BREAKING NEWS

ಅನ್ಯ ಪಕ್ಷಗಳ ಶಾಸಕರು ನಾವಿದ್ದಲ್ಲಿಗೆ ಹುಡುಕಿಕೊಂಡು ಬಂದು ಟಿಕೆಟ್ ಗಾಗಿ ದುಂಬಾಲು ಬೀಳುತ್ತಿದ್ದಾರೆ : ಡಿಕೆಶಿ

ಬೆಂಗಳೂರು- ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವಂತೆ ಅನ್ಯ ಪಕ್ಷಗಳ ಶಾಸಕರು ನಾವಿದ್ದಲ್ಲಿಗೆ ಹುಡುಕಿಕೊಂಡು ಬಂದು ದುಂಬಾಲು ಬೀಳುತ್ತಿದ್ದಾರೆ. ನಾವು ಯಾರಿಗೂ ಕರೆ ಮಾಡಿ ಕರೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗಿನಿಂದ ಬರುವವರಿಗೆ ಟಿಕೆಟ್‍ಹಂಚಿಕೆ ಮಾಡಲು ನಮಗೆ ಕಷ್ಟವಾಗುವಷ್ಟು ಒತ್ತಡವಿದೆ. ಅವರಾಗಿಯೇ ಹುಡುಕಿಕೊಂಡು ಬರುತ್ತಿದ್ದಾರೆ ಎಂದು ಸ್ಪಷ್ಟ ಪಡಿಸಿದರು.
ಬಿಜೆಪಿಯವರು ಸರ್ಕಾರ ರಚನೆ ಮಾಡಿದ್ದು ಹೇಗೆ ? ನಮ್ಮ ಹಾಗೂ ಜೆಡಿಎಸ್ ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಂಡು ಅಲ್ಲವೇ. ಖುದ್ದು ಬಸವರಾಜ ಬೊಮ್ಮಾಯಿ ಯಾವ ಪಕ್ಷದವರು, ಜನತಾದಳದಲ್ಲಿ ಇದ್ದವರಲ್ಲವೇ ? ಕಾಂಗ್ರೆಸ್ ಸೇರಲು ಬಿಜೆಪಿಯ ಇನ್ನೂ ಎಷ್ಟು ಜನ ಮುಂದೆ ಬರುತ್ತಿದ್ದಾರೆ ಎಂದು ಸದ್ಯಕ್ಕೆ ನಾನು ಹೇಳುವುದಿಲ್ಲ ಎಂದು ಮತ್ತೊಂದು ಬಾಂಬ್ ಸಿಡಿಸಿದರು.
ವಿಧಾನಸಭೆ ಚುನಾವಣೆಗೆ ನಾವು ಮೂರು ತಿಂಗಳ ಹಿಂದೆಯೇ ಸಿದ್ಧವಾಗಿದ್ದೇವೆ. ಎಷ್ಟು ಬೇಗ ಚುನಾವಣೆ ನಡೆಯುತ್ತದೆಯೋ ಅಷ್ಟು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ. ಈ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಮೀಸಲಾತಿ ವಿಷಯದಲ್ಲಂತೂ ಜನಾಕ್ರೋಶ ಹೆಚ್ಚಾಗಿದೆ. ಯಾರಿಗೂ ಸಮಧಾನ ಇಲ್ಲ. ಈ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳು ನ್ಯಾಯಲಯದಲ್ಲಿ ನಿಲ್ಲುವುದಿಲ್ಲ. ಬಿಜೆಪಿಯವರು ಮಾಡಿರುವ ತಪ್ಪನ್ನು ನಾವು ಅಧಿಕಾರಕ್ಕೆ ಬಂದಾಗ ಸರಿ ಪಡಿಸುತ್ತೇವೆ. ಸರ್ವರಿಗೂ ಸಮಪಾಲು, ಸಮಬಾಳು ಮಾದರಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಅವಕಾಶಗಳ ಹಂಚಿಕೆ ಮಾಡಲಾಗುವುದು ಎಂದರು.
ಬಿಜೆಪಿಯವರು ಕೆಲ ಸಮುದಾಯಕ್ಕೆ ಅನ್ಯಾಯ ಮಾಡಿ ತಮ್ಮ ಮನೆಯ ಆಸ್ತಿ ಎಂಬಂತೆ ಹಂಚಿಕೊಂಡಿದ್ದಾರೆ. ಯಾವ ಆಧಾರದ ಮೇಲೆ ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಬಹಿರಂಗ ಪಡಿಸಲಿ. ಯಾವ ಸಮಿತಿ ವರದಿ ನೀಡಿದೆ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರದಿ ನೀಡಿದೆಯೇ ? ಸದಾಶಿವ ಆಯೋಗವನ್ನು ರಚನೆ ಮಾಡಿದ್ದು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ. ಆ ವರದಿ ಏನಿದೆ ಎಂದು ಜನರ ಮುಂದಿಡಿ, ಬೇರೆಯವರಿಗೆ ತೊಂದರೆ ಮಾಡಿ ಮೀಸಲಾತಿ ಹಂಚಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಜೇನುಗೂಡಿಗೆ ಕೈ ಹಾಕಿಲ್ಲ, ಕಡಜದ ಗೂಡಿಗೆ ಕೈ ಇಟ್ಟಿದ್ದಾರೆ ಎಂದು ಹೇಳಿದರು.
