾಯಿತು.
ರಾಜಭವನದವರೆಗೆ ಸುಮಾರು 4-5 ಕಿ.ಮೀ ದೂರವನ್ನು ಕ್ರಮಿಸಲಿರುವ ರಾಹುಲ್ ಗಾಂಧಿ, ಮೆರವಣಿಗೆ ಮುಕ್ತಾಯದ ನಂತರ ರಾಜ್ಯಪಾಲರ ಭವನದ ಬಳಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
40 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…