BREAKING NEWS

ಅನ್ಯ ಪಕ್ಷಗಳ ಶಾಸಕರು ನಾವಿದ್ದಲ್ಲಿಗೆ ಹುಡುಕಿಕೊಂಡು ಬಂದು ಟಿಕೆಟ್ ಗಾಗಿ ದುಂಬಾಲು ಬೀಳುತ್ತಿದ್ದಾರೆ : ಡಿಕೆಶಿ

ಬೆಂಗಳೂರು- ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವಂತೆ ಅನ್ಯ ಪಕ್ಷಗಳ ಶಾಸಕರು ನಾವಿದ್ದಲ್ಲಿಗೆ ಹುಡುಕಿಕೊಂಡು ಬಂದು ದುಂಬಾಲು ಬೀಳುತ್ತಿದ್ದಾರೆ. ನಾವು ಯಾರಿಗೂ ಕರೆ ಮಾಡಿ ಕರೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗಿನಿಂದ ಬರುವವರಿಗೆ ಟಿಕೆಟ್‍ಹಂಚಿಕೆ ಮಾಡಲು ನಮಗೆ ಕಷ್ಟವಾಗುವಷ್ಟು ಒತ್ತಡವಿದೆ. ಅವರಾಗಿಯೇ ಹುಡುಕಿಕೊಂಡು ಬರುತ್ತಿದ್ದಾರೆ ಎಂದು ಸ್ಪಷ್ಟ ಪಡಿಸಿದರು.
ಬಿಜೆಪಿಯವರು ಸರ್ಕಾರ ರಚನೆ ಮಾಡಿದ್ದು ಹೇಗೆ ? ನಮ್ಮ ಹಾಗೂ ಜೆಡಿಎಸ್ ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಂಡು ಅಲ್ಲವೇ. ಖುದ್ದು ಬಸವರಾಜ ಬೊಮ್ಮಾಯಿ ಯಾವ ಪಕ್ಷದವರು, ಜನತಾದಳದಲ್ಲಿ ಇದ್ದವರಲ್ಲವೇ ? ಕಾಂಗ್ರೆಸ್ ಸೇರಲು ಬಿಜೆಪಿಯ ಇನ್ನೂ ಎಷ್ಟು ಜನ ಮುಂದೆ ಬರುತ್ತಿದ್ದಾರೆ ಎಂದು ಸದ್ಯಕ್ಕೆ ನಾನು ಹೇಳುವುದಿಲ್ಲ ಎಂದು ಮತ್ತೊಂದು ಬಾಂಬ್ ಸಿಡಿಸಿದರು.
ವಿಧಾನಸಭೆ ಚುನಾವಣೆಗೆ ನಾವು ಮೂರು ತಿಂಗಳ ಹಿಂದೆಯೇ ಸಿದ್ಧವಾಗಿದ್ದೇವೆ. ಎಷ್ಟು ಬೇಗ ಚುನಾವಣೆ ನಡೆಯುತ್ತದೆಯೋ ಅಷ್ಟು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ. ಈ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಮೀಸಲಾತಿ ವಿಷಯದಲ್ಲಂತೂ ಜನಾಕ್ರೋಶ ಹೆಚ್ಚಾಗಿದೆ. ಯಾರಿಗೂ ಸಮಧಾನ ಇಲ್ಲ. ಈ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳು ನ್ಯಾಯಲಯದಲ್ಲಿ ನಿಲ್ಲುವುದಿಲ್ಲ. ಬಿಜೆಪಿಯವರು ಮಾಡಿರುವ ತಪ್ಪನ್ನು ನಾವು ಅಧಿಕಾರಕ್ಕೆ ಬಂದಾಗ ಸರಿ ಪಡಿಸುತ್ತೇವೆ. ಸರ್ವರಿಗೂ ಸಮಪಾಲು, ಸಮಬಾಳು ಮಾದರಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಅವಕಾಶಗಳ ಹಂಚಿಕೆ ಮಾಡಲಾಗುವುದು ಎಂದರು.
ಬಿಜೆಪಿಯವರು ಕೆಲ ಸಮುದಾಯಕ್ಕೆ ಅನ್ಯಾಯ ಮಾಡಿ ತಮ್ಮ ಮನೆಯ ಆಸ್ತಿ ಎಂಬಂತೆ ಹಂಚಿಕೊಂಡಿದ್ದಾರೆ. ಯಾವ ಆಧಾರದ ಮೇಲೆ ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಬಹಿರಂಗ ಪಡಿಸಲಿ. ಯಾವ ಸಮಿತಿ ವರದಿ ನೀಡಿದೆ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರದಿ ನೀಡಿದೆಯೇ ? ಸದಾಶಿವ ಆಯೋಗವನ್ನು ರಚನೆ ಮಾಡಿದ್ದು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ. ಆ ವರದಿ ಏನಿದೆ ಎಂದು ಜನರ ಮುಂದಿಡಿ, ಬೇರೆಯವರಿಗೆ ತೊಂದರೆ ಮಾಡಿ ಮೀಸಲಾತಿ ಹಂಚಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಜೇನುಗೂಡಿಗೆ ಕೈ ಹಾಕಿಲ್ಲ, ಕಡಜದ ಗೂಡಿಗೆ ಕೈ ಇಟ್ಟಿದ್ದಾರೆ ಎಂದು ಹೇಳಿದರು.