ಬಿಜೆಪಿಯ ಭ್ರಷ್ಟ ಆಡಳಿತ ತೊಲಗಿದರೆ ಸಾಕು ಎಂದು ಜನ ಆಕ್ರೋಶಗೊಂಡಿದ್ದಾರೆ. ಬೆಲೆ ಏರಿಕೆ ನಿಯಂತ್ರಿಸಿ, ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಬಿಜೆಪಿ ಹೇಳಿತ್ತು. ಅದ್ಯಾವುದನ್ನು ಮಾಡಿಲ್ಲ. ನಾವು ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಹಾಗೂ ಯುವಶಕ್ತಿ ಯೋಜನೆಗಳ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಭರವಸೆಗಳನ್ನು ನೀಡಿದ್ದೇವೆ ಎಂದರು.
ನಮ್ಮ ಭರವಸೆಗಳನ್ನು ಸುಳ್ಳು ಎಂದು ಹೇಳುವ ಬಿಜೆಪಿ 2013-14ರಲ್ಲಿ ಯಾವ ಭರವಸೆಗಳನ್ನು ನೀಡಿತ್ತು, ಆಗ ಏನೆಂದು ಜಾಹಿರಾತು ನೀಡಿತ್ತು ಎಂದು ತೆಗೆದು ನೋಡಲಿ. ಏಳರಿಂದ ಎಂಟು ಗಂಟೆ ವಿದ್ಯುತ್ ಸರಬರಾಜು, ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಅದನ್ನು ಈಡೇರಿಸಿದೆಯೇ ಎಂದು ಪ್ರಶ್ನಿಸಿದರು.
ಇಂದಿನಿಂದ ಬಿಜೆಪಿ ಸರ್ಕಾರದ ಅಂತ್ಯದ ದಿನಗಳು ಆರಂಭವಾಗಿವೆ, 60 ದಿನದಲ್ಲಿ ಕೊನೆಯಾಗಲಿದೆ. ಕಾಂಗ್ರೆಸ್ ನಿಶ್ಚಲ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ಜನರಿಗೆ ಎಲ್ಲಾ ಹಂತದಲ್ಲೂ ಸುಳ್ಳು ಹೇಳುತ್ತಾ ಬಂದಿದೆ. ಮೀಸಲಾತಿ ಹಂಚಿಕೆಯಷ್ಟೆ ಅಲ್ಲ, ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಬಳಿ ಅಣೆಕಟ್ಟು ಕಟ್ಟುವ ಯೋಜನೆಗೆ ಅನುಮತಿ ನೀಡುವ ವಿಷಯದಲ್ಲೂ ಸುಳ್ಳು ಹೇಳಲಾಗಿದೆ. ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ರಾಜ್ಯ ಸರ್ಕಾರ ಭಾರಿ ಪ್ರಚಾರ ನಡೆಸಿತ್ತು. ಮುಖ್ಯಮಂತ್ರಿಯಾದಿಯಾಗಿ ಎಲ್ಲಾ ಸಚಿವರು ಕೇಂದ್ರವನ್ನು ಕೊಂಡಾಡಿದರು. ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಎರಡು ರಾಜ್ಯಗಳ ವಿವಾದವನ್ನು ಅಂತ್ಯಗೊಳಿಸಿದ್ದಕ್ಕಾಗಿ ಕರ್ನಾಟಕದ ಬಿಜೆಪಿ ನಾಯಕರಿಗೆ ಅಭಿನಂದನೆ ತಿಳಿಸಿದ್ದಾರೆ. ನಿನ್ನೆ ಗೋವಾದ ವಿಧಾನಸಭೆಯಲ್ಲಿ ನೀಡಲಾಗಿರುವ ಲಿಖಿತ ಉತ್ತರದಲ್ಲಿ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ಇರುವುದರಿಂದ ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿ ಪ್ರತಿಹಂತದಲ್ಲೂ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.

lokesh

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago