BREAKING NEWS

ಮೋದಿ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಒಪ್ಪುತ್ತಿಲ್ಲ: ಸಿಎಂ ಆಕ್ರೋಶ

ಬೆಂಗಳೂರು : ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ಆಗಿದೆ. ಪ್ರದಾನಿ ಮೋದಿ ಒಬ್ಬರ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಸಾಲದ ಪ್ರಮಾಣವನ್ನು ಬಿಚ್ಚಿಟ್ಟರು.

ವಿಧಾನ ಪರಿಷತ್ ನಲ್ಲಿ 2023-24 ನೇ ಆಯವ್ಯಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಮೋದಿ ಪ್ರಧಾನಿ ಆಗುವವರೆಗೂ ಇದ್ದ ದೇಶದ ಸಾಲ ಇದ್ದದ್ದು ಕೇವಲ 53 ಲಕ್ಷ ಕೋಟಿ ಸಾಲವನ್ನು 170 ಲಕ್ಷ ಕೋಟಿಗೆ ಏರಿಸಿದ್ದೇ ಮೋದಿಯವರ ಸಾಧನೆ.

ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಅವರು ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುತ್ತಾರೆ.

ಕಚ್ಚಾತೈಲದ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್-ಡೀಸೆಲ್ ಬೆಲೆ ಈ ಮಟ್ಟಕ್ಕೆ ಏರಿಸಿದರೆ, ಹಾಲು-ಮೊಸರು-ಮಜ್ಜಿಗೆ- ಮಂಡಕ್ಕಿ ಮೇಲೂ ಜಿಎಸ್ ಟಿ ಹಾಕಿದರೆ ಬಡವರು, ಮಧ್ಯಮವರ್ಗದವರ ಗತಿ ಏನು ಎಂದು ಪ್ರಶ್ನಿಸಿದರು.

ಟೆಕ್ನಿಕಲಿ ಅಲ್ಲಿದ್ದಾರೆ ಅಷ್ಟೆ: ಮುಖ್ಯಮಂತ್ರಿಗಳು ಉತ್ತರ ನೀಡುವಾಗ ಎದುರು ಸಾಲಿನಲ್ಲಿ ಜೆಡಿಎಸ್ ನ ಮರಿತಿಬ್ಬೇಗೌಡ ಮತ್ತು ಬಿಜೆಪಿಯ ಹೆಚ್.ವಿಶ್ವನಾಥ್ ಮಾತ್ರ ಕುಳಿತು ಉಳಿದವರೆಲ್ಲಾ ಬಹಿಷ್ಕರಿಸಿದ್ದರು. ಇದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಮರಿತಿಬ್ಬೇಗೌಡರು ಟೆಕ್ನಿಕಲಿ ಜೆಡಿಎಸ್ ನಲ್ಲಿದ್ದಾರೆ ಆದರೆ ವಾಸ್ತವವಾಗಿ ಅವರಿಗೆ ವಿರುದ್ಧವಿದ್ದಾರೆ. ಹೆಚ್.ವಿಶ್ವನಾಥ್ ಕೂಡ ಟೆಕ್ನಿಕಲಿ ಬಿಜೆಪಿಯಲ್ಲಿದ್ದಾರೆ. ಆದರೆ ವಾಸ್ತವವಾಗಿ ಬಿಜೆಪಿಗೆ ವಿರುದ್ಧವಿದ್ದಾರೆ ಎಂದು ಟೀಕಿಸಿದರು.

ಭಾಷಣದ ಹೈಲೈಟ್ಸ್:

* ಮಹಾತ್ನಗಾಂಧಿ ಜೀವನ ಸಂದೇಶವೇ ಸತ್ಯ-ಅಹಿಂಸೆ ಆಗಿತ್ತು. ಸದಾ ಸುಳ್ಳು ಹೇಳುವ ಬಿಜೆಪಿಯವರು ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಕುಳಿತಿದ್ದಾರೆ*

*1949 ನವೆಂಬರ್ 25 ರಂದು ಅಂಬೇಡ್ಕರ್ ಅವರು ತಮ್ಮ ಐತಿಹಾಸಿಕ ಭಾಷಣದಲ್ಲಿ, “ನಮ್ಮ ಸಂವಿಧಾನ ಜನವರಿ 26 ರಿಂದ ಜಾರಿಗೆ ಬರುತ್ತದೆ. ಆದರೆ ಸಾಮಾಜಿಕ-ಆರ್ಥಿಕ‌ ಅಸಮಾನತೆ ದೇಶದಲ್ಲಿದೆ. ಈ ಅಸಮಾನತೆಯನ್ನು ಅಳಿಸದೇ ಹೋದರೆ ಜನರೇ ಈ ಸ್ವಾತಂತ್ರ್ಯ ಸೌಧವನ್ನು ಸುಟ್ಟು ಭಸ್ಮ ಮಾಡುತ್ತಾರೆ” ಎಂದಿದ್ದರು.‌ ಈ ಕಾರಣಕ್ಕೇ ಅಸಮಾನತೆ, ತಾರತಮ್ಯವನ್ನು ಅಳಿಸುವ ದೃಷ್ಟಿಯಿಂದ ಬಜೆಟ್ ನಲ್ಲಿ ಸರ್ವರಿಗೂ ಸಮಾನ ಅವಕಾಶ ಸಿಗುವ ಆಶಯದ ಕಾರ್ಯಕ್ರಮಗಳಿಗೆ ಮಹತ್ವ ನೀಡಿದ್ದೇನೆ.

* ಬಸವಣ್ಣನವರ ದಾಸೋಹ ಮತ್ತು ಕಾಯಕ ಸಂಸ್ಕೃತಿಯ ಆಶಯ ನಮ್ಮ ಆಯವ್ಯಯದಲ್ಲಿದೆ. ಬಿಜೆಪಿಯವರು ಬಸವ ವಿರೋಧಿಗಳು.

* ಬೆಂಕಿ ಹಚ್ಚುವುದೇ ಬಿಜೆಪಿ ಕೆಲಸ. ಅವರು ಮಣಿಪುರವನ್ಮೂ ಬಿಡಲ್ಲ, ಕರ್ನಾಟಕವನ್ನೂ ಬಿಡಲ್ಲ. ಬೆಂಕಿ ಹಚ್ಚುತಾರೆ ಎಂದರು.

* ಶ್ರಮಿಕರ,ಬಡವರ ಹಣ ಕಿತ್ತು ಶ್ರೀಮಂತ ಕಾರ್ಪೋರೇಟ್ ಗಳಿಗೆ ಕೊಡುವುದು ಬಿಜೆಪಿಯ ಆರ್ಥಿಕತೆ. ಈ ಕಾರಣಕ್ಕೇ ಹಾಲು, ಮೊಸರು, ಮಂಡಕ್ಕಿ ಮೇಲೂ ತೆರಿಗೆ ಹಾಕಿದ್ದಾರೆ. ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದಾರೆ. ಆದರೆ, ರೈತರ ಸಾಲ ಮನ್ನಾ ಮಾಡಿ ಎಂದರೆ ಒಪ್ಪುತ್ತಿಲ್ಲ.

andolanait

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago