BREAKING NEWS

ಮೋದಿ ಪ್ರಧಾನಿಯಾಗಿ ದೇಶದ ಅತ್ಯಂತ ಶ್ರೀಮಂತರದವರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ : ಸಿಎಂ ಆರೋಪ

  • ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು.
  • ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ ಎನ್ನುವುದು ಸಾಬೀತಾಗಿದೆ : ಸಿಎಂ ಸಿದ್ದರಾಮಯ್ಯ !
  • ಹಾಗಾದ್ರೆ ಮೋದಿಯವರು ಶ್ರೀಮಂತರ ಪರ, ಜನ ಸಾಮಾನ್ಯರ ವಿರೋಧಿ ತಾನೆ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ!
  • ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ ಆರೋಪ

ಚಿತ್ರದುರ್ಗ : ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.

ಚಿತ್ರದುರ್ಗದಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಬೃಹತ್ ಜನಸ್ತೋಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಮೋದಿ ಹತ್ತತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ ಎಂದರು.

ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಅಂದರು.

ನನ್ನ ಕೈಗೆ ಅಧಿಕಾರ ಕೊಡಿ ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು. ಹತ್ತು ವರ್ಷದಲ್ಲಿ ಹದಿನೈದು ಪೈಸೆಯನ್ನೂ ಹಾಕಲಿಲ್ಲ.

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದೋರು ರೈತ ಖರ್ಚು ಮೂರು ಪಟ್ಟು ಮಾಡಿಟ್ಟಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಹಾಗಾದ್ರೆ ಮೋದಿ ಯಾರ ಪರ ಎನ್ನುವುದನ್ನು ಅರ್ಥ ಮಾಡಿಕೊಳ್ಳಿ ಎಂದರು.

ಮೋದಿ ಬಂದ ಮೇಲೆ ಜನ ಸಾಮಾನ್ಯರ, ಮಧ್ಯಮ ವರ್ಗದವರ ಮೇಲೆ ತೆರಿಗೆ ಭಾರ ಹೆಚ್ಚಾಯಿತು. ಉದ್ಯಮಿಗಳ ತೆರಿಗೆ ಭಾರ ಕಡಿಮೆ ಆಯಿತು. ಆದ್ದರಿಂದ ಮೋದಿ ಜನದ್ರೋಹಿ ತಾನೆ ಎಂದು ಪ್ರಶ್ನಿಸಿದರು.

ಹೀಗೆ ಮೋದಿಯವರ ವೈಫಲ್ಯಗಳನ್ನು ಪಟ್ಟಿ ಮಾಡುತ್ತಾ ಹೋದರೆ ಹನುಮಂತನ ಬಾಲದಂತೆ ಬೆಳೆಯುತ್ತದೆ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

1 hour ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

2 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

2 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago