ಐಜ್ವಾಲ್: ಸೋಮವಾರ ಐಜ್ವಾಲ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಕೈಗೊಂಡಿದ್ದು, ಅಪಾರ ಸಂಖ್ಯೆಯ ಜನಸ್ತೋಮ ಅವರಿಗೆ ಸ್ವಾಗತ ಕೋರಿತು.
ವಿಧಾನಸಭೆ ಚುನಾವಣೆ ನಡೆಯಲಿರುವ ಮಿಜೋರಾಂನ ರಾಜಧಾನಿಯನ್ನು ತಲುಪಿದ ನಂತರ, ಅವರು ಚನ್ಮಾರಿ ಜಂಕ್ಷನ್ನಿಂದ ಪಾದಯಾತ್ರೆಯನ್ನು ಪ್ರಾರಂಭಿಸಿದರು ಮತ್ತು ನಗರದ ಅಂಕುಡೊಂಕಾದ ರಸ್ತೆಗಳ ಮೂಲಕ ಸಾಗಿದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಧ್ವಜಗಳನ್ನು ಹಿಡಿದಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಕಾಯುತ್ತಾ ನಿಂತಿದ್ದ ಜನರತ್ತ ಕೈಬೀಸಿ, ಪಾದಯಾತ್ರೆಯ ವೇಳೆ ತಮ್ಮನ್ನು ಭೇಟಿಯಾಗಲು ಬಂದವರ ಜತೆ ಕೈಕುಲುಕಿ ಸಂವಾದ ನಡೆಸಿದರು.
ಕೆಲವರು ಕಾಂಗ್ರೆಸ್ ಮುಖಂಡರೊಂದಿಗೆ ಸೆಲ್ಫಿ ತೆಗೆದುಕೊಂಡರು. ಪಾದಯಾತ್ರೆಯಲ್ಲಿ ಸಾಂಪ್ರದಾಯಿಕ ನೃತ್ಯಗಳನ್ನು ಸಹ ಪ್ರದರ್ಶಿಸಲಾಯಿತು.
ರಾಜಭವನದವರೆಗೆ ಸುಮಾರು 4-5 ಕಿ.ಮೀ ದೂರವನ್ನು ಕ್ರಮಿಸಲಿರುವ ರಾಹುಲ್ ಗಾಂಧಿ, ಮೆರವಣಿಗೆ ಮುಕ್ತಾಯದ ನಂತರ ರಾಜ್ಯಪಾಲರ ಭವನದ ಬಳಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
40 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿದೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…