BREAKING NEWS

ಮೋದಿ ವಿಷ ಸರ್ಪ ಇದ್ದಂಗೆ ನೆಕ್ಕಿದ್ರೆ ಸತ್ತ : ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಗದಗ : ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್ ಪರ‌ ಮತಯಾಚನೆ ಮಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ, ಗದಗ ಜಿಲ್ಲೆಯ‌ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಭಾಷಣದ ವೇಳೆ, ಪ್ರಧಾನಿ ಮೋದಿಯನ್ನು ವಿಷ ಸರ್ಪಕ್ಕೆ ಹೋಲಿಸಿದ್ದಾರೆ. ನಿಮ್ಮ ಮನೆಯಲ್ಲಿ ದೇಶಕ್ಕಾಗಿ‌ ಒಂದೂ‌ ನಾಯಿ‌ ಕೂಡ ಸತ್ತಿಲ್ಲ. ದೇಶಕ್ಕೆ ಬಿಜೆಪಿಯವರ ಕೊಡಿಗೆ ಏನು ಅಂತಾ ಹೇಳಲಿ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಉಚಿತ ಅಕ್ಕಿ ಕೊಡುವ‌ ಕೆಲಸ ಮಾಡಿದ್ದು ಸೋನಿಯಾ ಗಾಂಧಿ. ನರೇಗಾ ಮಾಡಿದ್ದು ನಾವು. ರಾಜ್ಯದಲ್ಲಿ ಬಿಜೆಪಿ ಮಾಡಿದ ಸಾಧನೆ ಅಂದ್ರೆ 40% ಕಮಿಷನ್​​. ಇಂತಹವರನ್ನು ಮೋದಿ ತನ್ನ ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಒಬ್ಬ ಪ್ರಧಾನಿಯಾಗಿ ಹಳ್ಳಿ, ತಾಲೂಕಿಗೆ ಬಂದು ಓಡಾಡುತ್ತಿದ್ದಾರೆ. ಮೋದಿ‌ ಮುಖ ನೋಡಿ‌ ಮತ ಹಾಕಿ ಅಂತೀರಾ. ನೀವು ರಾಜ್ಯದ ಮುಖ್ಯಮಂತ್ರಿ ಆಗ್ತೀರಾ, ಮುನ್ಸಿಪಾಲ್ಟಿ, ಮೇಯರ್​, ಸಿಎಂ, ಪ್ರಧಾನಿ ಎಲ್ಲವೂ ನೀವೇ ಆಗ್ತೀರಾ. ಆಸೆ ಬುರುಕ ಮೋದಿ ಎಂದು ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಮೋದಿ ದೊಡ್ಡ ಸುಳ್ಳುಗಾರ : ಕಪ್ಪು ಹಣ ತಂದು 15 ಲಕ್ಷ ಕೊಡ್ತಿನಿ ಅಂದ್ರು. ಇನ್ನೂ ಕೊಟ್ಟಿಲ್ಲ. ಎಲ್ಲ ಹಣ ಅದಾನಿ ಹತ್ತಿರ ಇಟ್ಟಾರೆನೋ. ಉದ್ಯೋಗ ಕೊಟ್ಟಿಲ್ಲ. 18 ಕೋಟಿ ಯುವಕರಿಗೆ ನೌಕರಿ‌ ಕೊಡಬೇಕಿತ್ತು. ಸುಳ್ಳಿನ ಸರ್ದಾರ. ಹಗಲಿಗೆ ರಾತ್ರಿ, ರಾತ್ರಿಗೆ ಹಗಲು ಅಂತಾನೆ. ಡಬಲ್ ಇಂಜಿನ ಎರಡು ಕಡೆ ಫೇಲ್ ಆಗಿದೆ. ಡಬಲ್ ಇಂಜೀನ್ ಯಾಕೇ ನೌಕರಿ ಕೊಡ್ತಿಲ್ಲ. ಮೋದಿ ದೊಡ್ಡ ಸುಳ್ಳುಗಾರ. ನಮ್ಮ ಸರ್ಕಾರ ಇದ್ದಾಗ ದೊಡ್ಡ ದೊಡ್ಡ ಡ್ಯಾಂ, ದೊಡ್ಡ ದೊಡ್ಡ ನೀರಾವರಿ ಯೋಜನೆ ಮಾಡಿದ್ದೇವೆ. ಒಂಬತ್ತು ವರ್ಷದಲ್ಲಿ‌ ಮೋದಿ ಏನ್ ಮಾಡಿದ್ದಾರೆ ಅಂತ ಮಲ್ಲಿಕಾರ್ಜುನ ಖರ್ಗೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉರಿಬಿಸಿಲಿನಲ್ಲಿ ಜನ ನಿಂತಿದ್ದನ್ನು ನೋಡಿದ್ರೆ ಬದಲಾವಣೆ ಪಕ್ಕಾ : ಕರ್ನಾಟಕ ಚುನಾವಣೆ ಗೆದ್ದರೆ ಇಡೀ ದೇಶದಲ್ಲೇ ಗೆಲ್ಲುತ್ತೇವೆ. ದೇಶದಲ್ಲಿ ಮತ್ತೆ ಬದಲಾವಣೆ ಆಗಲಿದೆ. ಉರಿಬಿಸಿಲಿನಲ್ಲಿ ಜನ ನಿಂತಿದ್ದನ್ನು ನೋಡಿದ್ರೆ ಬದಲಾವಣೆ ಪಕ್ಕಾ ಅನಿಸುತ್ತೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಭ್ರಷ್ಟಾಚಾರದ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನರೇಗಲ್​​ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

lokesh

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

1 hour ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

1 hour ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

2 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

3 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

6 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

7 hours ago