Mysore
26
light rain

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್‌ಗೆ ಚಾಕು ಇರಿತ!

ಬೆಳಗಾವಿ : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತಕ್ಕೆ ಒಳಗಾಗಿದ್ದಾರೆ.

ಬೆಳಗಾವಿಯ ಜಯನಗರದ ನಿವಾಸದ ಬಳಿ ಹಲ್ಲೆ ಮಾಡಲಾಗಿದ್ದು, ಪೃಥ್ವಿ ಸಿಂಗ್ ಕೈ ಮತ್ತು ಬೆನ್ನಿಗೆ ಗಾಯಗಳಾಗಿವೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋತರ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಆಪ್ತರು ಪೃಥ್ವಿ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ. ಚನ್ನರಾಜ ಬೆಂಬಲಿಗರಾದ ಸದ್ದಾಂ, ಸುಜಯ್ ಮತ್ತು ಚನ್ನರಾಜ ಬಾಡಿಗಾರ್ಡ್ ಹಲ್ಲೆ ನಡೆಸಿದ್ದಾರೆ.

ಪೃಥ್ವಿ ಸಿಂಗ್ ಜೊತೆ ಚನ್ನರಾಜ ಹಟ್ಟಿಹೊಳಿ ಆಪ್ತರು ಮಾತನಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪೃಥ್ವಿ ಸಿಂಗ್ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!