BREAKING NEWS

ಎಂಎಲ್ಎ, ಎಂಎಲ್‌ಸಿ ಏನೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ

ಬೆಂಗಳೂರು : ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿದಕ್ಕಿಂತ ಕಷ್ಟದ ಕೆಲಸವೆಂದರೆ ಸಚಿವ ಸ್ಥಾನ ನೀಡುವುದು, ಯಾರನ್ನು ಸಂಪುಟದಲ್ಲಿ ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬ ಗೊಂದಲದ ನಡುವೆಯೇ ಅಚ್ಚರಿಯ ಬೆಳವಣಿಗೆಯೊಂದು ಕಾಂಗ್ರೆಸ್‌ನಲ್ಲಿ ನಡೆದಿದೆ. ಕಾಂಗ್ರೆಸ್ ಶುಕ್ರವಾರ ರಾತ್ರಿ ಬಿಡುಗಡೆ ಮಾಡಿರುವ ಸಚಿವರ ಪಟ್ಟಿಯಲ್ಲಿನ ಹೆಸರೊಂದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅದೇ ಎನ್‌ಎಸ್ ಬೋಸರಾಜು!.

ರಾಯಚೂರು ಜಿಲ್ಲೆಯ ಮಾನ್ವಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ರಾಜು ಕ್ಷತ್ರಿಯ ಸಮುದಾಯದ ನಾಯಕ ಎನ್‌ಎಸ್ ಬೋಸರಾಜು ಈ ಬಾರಿಯ ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಇದರಲ್ಲಿ ಆಶ್ವರ್ಯ ಪಡುವುದು ಏನು ಎಂದು ಕೇಳುವುದಾದರೆ. ಇವರು ಶಾಸಕರು ಅಲ್ಲ, ಎಂಎಲ್‌ಸಿ ಕೂಡ ಅಲ್ಲ. ಚುನಾವಣೆಯಲ್ಲಿ ಗೆದ್ದು ಸಚಿವ ಸ್ಥಾನಕ್ಕಾಗಿ ಪೈಪೋಟಿ ನೀಡುತ್ತಿದ್ದವರ ಮಧ್ಯೆ ಅದೃಷ್ಟ ಇವರನ್ನು ಹುಡುಕಿ ಬಂದಿದೆ.

ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, 24 ಸಚಿವರು ಶನಿವಾರ ಬೆಳಗ್ಗೆ 11.45ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರದ ಮನವಿಯಂತೆ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಸದ್ಯ ರಾಜಭವನಕ್ಕೆ ನೂತನ ಸಚಿವರ ಪಟ್ಟಿ ರವಾನೆಯಾಗಿದೆ. ಈ ಪಟ್ಟಿಯಲ್ಲಿ ಮಾಜಿ ಎಂಎಲ್‌ಸಿ, ಎಐಸಿಸಿಯ ಹಾಲಿ ಕಾರ್ಯದರ್ಶಿ ಬೋಸರಾಜು ಅವರ ಹೆಸರು ಸೇರಿದೆ.

ವಿಧಾನಸಭಾ ಚುನಾವಣೆ ವೇಳೆ ರಾಯಚೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿ ಆಗಿದ್ದ ಎನ್​.ಎಸ್​. ಬೋಸರಾಜು ಅವರು ಟಿಕೆಟ್ ಸಿಗದ ಬಗ್ಗೆ ತಿಳಿದು ತಮ್ಮ ಮಗ ರವಿ ಬೋಸರಾಜು ಟಿಕೆಟ್ ನೀಡಬೇಕು ಎಂಬ ಬೇಡಿಕೆಯಿಟ್ಟಿದ್ದರು. ಆದರೆ, ಹೈಕಮಾಂಡ್ ಆದೇಶದ ಮೇಲೆ ಸುಮ್ಮನಾಗಿದ್ದರು. ಇವರ ಮೇಲೆ ಹೈಕಮಾಂಡ್‌ಗೆ ಅನುಕಂಪವಿದ್ದು, ಸಚಿವ ಸ್ಥಾನ ನಿಡುವ ಬಗ್ಗೆ ವದಂತಿಗಳು ಹರಡಿದ್ದವು. ಅದಕ್ಕೆ ಕಾಂಗ್ರೆಸ್ ನಾಯಕರೆ ಅಸಮಾಧಾನ ಕೂಡ ಹೊರಹಾಕಿದ್ದರು.

