ನವದೆಹಲಿ : ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಸರಕಾರವು ನಿರೀಕ್ಷೆಯಂತೆಯೇ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ವಿರುದ್ಧ ಗೆಲುವು ದಾಖಲಿಸಿದೆ.
ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಾಗ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿವೆ.
“ಅವರು ನಮ್ಮನ್ನು ತೆಗಳುತ್ತಾರೆ. ಆದರೆ, ಅವರಿಗೆ ನಮ್ಮ ಮಾತನ್ನು ಕೇಳಿಸಿಕೊಳ್ಳುವ ವ್ಯವಧಾನವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳನ್ನು ಟೀಕಿಸಿದ್ದಾರೆ.
ಬುಧವಾರ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ, ದೇಶದ ಜನರು ನಮ್ಮ ಸರಕಾರದ ಮೇಲೆ ನಂಬಿಕೆಯನ್ನು ಮತ್ತೆ ಮತ್ತೆ ತೋರಿಸಿದ್ದಾರೆ. ದೇಶದ ಕೋಟ್ಯಂತರ ಜನರಿಗೆ ಕೃತಜ್ಞತೆ ಸಲ್ಲಿಸಲು ನಾನು ಇಲ್ಲಿದ್ದೇನೆ ಎಂದು ಹೇಳಿದರು.
ಮಣಿಪುರ ವಿಚಾರದಲ್ಲಿ ಪ್ರಧಾನಿ ಮಾತನಾಡಬೇಕೆಂದು ಒತ್ತಾಯಿಸಿ ವಿಪಕ್ಷಗಳ ಒಕ್ಕೂಟ ಅವಿಶ್ವಾಸ ನಿರ್ಣಯ ಮಂಡಿಸಿತ್ತು.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…