BREAKING NEWS

ಮೋದಿ ಪದವಿ : ಹೈಕೋರ್ಟ್ ಆದೇಶ ಮರು ಪರಿಶೀಲನೆಗೆ ಕೇಜ್ರಿವಾಲ್ ಮನವಿ

ನವದೆಹಲಿ: ಪ್ರಧಾನಿ ಮೋದಿ ಪದವಿ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಗುಜರಾತ್ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಪ್ರಧಾನಿ ಪದವಿ ಲಭ್ಯವಿಲ್ಲ ಎಂದು ಕೇಜ್ರಿವಾಲ್ ತಮ್ಮ ಮರುಪರಿಶೀಲನಾ ಅರ್ಜಿಯಲ್ಲಿ ಹೇಳಿದ್ದಾರೆ.

ಕೇಜ್ರಿವಾಲ್ ಅವರ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ ಅಂಗೀಕರಿಸಿದೆ. ಪ್ರಕರಣದ ಮುಂದಿನ ವಿಚಾರಣೆಗೆ ನ್ಯಾಯಾಲಯವು ಜೂನ್ 30 ರಂದು ದಿನಾಂಕವನ್ನು ನಿಗದಿಪಡಿಸಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಆದೇಶದ ಮರುಪರಿಶೀಲನಾ ಅರ್ಜಿಯನ್ನು ಶುಕ್ರವಾರ (ಮೇ 9) ಹೈಕೋರ್ಟ್ ಸ್ವೀಕರಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ವಿಭಾಗೀಯ ಪೀಠ ಪ್ರತಿವಾದಿಗಳಾದ ಗುಜರಾತ್ ವಿಶ್ವವಿದ್ಯಾನಿಲಯ, ಮುಖ್ಯ ಮಾಹಿತಿ ಆಯುಕ್ತರು, ಆಗಿನ ಸಿಐಸಿ ಪ್ರೊಫೆಸರ್ ಎಂ. ಶ್ರೀಧರ್ ಆಚಾರ್ಯುಲು ಮತ್ತು ಯೂನಿಯನ್ ಆಫ್ ಇಂಡಿಯಾಗೆ ತೀರ್ಪು ನೀಡಿದೆ.

ಗುಜರಾತ್ ವಿಶ್ವವಿದ್ಯಾನಿಲಯಕ್ಕಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಸಿದ ಹೇಳಿಕೆಯನ್ನು ಆಧರಿಸಿ ಮಾರ್ಚ್ 31 ರಂದು ನೀಡಿದ ಆದೇಶದಲ್ಲಿ ಪ್ರಧಾನಿ ಮೋದಿಯವರ ಶೈಕ್ಷಣಿಕ ಪದವಿಗಳು ಗುಜರಾತ್ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಲಭ್ಯವಿವೆ ಎಂದು ಹೇಳಲಾಗಿದೆ.

ಸಿಎಂ ಕೇಜ್ರಿವಾಲ್ ತಮ್ಮ ಮರುಪರಿಶೀಲನಾ ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಗುಜರಾತ್ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್‍ನಲ್ಲಿ ಪ್ರಧಾನಿ ಮೋದಿ ಅವರ ಪದವಿ ಇಲ್ಲ ಎಂದು ತಿಳಿಸಿದರು. ಗುಜರಾತ್ ವೆಬ್‍ಸೈಟಿನಲ್ಲಿ ಕೇವಲ ಒಂದು ಆಫೀಸ್ ರಿಜಿಸ್ಟರ್ ಮಾತ್ರ ಲಭ್ಯವಿದೆ. ಇದು ಪ್ರಧಾನಿ ಮೋದಿಯವರ ಮೂಲ ಪದವಿಗಿಂತ ಭಿನ್ನವಾಗಿದೆ ಎಂದಿದ್ದಾರೆ. ಈ ಹಿಂದೆ ಗುಜರಾತ್ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಪ್ರಧಾನಿ ಮೋದಿ ಪದವಿ ಲಭ್ಯವಿದೆ. ಅದನ್ನು ಇಲ್ಲಿಂದ ಪರಿಶೀಲಿಸಬಹುದು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು.

