BREAKING NEWS

ಮೋದಿ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಒಪ್ಪುತ್ತಿಲ್ಲ: ಸಿಎಂ ಆಕ್ರೋಶ

ಬೆಂಗಳೂರು : ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ಆಗಿದೆ. ಪ್ರದಾನಿ ಮೋದಿ ಒಬ್ಬರ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಸಾಲದ ಪ್ರಮಾಣವನ್ನು ಬಿಚ್ಚಿಟ್ಟರು.

ವಿಧಾನ ಪರಿಷತ್ ನಲ್ಲಿ 2023-24 ನೇ ಆಯವ್ಯಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಮೋದಿ ಪ್ರಧಾನಿ ಆಗುವವರೆಗೂ ಇದ್ದ ದೇಶದ ಸಾಲ ಇದ್ದದ್ದು ಕೇವಲ 53 ಲಕ್ಷ ಕೋಟಿ ಸಾಲವನ್ನು 170 ಲಕ್ಷ ಕೋಟಿಗೆ ಏರಿಸಿದ್ದೇ ಮೋದಿಯವರ ಸಾಧನೆ.

ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಅವರು ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುತ್ತಾರೆ.

ಕಚ್ಚಾತೈಲದ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್-ಡೀಸೆಲ್ ಬೆಲೆ ಈ ಮಟ್ಟಕ್ಕೆ ಏರಿಸಿದರೆ, ಹಾಲು-ಮೊಸರು-ಮಜ್ಜಿಗೆ- ಮಂಡಕ್ಕಿ ಮೇಲೂ ಜಿಎಸ್ ಟಿ ಹಾಕಿದರೆ ಬಡವರು, ಮಧ್ಯಮವರ್ಗದವರ ಗತಿ ಏನು ಎಂದು ಪ್ರಶ್ನಿಸಿದರು.

ಟೆಕ್ನಿಕಲಿ ಅಲ್ಲಿದ್ದಾರೆ ಅಷ್ಟೆ: ಮುಖ್ಯಮಂತ್ರಿಗಳು ಉತ್ತರ ನೀಡುವಾಗ ಎದುರು ಸಾಲಿನಲ್ಲಿ ಜೆಡಿಎಸ್ ನ ಮರಿತಿಬ್ಬೇಗೌಡ ಮತ್ತು ಬಿಜೆಪಿಯ ಹೆಚ್.ವಿಶ್ವನಾಥ್ ಮಾತ್ರ ಕುಳಿತು ಉಳಿದವರೆಲ್ಲಾ ಬಹಿಷ್ಕರಿಸಿದ್ದರು. ಇದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಮರಿತಿಬ್ಬೇಗೌಡರು ಟೆಕ್ನಿಕಲಿ ಜೆಡಿಎಸ್ ನಲ್ಲಿದ್ದಾರೆ ಆದರೆ ವಾಸ್ತವವಾಗಿ ಅವರಿಗೆ ವಿರುದ್ಧವಿದ್ದಾರೆ. ಹೆಚ್.ವಿಶ್ವನಾಥ್ ಕೂಡ ಟೆಕ್ನಿಕಲಿ ಬಿಜೆಪಿಯಲ್ಲಿದ್ದಾರೆ. ಆದರೆ ವಾಸ್ತವವಾಗಿ ಬಿಜೆಪಿಗೆ ವಿರುದ್ಧವಿದ್ದಾರೆ ಎಂದು ಟೀಕಿಸಿದರು.

ಭಾಷಣದ ಹೈಲೈಟ್ಸ್:

* ಮಹಾತ್ನಗಾಂಧಿ ಜೀವನ ಸಂದೇಶವೇ ಸತ್ಯ-ಅಹಿಂಸೆ ಆಗಿತ್ತು. ಸದಾ ಸುಳ್ಳು ಹೇಳುವ ಬಿಜೆಪಿಯವರು ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಕುಳಿತಿದ್ದಾರೆ*

*1949 ನವೆಂಬರ್ 25 ರಂದು ಅಂಬೇಡ್ಕರ್ ಅವರು ತಮ್ಮ ಐತಿಹಾಸಿಕ ಭಾಷಣದಲ್ಲಿ, “ನಮ್ಮ ಸಂವಿಧಾನ ಜನವರಿ 26 ರಿಂದ ಜಾರಿಗೆ ಬರುತ್ತದೆ. ಆದರೆ ಸಾಮಾಜಿಕ-ಆರ್ಥಿಕ‌ ಅಸಮಾನತೆ ದೇಶದಲ್ಲಿದೆ. ಈ ಅಸಮಾನತೆಯನ್ನು ಅಳಿಸದೇ ಹೋದರೆ ಜನರೇ ಈ ಸ್ವಾತಂತ್ರ್ಯ ಸೌಧವನ್ನು ಸುಟ್ಟು ಭಸ್ಮ ಮಾಡುತ್ತಾರೆ” ಎಂದಿದ್ದರು.‌ ಈ ಕಾರಣಕ್ಕೇ ಅಸಮಾನತೆ, ತಾರತಮ್ಯವನ್ನು ಅಳಿಸುವ ದೃಷ್ಟಿಯಿಂದ ಬಜೆಟ್ ನಲ್ಲಿ ಸರ್ವರಿಗೂ ಸಮಾನ ಅವಕಾಶ ಸಿಗುವ ಆಶಯದ ಕಾರ್ಯಕ್ರಮಗಳಿಗೆ ಮಹತ್ವ ನೀಡಿದ್ದೇನೆ.

* ಬಸವಣ್ಣನವರ ದಾಸೋಹ ಮತ್ತು ಕಾಯಕ ಸಂಸ್ಕೃತಿಯ ಆಶಯ ನಮ್ಮ ಆಯವ್ಯಯದಲ್ಲಿದೆ. ಬಿಜೆಪಿಯವರು ಬಸವ ವಿರೋಧಿಗಳು.

* ಬೆಂಕಿ ಹಚ್ಚುವುದೇ ಬಿಜೆಪಿ ಕೆಲಸ. ಅವರು ಮಣಿಪುರವನ್ಮೂ ಬಿಡಲ್ಲ, ಕರ್ನಾಟಕವನ್ನೂ ಬಿಡಲ್ಲ. ಬೆಂಕಿ ಹಚ್ಚುತಾರೆ ಎಂದರು.

* ಶ್ರಮಿಕರ,ಬಡವರ ಹಣ ಕಿತ್ತು ಶ್ರೀಮಂತ ಕಾರ್ಪೋರೇಟ್ ಗಳಿಗೆ ಕೊಡುವುದು ಬಿಜೆಪಿಯ ಆರ್ಥಿಕತೆ. ಈ ಕಾರಣಕ್ಕೇ ಹಾಲು, ಮೊಸರು, ಮಂಡಕ್ಕಿ ಮೇಲೂ ತೆರಿಗೆ ಹಾಕಿದ್ದಾರೆ. ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದಾರೆ. ಆದರೆ, ರೈತರ ಸಾಲ ಮನ್ನಾ ಮಾಡಿ ಎಂದರೆ ಒಪ್ಪುತ್ತಿಲ್ಲ.

andolanait

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

6 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

7 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

11 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

11 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

11 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

11 hours ago