ಬಿಜೆಪಿಯ ಭ್ರಷ್ಟ ಆಡಳಿತ ತೊಲಗಿದರೆ ಸಾಕು ಎಂದು ಜನ ಆಕ್ರೋಶಗೊಂಡಿದ್ದಾರೆ. ಬೆಲೆ ಏರಿಕೆ ನಿಯಂತ್ರಿಸಿ, ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಬಿಜೆಪಿ ಹೇಳಿತ್ತು. ಅದ್ಯಾವುದನ್ನು ಮಾಡಿಲ್ಲ. ನಾವು ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಹಾಗೂ ಯುವಶಕ್ತಿ ಯೋಜನೆಗಳ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಭರವಸೆಗಳನ್ನು ನೀಡಿದ್ದೇವೆ ಎಂದರು.
ನಮ್ಮ ಭರವಸೆಗಳನ್ನು ಸುಳ್ಳು ಎಂದು ಹೇಳುವ ಬಿಜೆಪಿ 2013-14ರಲ್ಲಿ ಯಾವ ಭರವಸೆಗಳನ್ನು ನೀಡಿತ್ತು, ಆಗ ಏನೆಂದು ಜಾಹಿರಾತು ನೀಡಿತ್ತು ಎಂದು ತೆಗೆದು ನೋಡಲಿ. ಏಳರಿಂದ ಎಂಟು ಗಂಟೆ ವಿದ್ಯುತ್ ಸರಬರಾಜು, ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಅದನ್ನು ಈಡೇರಿಸಿದೆಯೇ ಎಂದು ಪ್ರಶ್ನಿಸಿದರು.
ಇಂದಿನಿಂದ ಬಿಜೆಪಿ ಸರ್ಕಾರದ ಅಂತ್ಯದ ದಿನಗಳು ಆರಂಭವಾಗಿವೆ, 60 ದಿನದಲ್ಲಿ ಕೊನೆಯಾಗಲಿದೆ. ಕಾಂಗ್ರೆಸ್ ನಿಶ್ಚಲ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ಜನರಿಗೆ ಎಲ್ಲಾ ಹಂತದಲ್ಲೂ ಸುಳ್ಳು ಹೇಳುತ್ತಾ ಬಂದಿದೆ. ಮೀಸಲಾತಿ ಹಂಚಿಕೆಯಷ್ಟೆ ಅಲ್ಲ, ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಬಳಿ ಅಣೆಕಟ್ಟು ಕಟ್ಟುವ ಯೋಜನೆಗೆ ಅನುಮತಿ ನೀಡುವ ವಿಷಯದಲ್ಲೂ ಸುಳ್ಳು ಹೇಳಲಾಗಿದೆ. ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ರಾಜ್ಯ ಸರ್ಕಾರ ಭಾರಿ ಪ್ರಚಾರ ನಡೆಸಿತ್ತು. ಮುಖ್ಯಮಂತ್ರಿಯಾದಿಯಾಗಿ ಎಲ್ಲಾ ಸಚಿವರು ಕೇಂದ್ರವನ್ನು ಕೊಂಡಾಡಿದರು. ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಎರಡು ರಾಜ್ಯಗಳ ವಿವಾದವನ್ನು ಅಂತ್ಯಗೊಳಿಸಿದ್ದಕ್ಕಾಗಿ ಕರ್ನಾಟಕದ ಬಿಜೆಪಿ ನಾಯಕರಿಗೆ ಅಭಿನಂದನೆ ತಿಳಿಸಿದ್ದಾರೆ. ನಿನ್ನೆ ಗೋವಾದ ವಿಧಾನಸಭೆಯಲ್ಲಿ ನೀಡಲಾಗಿರುವ ಲಿಖಿತ ಉತ್ತರದಲ್ಲಿ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ಇರುವುದರಿಂದ ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿ ಪ್ರತಿಹಂತದಲ್ಲೂ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.

lokesh

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

23 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

23 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

23 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

24 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

24 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

24 hours ago