BREAKING NEWS

ಅನ್ಯ ಪಕ್ಷಗಳ ಶಾಸಕರು ನಾವಿದ್ದಲ್ಲಿಗೆ ಹುಡುಕಿಕೊಂಡು ಬಂದು ಟಿಕೆಟ್ ಗಾಗಿ ದುಂಬಾಲು ಬೀಳುತ್ತಿದ್ದಾರೆ : ಡಿಕೆಶಿ

ಬೆಂಗಳೂರು- ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವಂತೆ ಅನ್ಯ ಪಕ್ಷಗಳ ಶಾಸಕರು ನಾವಿದ್ದಲ್ಲಿಗೆ ಹುಡುಕಿಕೊಂಡು ಬಂದು ದುಂಬಾಲು ಬೀಳುತ್ತಿದ್ದಾರೆ. ನಾವು ಯಾರಿಗೂ ಕರೆ ಮಾಡಿ ಕರೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗಿನಿಂದ ಬರುವವರಿಗೆ ಟಿಕೆಟ್‍ಹಂಚಿಕೆ ಮಾಡಲು ನಮಗೆ ಕಷ್ಟವಾಗುವಷ್ಟು ಒತ್ತಡವಿದೆ. ಅವರಾಗಿಯೇ ಹುಡುಕಿಕೊಂಡು ಬರುತ್ತಿದ್ದಾರೆ ಎಂದು ಸ್ಪಷ್ಟ ಪಡಿಸಿದರು.
ಬಿಜೆಪಿಯವರು ಸರ್ಕಾರ ರಚನೆ ಮಾಡಿದ್ದು ಹೇಗೆ ? ನಮ್ಮ ಹಾಗೂ ಜೆಡಿಎಸ್ ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಂಡು ಅಲ್ಲವೇ. ಖುದ್ದು ಬಸವರಾಜ ಬೊಮ್ಮಾಯಿ ಯಾವ ಪಕ್ಷದವರು, ಜನತಾದಳದಲ್ಲಿ ಇದ್ದವರಲ್ಲವೇ ? ಕಾಂಗ್ರೆಸ್ ಸೇರಲು ಬಿಜೆಪಿಯ ಇನ್ನೂ ಎಷ್ಟು ಜನ ಮುಂದೆ ಬರುತ್ತಿದ್ದಾರೆ ಎಂದು ಸದ್ಯಕ್ಕೆ ನಾನು ಹೇಳುವುದಿಲ್ಲ ಎಂದು ಮತ್ತೊಂದು ಬಾಂಬ್ ಸಿಡಿಸಿದರು.
ವಿಧಾನಸಭೆ ಚುನಾವಣೆಗೆ ನಾವು ಮೂರು ತಿಂಗಳ ಹಿಂದೆಯೇ ಸಿದ್ಧವಾಗಿದ್ದೇವೆ. ಎಷ್ಟು ಬೇಗ ಚುನಾವಣೆ ನಡೆಯುತ್ತದೆಯೋ ಅಷ್ಟು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ. ಈ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಮೀಸಲಾತಿ ವಿಷಯದಲ್ಲಂತೂ ಜನಾಕ್ರೋಶ ಹೆಚ್ಚಾಗಿದೆ. ಯಾರಿಗೂ ಸಮಧಾನ ಇಲ್ಲ. ಈ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳು ನ್ಯಾಯಲಯದಲ್ಲಿ ನಿಲ್ಲುವುದಿಲ್ಲ. ಬಿಜೆಪಿಯವರು ಮಾಡಿರುವ ತಪ್ಪನ್ನು ನಾವು ಅಧಿಕಾರಕ್ಕೆ ಬಂದಾಗ ಸರಿ ಪಡಿಸುತ್ತೇವೆ. ಸರ್ವರಿಗೂ ಸಮಪಾಲು, ಸಮಬಾಳು ಮಾದರಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಅವಕಾಶಗಳ ಹಂಚಿಕೆ ಮಾಡಲಾಗುವುದು ಎಂದರು.
ಬಿಜೆಪಿಯವರು ಕೆಲ ಸಮುದಾಯಕ್ಕೆ ಅನ್ಯಾಯ ಮಾಡಿ ತಮ್ಮ ಮನೆಯ ಆಸ್ತಿ ಎಂಬಂತೆ ಹಂಚಿಕೊಂಡಿದ್ದಾರೆ. ಯಾವ ಆಧಾರದ ಮೇಲೆ ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಬಹಿರಂಗ ಪಡಿಸಲಿ. ಯಾವ ಸಮಿತಿ ವರದಿ ನೀಡಿದೆ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರದಿ ನೀಡಿದೆಯೇ ? ಸದಾಶಿವ ಆಯೋಗವನ್ನು ರಚನೆ ಮಾಡಿದ್ದು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ. ಆ ವರದಿ ಏನಿದೆ ಎಂದು ಜನರ ಮುಂದಿಡಿ, ಬೇರೆಯವರಿಗೆ ತೊಂದರೆ ಮಾಡಿ ಮೀಸಲಾತಿ ಹಂಚಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಜೇನುಗೂಡಿಗೆ ಕೈ ಹಾಕಿಲ್ಲ, ಕಡಜದ ಗೂಡಿಗೆ ಕೈ ಇಟ್ಟಿದ್ದಾರೆ ಎಂದು ಹೇಳಿದರು.