ಇದೀಗ ಸಿಎಂ ಕೇಜ್ರಿವಾಲ್ ಈ ಆಧಾರದ ಮೇಲೆ ಹೈಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ. ಗುಜರಾತ್ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್‍ನಲ್ಲಿ ಪ್ರಧಾನಿ ಮೋದಿ ಅವರ ಪದವಿ ಇಲ್ಲ ಎಂದು ಅವರು ಹೇಳಿದ್ದಾರೆ. ಆದ್ದರಿಂದ, ನ್ಯಾಯಾಲಯದ ಆದೇಶವು ಸ್ಪಷ್ಟವಾಗಿ ತಪ್ಪಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

2016ರಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸಚಿವೆ ಸ್ಮತಿ ಇರಾನಿ ಅವರ ವಿದ್ಯಾರ್ಹತೆ ಕುರಿತು ನಾನಾ ಶಂಕೆಗಳು ವ್ಯಕ್ತವಾಗಿ ಬಿಜೆಪಿ-ಕಾಂಗ್ರೆಸ್ ರಾಜಕೀಯ ಕೆಸರೆರಚಾಟ ನಡೆಸಿದ್ದವು. ಆಗ ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಮಾಹಿತಿ ಬಹಿರಂಗಪಡಿಸುವಂತೆ ಕೇಜ್ರಿವಾಲ್ ಕೇಂದ್ರ ಮಾಹಿತಿ ಹಕ್ಕು ಆಯೋಗಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಂದಿನ ಮುಖ್ಯ ಮಾಹಿತಿ ಹಕ್ಕು ಆಯುಕ್ತ ಸಿ.ಶ್ರೀಧರ ಆಚಾರ್ಯುಲು ಅವರು ಈ ಮಾಹಿತಿ ಬಹಿರಂಗ ಮಾಡುವಂತೆ ಮೋದಿ ಸ್ನಾತಕೋತ್ತರ ಪದವಿ ಪಡೆದ ದೆಹಲಿ ವಿವಿ ಮತ್ತು ಪದವಿ ಪಡೆದ ಗುಜರಾತ್ ವಿವಿಗೆ ಸೂಚಿಸಿದ್ದರು.

ಆದರೆ ಇದನ್ನು ಗುಜರಾತ್ ವಿವಿ ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಕೆಲ ದಿನಗಳಲ್ಲೇ ಮಾಹಿತಿ ಬಹಿರಂಗಕ್ಕೆ ಹೈಕೋರ್ಟ್ ತಡೆ ನೀಡಿತ್ತು. ವಿಚಾರಣೆ ವೇಳೆ ವಾದ ಮಂಡಿಸಿದ ಮೋದಿ ಪರ ವಾದಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವ್ಯಕ್ತಿಯೊಬ್ಬರ ಬೇಜವಾಬ್ದಾರಿಯುತ, ಬಾಲಿಶ ಕುತೂಹಲವು ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕ ಹಿತಾಸಕ್ತಿಯಾಗದು. ಈ ಹಿಂದೆಯೇ ಗುಜರಾತ್ ವಿವಿ ಮೋದಿ ಅವರ ಪದವಿ ಪ್ರಮಾಣಪತ್ರವನ್ನು ವೆಬ್‍ಸೈಟ್‍ಗೆ ಹಾಕಿತ್ತು.

ಈಗ ಮತ್ತೆ ಬಹಿರಂಗಕ್ಕೆ ಬೇಡಿಕೆ ಏಕೆ? ಇದು ಖಾಸಗಿ ವಿಷಯವಾಗಿದ್ದು, ಖಾಸಗಿತನ ಹಕ್ಕಿಗೆ ಧಕ್ಕೆ ಬರುತ್ತದೆ. ಮೇಲಾಗಿ, ಮೋದಿ ವಿದ್ಯಾರ್ಹತೆಯು ಅವರ ಪ್ರಧಾನಿ ಸ್ಥಾನಮಾನದ ಮೇಲೆ ಪರಿಣಾಮವನ್ನೇನೂ ಬೀರದು. ಈ ಅರ್ಜಿಯು ಎದುರಾಳಿಗಳ ವಿರುದ್ಧ ದ್ವೇಷ ಸಾಸುವ ಸಾಧನವಾಗಿ ಹೊರಹೊಮ್ಮಿದೆ ಎಂದು ವಾದಿಸಿದ್ದರು. ಆದರೆ ಕೇಜ್ರಿವಾಲ್ ಪರ ವಕೀಲರು, ಪ್ರಧಾನಿಗಳು ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿದ್ದೇನೆ ಎಂದು ಚುನಾವಣಾ ಅಫಿಡವಿಟ್‍ನಲ್ಲಿ ಹೇಳಿದ್ದಾರೆ. ಡಿಗ್ರಿ ವಿವರ ನಮಗೆ ವೆಬ್‍ಸೈಟ್‍ನಲ್ಲಿ ಸಿಕ್ಕಿಲ್ಲ. ಹೀಗಾಗಿ ಸರ್ಟಿಫಿಕೇಟ್ ಹಾಗೂ ಅಂಕಪಟ್ಟಿ ಮಾಹಿತಿ ಕೇಳಿದ್ದೇವೆ ಎಂದು ವಾದಿಸಿದ್ದರು.

andolanait

Recent Posts

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

23 mins ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

51 mins ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

59 mins ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

1 hour ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

2 hours ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

2 hours ago