ಚಿತ್ರದುರ್ಗ : ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
ಚಿತ್ರದುರ್ಗದಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಬೃಹತ್ ಜನಸ್ತೋಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೋದಿ ಹತ್ತತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ ಎಂದರು.
ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಅಂದರು.
ನನ್ನ ಕೈಗೆ ಅಧಿಕಾರ ಕೊಡಿ ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು. ಹತ್ತು ವರ್ಷದಲ್ಲಿ ಹದಿನೈದು ಪೈಸೆಯನ್ನೂ ಹಾಕಲಿಲ್ಲ.
ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದೋರು ರೈತ ಖರ್ಚು ಮೂರು ಪಟ್ಟು ಮಾಡಿಟ್ಟಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಹಾಗಾದ್ರೆ ಮೋದಿ ಯಾರ ಪರ ಎನ್ನುವುದನ್ನು ಅರ್ಥ ಮಾಡಿಕೊಳ್ಳಿ ಎಂದರು.
ಮೋದಿ ಬಂದ ಮೇಲೆ ಜನ ಸಾಮಾನ್ಯರ, ಮಧ್ಯಮ ವರ್ಗದವರ ಮೇಲೆ ತೆರಿಗೆ ಭಾರ ಹೆಚ್ಚಾಯಿತು. ಉದ್ಯಮಿಗಳ ತೆರಿಗೆ ಭಾರ ಕಡಿಮೆ ಆಯಿತು. ಆದ್ದರಿಂದ ಮೋದಿ ಜನದ್ರೋಹಿ ತಾನೆ ಎಂದು ಪ್ರಶ್ನಿಸಿದರು.
ಹೀಗೆ ಮೋದಿಯವರ ವೈಫಲ್ಯಗಳನ್ನು ಪಟ್ಟಿ ಮಾಡುತ್ತಾ ಹೋದರೆ ಹನುಮಂತನ ಬಾಲದಂತೆ ಬೆಳೆಯುತ್ತದೆ ಎಂದರು.
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…