ಬಿಜೆಪಿಯ ಭ್ರಷ್ಟ ಆಡಳಿತ ತೊಲಗಿದರೆ ಸಾಕು ಎಂದು ಜನ ಆಕ್ರೋಶಗೊಂಡಿದ್ದಾರೆ. ಬೆಲೆ ಏರಿಕೆ ನಿಯಂತ್ರಿಸಿ, ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಬಿಜೆಪಿ ಹೇಳಿತ್ತು. ಅದ್ಯಾವುದನ್ನು ಮಾಡಿಲ್ಲ. ನಾವು ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಹಾಗೂ ಯುವಶಕ್ತಿ ಯೋಜನೆಗಳ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಭರವಸೆಗಳನ್ನು ನೀಡಿದ್ದೇವೆ ಎಂದರು.
ನಮ್ಮ ಭರವಸೆಗಳನ್ನು ಸುಳ್ಳು ಎಂದು ಹೇಳುವ ಬಿಜೆಪಿ 2013-14ರಲ್ಲಿ ಯಾವ ಭರವಸೆಗಳನ್ನು ನೀಡಿತ್ತು, ಆಗ ಏನೆಂದು ಜಾಹಿರಾತು ನೀಡಿತ್ತು ಎಂದು ತೆಗೆದು ನೋಡಲಿ. ಏಳರಿಂದ ಎಂಟು ಗಂಟೆ ವಿದ್ಯುತ್ ಸರಬರಾಜು, ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಅದನ್ನು ಈಡೇರಿಸಿದೆಯೇ ಎಂದು ಪ್ರಶ್ನಿಸಿದರು.
ಇಂದಿನಿಂದ ಬಿಜೆಪಿ ಸರ್ಕಾರದ ಅಂತ್ಯದ ದಿನಗಳು ಆರಂಭವಾಗಿವೆ, 60 ದಿನದಲ್ಲಿ ಕೊನೆಯಾಗಲಿದೆ. ಕಾಂಗ್ರೆಸ್ ನಿಶ್ಚಲ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ಜನರಿಗೆ ಎಲ್ಲಾ ಹಂತದಲ್ಲೂ ಸುಳ್ಳು ಹೇಳುತ್ತಾ ಬಂದಿದೆ. ಮೀಸಲಾತಿ ಹಂಚಿಕೆಯಷ್ಟೆ ಅಲ್ಲ, ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಬಳಿ ಅಣೆಕಟ್ಟು ಕಟ್ಟುವ ಯೋಜನೆಗೆ ಅನುಮತಿ ನೀಡುವ ವಿಷಯದಲ್ಲೂ ಸುಳ್ಳು ಹೇಳಲಾಗಿದೆ. ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ರಾಜ್ಯ ಸರ್ಕಾರ ಭಾರಿ ಪ್ರಚಾರ ನಡೆಸಿತ್ತು. ಮುಖ್ಯಮಂತ್ರಿಯಾದಿಯಾಗಿ ಎಲ್ಲಾ ಸಚಿವರು ಕೇಂದ್ರವನ್ನು ಕೊಂಡಾಡಿದರು. ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಎರಡು ರಾಜ್ಯಗಳ ವಿವಾದವನ್ನು ಅಂತ್ಯಗೊಳಿಸಿದ್ದಕ್ಕಾಗಿ ಕರ್ನಾಟಕದ ಬಿಜೆಪಿ ನಾಯಕರಿಗೆ ಅಭಿನಂದನೆ ತಿಳಿಸಿದ್ದಾರೆ. ನಿನ್ನೆ ಗೋವಾದ ವಿಧಾನಸಭೆಯಲ್ಲಿ ನೀಡಲಾಗಿರುವ ಲಿಖಿತ ಉತ್ತರದಲ್ಲಿ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ಇರುವುದರಿಂದ ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿ ಪ್ರತಿಹಂತದಲ್ಲೂ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.

lokesh

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

4 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

4 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

5 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

5 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

6 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

6 hours ago