BREAKING NEWS

ಮೋದಿ ಸರ್ಕಾರ ಆರ್ಥಿಕ ಬೆಳವಣಿಗೆಯ ದತ್ತಾಂಶಗಳನ್ನು ತಿರುಚುತ್ತಿದೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ದೇಶದಲ್ಲಿ ಪ್ರತಿ ಮನೆಯ ಆರ್ಥಿಕ ಉಳಿತಾಯ 50 ವಷಗಳ ಹಿಂದಿನ ಪರಿಸ್ಥಿತಿಗಿಂತಲೂ ಕೆಳಮಟ್ಟಕ್ಕೆ ಕುಸಿದಿದ್ದು, ದೈನಂದಿನ ಅಗತ್ಯತೆಗಳ ವೆಚ್ಚ ದುಬಾರಿಯಾಗಿದೆ. ಇದನ್ನು ಮರೆಮಾಚಲು ಕೇಂದ್ರ ಬಿಜೆಪಿ ಸರ್ಕಾರ ನಾನಾ ವಿವಾದಗಳನ್ನು ಸೃಷ್ಟಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.

ಮೋದಿ ಅವರ ಸರ್ಕಾರ ಆರ್ಥಿಕ ಬೆಳವಣಿಗೆಯ ದತ್ತಾಂಶಗಳನ್ನು ತಿರುಚುತ್ತಿದೆ ಎಂದು ಕಿಡಿಕಾರಿದ್ದಾರೆ.

ವೈದ್ಯಕೀಯ ಕ್ಷೇತ್ರದ ವೆಚ್ಚಗಳು ಏಷ್ಯಾ ದೇಶಗಳಲ್ಲೇ ಭಾರತದಲ್ಲಿ ಅತ್ಯಧಿಕವಾಗಿವೆ. ಕಳೆದ 5 ವರ್ಷಗಳಲ್ಲಿ ಚಿಕಿತ್ಸೆಯ ವೆಚ್ಚ ದುಪ್ಪಟ್ಟುಗೊಂಡಿದೆ. ಶಿಕ್ಷಣ ಕ್ಷೇತ್ರದ ವೆಚ್ಚಗಳು ಶೇ.12 ಕ್ಕಿಂತ ದುಬಾರಿಯಾಗಿವೆ ಎಂದು ವಿವರಿಸಿದ್ದಾರೆ.

ದೇಶದ ಶೇ. 74 ರಷ್ಟು ಜನ ಆರೋಗ್ಯಕರ ಆಹಾರಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ತರಕಾರಿಗಳ ಬೆಲೆ ಶೇ. 24 ರಷ್ಟು ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮನೆಗಳ ನಿವ್ವಳ ಆಸ್ತಿ 2021 ರಲ್ಲಿ 22.8 ರಷ್ಟು ಶತಕೋಟಿಯಷ್ಟಿತ್ತು. 2022 ರಲ್ಲಿ ಅದು 16.96 ಶತಕೋಟಿ, ಪ್ರಸಕ್ತ ಸಾಲಿಗೆ 13.76 ಶತಕೋಟಿಗೆ ಕುಸಿದಿದೆ. ಮೋದಿ ಸರ್ಕಾರ ಈ ದತ್ತಾಂಶಗಳನ್ನ ಮರೆಮಾಚುತ್ತಿದೆ. ಅದೇ ಕಾರಣಕ್ಕಾಗಿ ಭಾರತ/ಇಂಡಿಯಾ, ಸನಾತನ ಧರ್ಮ ವಿವಾದಗಳು, ಹೊಸ ಸಂಸತ್ ಉದ್ಘಾಟನೆ, ಜಿ20 ಸಮ್ಮೇಳನದಂತಹ ವಿಷಯಗಳನ್ನು ವೈಭವೀಕರಿಸಲಾಗುತ್ತದೆ. ಈ ಎಲ್ಲಾ ವಿಷಯಗಳು ಮೂಲ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಗಮನ ಸೆಳೆಯುವಂತೆ ಮಾಡುತ್ತಿವೆ ಎಂದು ಆರೋಪಿಸಿದರು.

ವೈದ್ಯಕೀಯ, ಶಿಕ್ಷಣದ ವೆಚ್ಚ ದುಬಾರಿಯಾಗಿರುವುದು ತರಕಾರಿ ಬೆಲೆ ಹೆಚ್ಚಳ, ಗೃಹ ಆದಾಯ ಕುಸಿತದಂತಹ ಸಮಸ್ಯೆಗಳ ಬಗ್ಗೆ ಬಿಜೆಪಿ ಸರ್ಕಾರ ಎಂದಿಗೂ ಬಾಯಿ ಬಿಡುತ್ತಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

andolanait

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

2 hours ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

4 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

5 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

7 hours ago