BREAKING NEWS

ಅವಿಶ್ವಾಸ ನಿರ್ಣಯ ಗೆದ್ದ ಮೋದಿ ಸರಕಾರ

ನವದೆಹಲಿ : ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಸರಕಾರವು ನಿರೀಕ್ಷೆಯಂತೆಯೇ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ವಿರುದ್ಧ ಗೆಲುವು ದಾಖಲಿಸಿದೆ.

ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಾಗ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿವೆ.

“ಅವರು ನಮ್ಮನ್ನು ತೆಗಳುತ್ತಾರೆ. ಆದರೆ, ಅವರಿಗೆ ನಮ್ಮ ಮಾತನ್ನು ಕೇಳಿಸಿಕೊಳ್ಳುವ ವ್ಯವಧಾನವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳನ್ನು ಟೀಕಿಸಿದ್ದಾರೆ.

ಬುಧವಾರ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ, ದೇಶದ ಜನರು ನಮ್ಮ ಸರಕಾರದ ಮೇಲೆ ನಂಬಿಕೆಯನ್ನು ಮತ್ತೆ ಮತ್ತೆ ತೋರಿಸಿದ್ದಾರೆ. ದೇಶದ ಕೋಟ್ಯಂತರ ಜನರಿಗೆ ಕೃತಜ್ಞತೆ ಸಲ್ಲಿಸಲು ನಾನು ಇಲ್ಲಿದ್ದೇನೆ ಎಂದು ಹೇಳಿದರು.

ಮಣಿಪುರ ವಿಚಾರದಲ್ಲಿ ಪ್ರಧಾನಿ ಮಾತನಾಡಬೇಕೆಂದು ಒತ್ತಾಯಿಸಿ ವಿಪಕ್ಷಗಳ ಒಕ್ಕೂಟ ಅವಿಶ್ವಾಸ ನಿರ್ಣಯ ಮಂಡಿಸಿತ್ತು.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

7 hours ago