ರಾಯಚೂರು ಜಿಲ್ಲೆಯ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹಾಗೂ ಇನ್ನಿಬ್ಬರು ಮುಖಂಡರಾದ ಎ.ವಸಂತ್ ಕುಮಾರ್, ಅಸ್ಲಂ ಪಾಷಾ ಇವರಿಗೆ ಸಚಿವ ಸ್ಥಾನ ಸಿಗಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಪತ್ರ ಬರೆದಿದ್ದರು. ಆದರೂ ಬೋಸರಾಜು ತಮ್ಮ ಪ್ರಭಾವದಿಂದ ಸಚಿವ ಸಂಪುಟ ಸೇರಿದ್ದಾರೆ.

ಮಾಹಿತಿಯ ಪ್ರಕಾರ ಮಾಜಿ ಶಾಸಕ, ತೆಲಂಗಾಣ ರಾಜ್ಯದ ಉಸ್ತುವಾರಿ ಹೊಂದಿರುವ ಎನ್‌ಎಸ್ ಬೋಸರಾಜು ಅವರು ಹೈಕಮಾಂಡ್ ಕೋಟಾದಲ್ಲಿ ಸಚಿವ ಸಂಪುಟ ಸೇರಿಕೊಳ್ಳಲಿದ್ದಾರೆ. ಇವರ ಜೊತೆಗೆ ಇನ್ನು 23 ಶಾಸಕರು ಬೆಳಗ್ಗೆ 11.45ಕ್ಕೆ 24 ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಂಪುಟ ತನ್ನ ಪೂರ್ಣ ಬಲ 34ಕ್ಕೆ ತಲುಪಲಿದೆ. ಬೋಸರಾಜು ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಖುದ್ದು ಮಲ್ಲಿಕಾರ್ಜುನ ಖರ್ಗೆಯವರೇ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೋಸರಾಜು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ ಆರು ತಿಂಗಳವರೆಗೆ ಅವರು ವಿಧಾನಸಭೆ ಅಥವಾ ವಿಧಾನ ಪರಿಷತ್‌ಗೆ ಸದಸ್ಯರಾಗುವ ಅವಕಾಶವಿರುತ್ತದೆ. ಹಾಗಾಗಿ ವಿಧಾನ ಪರಿಷತ್ ಚುನಾವಣೆಗೆ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸಿ ಗೆಲ್ಲಿಸಿ ಸಚಿವ ಸ್ಥಾನ ಗಟ್ಟಿ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ತೆಲಂಗಾಣದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಇವರ ಸಚಿವ ಸ್ಥಾನ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂಬುದು ಹೈಕಮಾಂಡ್ ತಂತ್ರವಾಗಿದೆ.

24 ನೂತನ ಸಚಿವರ ಅಧಿಕೃತ ಪಟ್ಟಿಯಲ್ಲಿ, ಕೆಲವು ಘಟಾನುಘಟಿ ನಾಯಕರ ಹೆಸರೇ ಬಿಟ್ಟುಹೋಗಿದೆ. ಆರ್.ವಿ.ದೇಶಪಾಂಡೆ, ಬಿಕೆ ಹರಿಪಸ್ರಾದ್, ಟಿ.ಬಿ.ಜಯಚಂದ್ರ ಹಾಗೂ ಸಿಎಂ ಆಪ್ತ ಬಸವರಾಜ ರಾಯರೆಡ್ಡಿ ಅವರಿಗೂ ಸಚಿವ ಸ್ಥಾನ ದಿಕ್ಕಿಲ್ಲ. ಆದರೆ ಬೋಸರಾಜು ಸಂಪುಟ ಸೇರ್ಪಡೆಯಾಗಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

lokesh

Recent Posts

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

18 mins ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

40 mins ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

49 mins ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

1 hour ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

1 hour ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

2 hours ago